ಮಲಯಾಳ ಚಿತ್ರರಂಗದ ಯುವ ನಿರ್ದೇಶಕಿ ಶವವಾಗಿ ಪತ್ತೆ
ತಿರುವನಂತಪುರಂ (ಕೇರಳ), ಫೆಬ್ರವರಿ 25: ಮಲಯಾಳಂ ಚಿತ್ರರಂಗದ ಯುವ ನಿರ್ದೇಶಕಿ ಕೇರಳದ ತಿರುವನಂತಪುರಂನಲ್ಲಿ ಇರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ. ಇಪ್ಪತ್ತೆಂಟು ವರ್ಷದ ನಯನಾ ಸೂರ್ಯನ್ ಮಲಯಾಳಂ ಚಿತ್ರರಂಗದ ಹಲವಾರು ಹೆಸರಾಂತ ನಿರ್ದೇಶಕರ ಜತೆಗೆ ಸಹ ನಿರ್ದೇಶಕಿಯಾಗಿ ಕೆಲಸ ಮಾಡಿದ್ದರು.
ಅವರಿದ್ದ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ನಂತರವೇ ಕಾರಣ ಗೊತ್ತಾಗಲಿದೆ. ಕಳೆದ ಕೆಲ ಸಮಯದಿಂದ ಡಯಾಬಿಟೀಸ್ (ಮಧುಮೇಹ) ಚಿಕಿತ್ಸೆ ಪಡೆಯುತ್ತಿದ್ದರು. ನಯನಾ ತಾಯಿ ಹಲವು ಬಾರಿ ಮೊಬೈಲ್ ಗೆ ಕರೆ ಮಾಡಿದ್ದಾರೆ. ಆದರೆ ಅದನ್ನು ಸ್ವೀಕರಿಸಿದಿದ್ದಾಗ ಆಕೆಯ ಸ್ನೇಹಿತರಿಗೆ ತಿಳಿಸಿದ್ದಾರೆ. ಅಪಾರ್ಟ್ ಮೆಂಟ್ ನ ಬೆಡ್ ರೂಮ್ ನಲ್ಲಿ ಶವ ಪತ್ತೆಯಾಗಿದೆ.
'ಕ್ರಾಸ್ ವರ್ಡ್' ಎಂಬ ಸಿನಿಮಾದ ಮೂಲಕ ನಯನಾ ಅವರು ಸ್ವತಂತ್ರ ನಿರ್ದೇಶಕಿ ಆದರು. ಹತ್ತು ಕತೆಗಳನ್ನು ಒಳಗೊಂಡಿದ್ದ ಆ ಸಿನಿಮಾದಲ್ಲಿ 'ಪಕ್ಷಿಕಳುದೆ ಮನನಂ' ಎಂಬುದಕ್ಕೆ ಚಿತ್ರಕತೆ ಮಾಡಿಕೊಂಡು, ನಿರ್ದೇಶನ ಮಾಡಿದ್ದರು. ಅದಕ್ಕೂ ಮುನ್ನ ಲೆನಿನ್ ರಾಜೇಂದ್ರನ್, ಕಮಲ್, ಜೀತು ಜೋಸೆಫ್ ಹಾಗೂ ಡಾ.ಬಿಜುರಂಥ ಹೆಸರಾಂತ ನಿರ್ದೇಶಕರಿಗೆ ಸಹ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸಿದ್ದರು.

ನಯನಾ ಅವರು ಹಲವು ಜಾಹೀರಾತು ಹಾಗೂ ವೇದಿಕೆ ಕಾರ್ಯಕ್ರಮಗಳನ್ನು ದೇಶದ ಹೊರಗೂ ನಿರ್ದೇಶಿಸಿದ್ದರು. ನಯನಾ ಅವರ ಆಪ್ತ ಮೂಲಗಲ ಪ್ರಕಾರ, ಜನವರಿ ಹದಿನಾಲ್ಕರಂದು ಅನಾರೋಗ್ಯದಿಂದ ನಿರ್ದೇಶಕ ಲೆನಿನ್ ರಾಜೇಂದ್ರನ್ ದಿಢೀರ್ ಸಾವನ್ನಪ್ಪಿದ್ದು ಆಕೆ ಮನಸಿನ ಮೇಲೆ ಪರಿಣಾಮ ಬೀರಿತ್ತು. ರಾಜೇಂದ್ರನ್ ಅವರಿಗೆ ಸಹಾಯಕಿಯಾಗಿ ಚಿತ್ರರಂಗಕ್ಕೆ ನಯನಾ ಪದಾರ್ಪಣೆ ಮಾಡಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications