ಕೇರಳದಲ್ಲಿ ಸಕ್ರಿಯ ರಾಜಕಾರಣದಿಂದ ಮೆಟ್ರೋ ಮ್ಯಾನ್ ಶ್ರೀಧರನ್ ದೂರ ದೂರ!
ತಿರುವನಂತಪುರಂ, ಡಿಸೆಂಬರ್ 16: ಕೇರಳ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮುನ್ನಲೆಗೆ ಬಂದಿದ್ದ ಮೆಟ್ರೋ ಮ್ಯಾನ್ ಈಗ ರಾಜಕಾರಣದಿಂದ ತೆರೆಮರೆಗೆ ಸರಿಯುವ ನಿರ್ಧಾರ ಘೋಷಿಸಿದ್ದಾರೆ. ಕಳೆದ ಬಾರಿಯ ಸೋಲಿನಿಂದ ಪಾಠ ಕಲಿತುಕೊಂಡಿದ್ದು, ಸಕ್ರಿಯ ರಾಜಕಾರಣದಿಂದ ದೂರ ಉಳಿಸುವುದಾಗಿ ಕೇರಳ ಮೆಟ್ರೋ ಮ್ಯಾನ್ ಇ ಶೀಧರನ್ ಗುರುವಾರ ಸ್ಪಷ್ಟಪಡಿಸಿದ್ದಾರೆ.
"ನಾನು ಸಕ್ರಿಯ ರಾಜಕಾರಣದಿಂದ ಅಂತರ ಕಾಯ್ದುಕೊಳ್ಳಲು ಬಯಸುತ್ತೇನೆ, ಅದರ ಅರ್ಥ ನಾನು ರಾಜಕೀಯದಿಂದಲೇ ದೂರ ಹೋಗುತ್ತೇನೆ ಎಂದಲ್ಲ," ಅಂತಾ ಸ್ಪಷ್ಟನೆ ನೀಡಿದ್ದಾರೆ. ಕಳೆದ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಪಾಲ್ಕಕಾಡ್ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶ್ರೀಧರನ್ ಸ್ಪರ್ಧಿಸಿದ್ದರು. ಸ್ಪಷ್ಟ ಗುರಿಯನ್ನು ಇಟ್ಟುಕೊಂಡ ಬಿಜೆಪಿಯು ಅಂದು ಪಕ್ಷ ಅಧಿಕಾರಕ್ಕೆ ಬಂದರೆ ಇವರನ್ನೇ ಮುಖ್ಯಮಂತ್ರಿ ಆಗಿ ಆಯ್ಕೆ ಮಾಡುವುದಾಗಿಯೂ ಘೋಷಿಸಿತ್ತು.
ಅಂದು ಶ್ರೀಧರನ್ ಅಂತಹ ನಾಯಕರು ತಮ್ಮ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವುದೇ ಭಾರತೀಯ ಜನತಾ ಪಕ್ಷಕ್ಕೆ ದೊಡ್ಡ ಗೆಲುವು ಎಂದು ರಾಷ್ಟ್ರೀಯ ನಾಯಕರ ಆದಿಯಾಗಿ ಪಕ್ಷದ ಧುರೀಣರು ಹೇಳಿಕೆ ನೀಡಿದ್ದರು. ಇಂದು ಅದೇ ನಾಯಕರು ರಾಜಕೀಯದಿಂದ ಅಂತರ ಕಾಯ್ದುಕೊಳ್ಳುವುದಾಗಿ ಘೋಷಿಸಿದ್ದಾರೆ.

90ರ ಹರೆಯದಲ್ಲಿ ರಾಜಕಾರಣ ಅಪಾಯಕಾರಿ:
"ನನಗೆ 90 ವರ್ಷ ವಯಸ್ಸಾಗಿದೆ, ಈ ವಯಸ್ಸಿನಲ್ಲಿ ರಾಜಕೀಯ ಪ್ರವೇಶಿಸುವುದೇ ಅಪಾಯಕಾರಿ ಆಗಿದೆ. ಮೊದಲ ಬಾರಿ ನಾನು ರಾಜಕಾರಣವನ್ನು ಪ್ರವೇಶಿಸಿದ ಸಂದರ್ಭದಲ್ಲಿ ಒಳ್ಳೆಯ ವಿಶ್ವಾಸವನ್ನು ಇಟ್ಟುಕೊಂಡಿದ್ದೆನು. ಆದರೆ ಈಗ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವುದಕ್ಕೆ ಯಾವುದೇ ವಿಶ್ವಾಸ ಉಳಿದಿಲ್ಲ," ಎಂದು ಶ್ರೀಧರನ್ ಬೇಸರ ವ್ಯಕ್ತಪಡಿಸಿದ್ದಾರೆ. ಪಾಲಕ್ಕಾಡ್ ವಿಧಾನಸಭೆ ಚುನಾವಣೆಯಲ್ಲಿನ ಸೋಲಿನಿಂದ ಶ್ರೀಧರನ್ ತೀವ್ರವಾಗಿ ನೊಂದಿದ್ದು, ಗುರುವಾರ ಅಧಿಕೃತವಾಗಿ ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳುವ ನಿರ್ಧಾರ ಘೋಷಿಸಿದ್ದಾರೆ.
3,859 ಮತಗಳಿಂದ ಸೋತಿದ್ದ ಶ್ರೀಧರನ್:
ಕಳೆದ ಬಾರಿ ಕೇರಳದ ಪಲಕ್ಕದ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶ್ರೀಧರನ್, ಹಾಲಿ ಶಾಸಕ ಶಫಿ ಪರಂಬಿಲ್ ವಿರುದ್ಧ 3,859 ಮತಗಳಿಂದ ಸೋಲು ಅನುಭವಿಸಿದ್ದರು.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್












Click it and Unblock the Notifications