ಅಚ್ಚರಿಯ ಬೆಳವಣಿಗೆ, ಮಿಜೋರಾಂ ರಾಜ್ಯಪಾಲ ಸ್ಥಾನಕ್ಕೆ ಕೆ ರಾಜಶೇಖರನ್ ರಾಜೀನಾಮೆ
ತಿರುವನಂತಪುರಂ, ಮಾರ್ಚ್ 08: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮಿಜೋರಾಂನ ರಾಜ್ಯಪಾಲ ಹುದ್ದೆಗೆ ಕೆ ರಾಜಶೇಖರನ್ ಅವರು ಶುಕ್ರವಾರದಂದು ರಾಜೀನಾಮೆ ನೀಡಿದ್ದಾರೆ.
ಈ ಮೂಲಕ ಈ ಬಾರಿಯ ಲೋಕಸಭೆ ಚುನಾವಣೆ 2019ರಲ್ಲಿ ತಿರುವನಂತಪುರಂ ಕ್ಷೇತ್ರದಿಂದ ರಾಜಶೇಖರನ್ ಸ್ಪರ್ಧೆ ಬಗ್ಗೆ ಹರಿದಾಡುತ್ತಿರುವ ಸುದ್ದಿಗೆ ಪುಷ್ಟಿ ನೀಡಿದ್ದಂತಾಗಿದೆ. ಅಸ್ಸಾಂ ರಾಜ್ಯಪಾಲ ಜಗದೀಶ್ ಮುಖಿ ಅವರು ಮಿಜೋರಾಂ ರಾಜ್ಯಪಾಲರಾಗಿ ಹೆಚ್ಚುವರಿ ಜವಾಬ್ದಾರಿ ಪಡೆದುಕೊಂಡಿದ್ದಾರೆ.
ಕಾಂಗ್ರೆಸ್ ಸಂಸದ ಶಶಿ ತರೂರ್ ವಿರುದ್ಧ ಕೆ ರಾಜಶೇಖರನ್ ಅವರು ಸ್ಪರ್ಧಿಸಲಿದ್ದಾರೆ. ಹೀಗಾಗಿ, ಅವರು ಮಿಜೋರಾಂನ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿಯಿದೆ.

ತಿರುವನಂತಪುರಂನಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ. ಕಾಂಗ್ರೆಸ್ಸಿನಿಂದ ತರೂರ್, ಬಿಜೆಪಿಯಿಂದ ರಾಜಶೇಖರನ್ ಹಾಗೂ ಸಿಪಿಐನಿಂದ ಮಾಜಿ ಸಚಿವ ಸಿ ದಿವಾಕರನ್ ಅವರು ಕಣಕ್ಕಿಳಿಯುವ ಸಂಭವವಿದೆ.
ಮಿಜೋರಾಂನ ರಾಜ್ಯಪಾಲರಾಗಿ ಕೇವಲ 10 ತಿಂಗಳುಗಳ ಕಾಲ ಮಾತ್ರ ಕಾರ್ಯ ನಿರ್ವಹಿಸಿದ್ದಾರೆ. ಚೆಂಗನೂರು ಉಪ ಚುನಾವಣೆಗೂ ಕೇವಲ ದಿನಗಳಿದ್ದಾಗ ಇವರನ್ನು ಮಿಜೋರಾಂ ರಾಜ್ಯಪಾಲರಾಗಿ ನೇಮಿಸಲಾಯಿತು.
2014ರಲ್ಲಿ 15,470 ಮತಗಳಿಂದ ತಿರುವನಂತಪುರಂ ಸೀಟು ಕಳೆದುಕೊಂಡಿದ್ದ ಬಿಜೆಪಿ ಈ ಬಾರಿ ಶತಾಯಗತಾಯ ತರೂರ್ ಅವರನ್ನು ಸೋಲಿಸಲು ಪಣ ತೊಟ್ಟಿದೆ. ಶಬರಿಮಲೆ ವಿವಾದದ ಲಾಭ ಪಡೆದು ಅಯ್ಯಪ್ಪ ಭಕ್ತ ರಾಜಶೇಖರನ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ.
1970ರಲ್ಲಿ ಆರೆಸ್ಸೆಸ್ ಕಾರ್ಯಕರ್ತರಾಗಿದ್ದ ರಾಜಶೇಖರನ್ ಅವರು 1982ರಲ್ಲಿ ನಿಲಕ್ಕಲ್ ಸಂಘರ್ಷದ ಮೂಲಕ ಪ್ರವರ್ಧಮಾನಕ್ಕೆ ಬಂದರು. 1987ರಲ್ಲಿ ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿ, ಪೂರ್ಣಪ್ರಮಾಣದಲ್ಲಿ ಸಂಘ ಪರಿವಾರದ ಕಾರ್ಯಕರ್ತರಾದರು. ರಾಜಶೇಖರನ್ ಅವರು 2016ರ ತನಕ ಕೇರಳ ಬಿಜೆಪಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.
ವಿಶ್ವ ಹಿಂದೂ ಪರಿಷತ್, ಕ್ಷೇತ್ರ ಸಂರಕ್ಷಣ ಸಮಿತಿ, ಬಾಲ ಸದನಂ ಹಾಗೂ ಏಕಲ್ ವಿದ್ಯಾಲಯ, ಹಿಂದೂ ಐಕ್ಯಾ ವೇದಿ ಹಾಗೂ ಸಬರಿಮಲ ಅಯ್ಯಪ್ಪ ಸೇವಾ ಸಮಾಜಂನ ಸಕ್ರಿಯ ಸದಸ್ಯರಾಗಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications