ಮೆಟ್ರೊ ಮ್ಯಾನ್ ಕೇರಳದ ರಾಜಕೀಯ ಬದಲಾಯಿಸುತ್ತಾರೆ; ಮೋದಿ
ತಿರುವನಂತಪುರಂ, ಏಪ್ರಿಲ್ 2: ಕೇರಳದ ಜನರು ಬಿಜೆಪಿಯನ್ನು ಅಧಿಕಾರಕ್ಕೆ ತರಲು ಸಿದ್ಧರಾಗಿದ್ದಾರೆ. ಕೇರಳದ ರಾಜಕೀಯವನ್ನು ಮೆಟ್ರೊ ಮ್ಯಾನ್ ಇ ಶ್ರೀಧರನ್ ಅವರು ಬದಲಾಯಿಸಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ.
ಶುಕ್ರವಾರ ಕೇರಳದ ಪತನಂತಿಟ್ಟದಲ್ಲಿ ಚುನಾವಣಾ ಸಮಾವೇಶದಲ್ಲಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಮಾತು ಆರಂಭಿಸಿದ ನರೇಂದ್ರ ಮೋದಿ, ಇಲ್ಲಿನ ದೇವಾಲಯಗಳ ಹೆಸರುಗಳನ್ನು ಹೇಳಿ, ಕವಿ ಪಂಡಲಂ ಕೇರಳ ವರ್ಮಾ ಅವರನ್ನು ನೆನಪಿಸಿಕೊಂಡರು.
ಕೇರಳ ಸಾಕಷ್ಟು ಬದಲಾಗಿದೆ. ಅದಕ್ಕೆ ಇಲ್ಲಿ ಸೇರಿರುವ ಜನರೇ ಸಾಕ್ಷಿ. ದೆಹಲಿಯಲ್ಲಿನ ರಾಜಕೀಯ ವಿಶ್ಲೇಷಕರು ಕೇರಳದ ಬದಲಾವಣೆಯನ್ನು ಅರ್ಥೈಸಿಕೊಂಡಿಲ್ಲ. ಇದು ಸ್ವಾಮಿ ಅಯ್ಯಪ್ಪನ ಭೂಮಿ. ಈ ಆಧ್ಯಾತ್ಮಿಕ ಸ್ಥಳಕ್ಕೆ ಬಂದಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ ಎಂದರು.

"ಎಲ್ಡಿಎಫ್ ಯುಡಿಎಫ್ ಆಡಳಿತವನ್ನು ಜನ ತಿರಸ್ಕರಿಸುತ್ತಾರೆ. ಬಿಜೆಪಿಯ ಅಭಿವೃದ್ಧಿ ಕಾರ್ಯಸೂಚಿಗಳನ್ನು ಮೆಚ್ಚಿಕೊಂಡಿದ್ದಾರೆ. ಕೇರಳ ಜನರು ಬಿಜೆಪಿಯನ್ನು ಅಧಿಕಾರಕ್ಕೆ ತರಲು ಸಿದ್ಧರಿದ್ದಾರೆ" ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.
ಕೇರಳದಂಥ ಪವಿತ್ರ ಸ್ಥಳವನ್ನು ಇಲ್ಲಿನ ರಾಜಕೀಯ ಪಕ್ಷಗಳು ಹಾಳು ಮಾಡುತ್ತಿವೆ. ಎಡಪಕ್ಷ ಸಿದ್ಧಾಂತ ದೇಶದ ಸಂಸ್ಕೃತಿಯನ್ನು ನಾಶ ಮಾಡಲು ಸಾಧ್ಯವಿಲ್ಲ. ಎಲ್ಡಿಎಫ್ ಹಾಗೂ ಯುಡಿಎಫ್ ಇಲ್ಲಿ ಏಳು ಪಾಪಗಳನ್ನು ಮಾಡಿವೆ ಎಂದು ಹಲವು ಹಗರಣಗಳ ಕುರಿತು ಮಾತನಾಡಿದರು.
ಕೇರಳದ 140 ಕ್ಷೇತ್ರಗಳಿಗೆ ಏಪ್ರಿಲ್ 6ರಂದು ಚುನಾವಣೆ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications