ಪ್ರತಿಭಾವಂತ ಮಲಯಾಳಂ ನಿರ್ದೇಶಕ ಸಚ್ಚಿ ಇನ್ನಿಲ್ಲ
ತ್ರಿಶೂರ್, ಜೂನ್ 18: ಮಲಯಾಳಂ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕಕೆ.ಆರ್.ಸಚ್ಚಿದಾನಂದ್ ಅಲಿಯಾಸ್ ಸಚ್ಚಿ(Sachy) ಜೂನ್ 18ರಂದು ನಿಧನರಾಗಿದ್ದಾರೆ. ಇತ್ತೀಚೆಗೆ ಹೃದಯಾಘಾತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸಚ್ಚಿ ಅವರು ಚಿಕಿತ್ಸೆಗೆ ಸ್ಪಂದಿಸಲಿಲ್ಲ, ಮತ್ತೊಮ್ಮೆ ತೀವ್ರ ಹೃದಯ ಸ್ತಂಬನವಾಗಿ ಮೃತಪಟ್ಟಿದ್ದಾರೆ ಎಂದು ತ್ರಿಶೂರ್ ಆಸ್ಪತ್ರೆ ಮೂಲಗಳು ತಿಳಿಸಿವೆ.
ಅಯ್ಯಪ್ಪನುಂ-ಕೋಶಿಯುಂ ಎಂಬ ಸೂಪರ್ ಹಿಟ್ ಚಿತ್ರವಲ್ಲದೆ ಅನಾರ್ಕಲಿ ಎಂಬ ಪ್ರೇಮ ಕಥೆಯನ್ನು ನಿರ್ದೇಶಿಸಿದ್ದರು. ಸಮಾಜಕ್ಕೆ ಸಂದೇಶ ಸಾರುವ ಡ್ರೈವಿಂಗ್ ಲೈಸನ್ಸ್ ಕೂಡಾ ಸಚ್ಚಿಯ ಕೈಚಳಕ ಹೊಂದಿತ್ತು.
ಹೃದಯಸ್ಪರ್ಶಿ ಕಥೆಗಾರ, ನಿರ್ದೇಶಕ ಸಚ್ಚಿದಾನಂದ ಇನ್ನು ನೆನಪು ಮಾತ್ರ
ತ್ರಿಶೂರಿನ ಜ್ಯುಬಿಲಿ ಮಿಷನ್ ಆಸ್ಪತ್ರೆಯಲ್ಲಿ ನಿಧನರಾದ 48 ವರ್ಷ ವಯಸ್ಸಿನ ಸಚ್ಚಿ ಅವರು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ವಕೀಲ, ಕವಿ, ರಂಗಭೂಮಿ ಕಲಾವಿದ, ಕಥೆಗಾರ, ಸಂಭಾಷಣೆಗಾರ, ನಿರ್ದೇಶಕ, ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ಸಚ್ಚಿ ಬಹುಮುಖ ಪ್ರತಿಭೆಯಾಗಿದ್ದರು. ಕೇರಳ ಹೈಕೋರ್ಟಿನಲ್ಲಿ 8 ವರ್ಷಗಳ ಕಾಲ ಕ್ರಿಮಿನಲ್ ಲಾಯರ್ ಆಗಿದ್ದರು.

ಎರಡು ಮೂರು ದಿನಗಳ ಹಿಂದೆ ಸೊಂಟದ ಭಾಗದಲ್ಲಿ ದೊಡ್ಡ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ, ನಂತರ ಚೇತರಿಸಿಕೊಳ್ಳಲಿಲ್ಲ ಎಂದು ತಿಳಿದು ಬಂದಿದೆ. ಸುಂದರ ಚಿತ್ರಗಳನ್ನು ಕೊಟ್ಟ ಸಚ್ಚಿ ಅವರ ಮೆದುಳಿಗೂ ರಕ್ತ ಪೂರೈಕೆ ಸ್ಥಗಿತವಾಗಿ ಸಮಸ್ಯೆ ಎದುರಾಗಿತ್ತು. ಕಳೆದೆರಡು ದಿನಗಳಿಂದ ವೆಂಟಿಲೇಟರ್ ನೆರವಿನಲ್ಲಿ ಉಸಿರಾಟ ನಡೆಸಿದ್ದಾರೆ.
ಪೃಥ್ವಿರಾಜ್ ಸುಕುಮಾರನ್ ನೆಚ್ಚಿನ ನಿರ್ದೇಶಕರಾಗಿದ್ದ ಸಚ್ಚಿ ನಿರ್ದೇಶನದ ಅಯ್ಯಪ್ಪನುಂ-ಕೋಶಿಯುಂ ಚಿತ್ರವು ಹಿಂದಿ, ತೆಲುಗು, ತಮಿಳು ಭಾಷೆಗಳಲ್ಲಿ ರೀಮೇಕ್ ಆಗುತ್ತಿದೆ. ಕನ್ನಡದಲ್ಲಿಯೂ ಸಿನಿಮಾವನ್ನು ರೀಮೇಕ್ ಮಾಡುವ ಸಾಧ್ಯತೆ ಇದೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು












Click it and Unblock the Notifications