ತಿರುವನಂತಪುರಂ: ಲಿಫ್ಟ್ನಲ್ಲಿ ಸಿಲುಕಿ ವ್ಯಕ್ತಿ ಸಾವು
ತಿರುವನಂತಪುರ, ಮೇ 11: ತಾನು ಕೆಲಸ ಮಾಡುತ್ತಿದ್ದ ಅಂಗಡಿಯ ಕಟ್ಟಡದಲ್ಲಿ ಇರುವ ಲಿಫ್ಟ್ನ ಬಾಗಿಲಿಗೆ ತಲೆ ಸಿಲುಕಿ ಉದ್ಯೋಗಿಯೊಬ್ಬರು ಮೃತಪಟ್ಟಿರುವ ಘಟನೆ ಕೇರಳದ ತಿರುವನಂತಪುರದಲ್ಲಿ ಮಂಗಳವಾರ ನಡೆದಿದೆ.
ತಿರುವನಂತಪುರಂ ನಿವಾಸಿ ಸತೀಶ್ ಕುಮಾರ್(54) ಮೃತ ದುರ್ದೈವಿ. ಇವರು ಅಂಬಲಮುಕ್ಕವಿನಲ್ಲಿರುವ ಸ್ಯಾನಿಟರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು.
ನೆಲ ಮಹಡಿಯಿಂದ ನಾಲ್ಕನೇ ಮಹಡಿಯಲ್ಲಿರುವ ಸ್ಯಾನಿಟರಿ ಅಂಗಡಿಗೆ ಸರಕುಗಳನ್ನು ತುಂಬಿಕೊಂಡು ಕಾರ್ಗೊ ಲಿಫ್ಟ್ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಲಿಫ್ಟ್ನಿಂದ ಸತೀಶ್ ಕುಮಾರ್ ಅವರನ್ನು ಹೊರತೆಗೆದು, ಆ್ಯಂಬ್ಯುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದರು. ಆದರೆ ಈ ವೇಳೆಗಾಗಲೇ ಸತೀಶ್ ಆವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು.
"ಲಿಫ್ಟ್ ಸ್ಥಗಿತವಾಗಿದೆ. ಈ ವೇಳೆಗೆ ಏನಾಗಿರಬಹುದು ಎಂದು ತಿಳಿಯಲು ಕಾರ್ಗೊ ಲಿಫ್ಟ್ನ ರೇಲಿಂಗ್ ಸರಿಸಿ ನೋಡಲು ಸತೀಶ್ ಅವರು ತಲೆ ಆಚೆ ಹಾಕಿ ಇಣುಕಿರಬಹುದು. ಈ ವೇಳೆಗೆ ಲಿಫ್ಟ್ನ ರೇಲಿಂಗ್ ನಡುವೆ ಅವರ ತಲೆ ಸಿಲುಕಿ ಜಾಮ್ ಆಗಿರಬಹುದು,'' ಎಂದು ಆಗ್ನಿಶಾಮಕ ದಳದ ತಿರುವನಂತಪುರ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
ಸತೀಶ್ ಅವರು ಕಳೆದ ಹಲವು ವರ್ಷಗಳಿಂದ ಎಸ್ಕೆಪಿ ಸ್ಯಾನಿಟರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಲಿಫ್ಟ್ನಲ್ಲಿ ಒಬ್ಬರೇ ಇದ್ದಾಗ ಘಟನೆ ಸಂಭವಿಸಿದೆ. ಅಂಗಡಿಯ ಇತರೆ ಸಿಬ್ಬಂದಿ ಸಾಕಾಷ್ಟು ಹೊತ್ತಾದರೂ ಸತೀಶ್ ಬರದೇ ಇರುವುದನ್ನು ಗಮನಿಸಿ, ಲಿಫ್ಟ್ ಬಳಿಗೆ ಬಂದು ನೋಡಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications