ನರೇಂದ್ರ ಮೋದಿ ದ್ವೇಷದ ವಿಷ ಬಿತ್ತುತ್ತಿದ್ದಾರೆ : ವಯನಾಡಿನಲ್ಲಿ ಸಿಟ್ಟು ಕಾರಿದ ರಾಹುಲ್ ಗಾಂಧಿ
ಕಲ್ಪೆಟ್ಟ (ಕೇರಳ), ಜೂನ್ 08 : ಮುಂಗಾರು ಮಳೆಯ ಸಿಂಚನ ಆರಂಭವಾಗುವ ಶುಭಸಂದರ್ಭದಲ್ಲಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಕ್ಷೇತ್ರಕ್ಕೆ ಪ್ರಥಮ ಬಾರಿ ಶನಿವಾರ ಭೇಟಿ ನೀಡಿದ್ದಾರೆ.
ಕಾರ್ಮೋಡ ಕವಿದ ವಾತಾವರಣದಲ್ಲಿ, ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ಭರ್ಜರಿ ರೋಡ್ ಶೋ ನಡೆಸಿದ ರಾಹುಲ್ ಗಾಂಧಿ ಅವರು, ಅತ್ಯಂತ ಕಟುವಾದ ಪದಗಳಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟೀಕಾ ಪ್ರಹಾರ ಮಾಡಿದರು.
"ರಾಷ್ಟ್ರಮಟ್ಟದಲ್ಲಿ ನಾವು ವಿಷದ ವಿರುದ್ಧ ಹೋರಾಟ ಮಾಡಬೇಕಿದೆ. ಮಿ. ನರೇಂದ್ರ ಮೋದಿ ಅವರು ವಿಷವನ್ನು ಬಳಸುತ್ತಾರೆ. ನಾನು ಅತ್ಯಂತ ಕಟುವಾದ ಪದವನ್ನು ಬಳಸುತ್ತಿದ್ದೇನೆ, ಆದರೆ, ನರೇಂದ್ರ ಮೋದಿಯವರು ರಾಷ್ಟ್ರವನ್ನು ಇಬ್ಭಾಗಿಸಲು ದ್ವೇಷದ ವಿಷವನ್ನು ಬಳಸುತ್ತಾರೆ. ಸಿಟ್ಟು ಮತ್ತು ದ್ವೇಷದಿಂದ ಭಾರತವನ್ನು ಅವರು ಇಬ್ಭಾಗಿಸುತ್ತಿದ್ದಾರೆ. ಅವರು ಸುಳ್ಳನ್ನು ಹೇಳಿಯೇ ಚುನಾವಣೆ ಗೆಲ್ಲುತ್ತಿದ್ದಾರೆ" ಎಂದು ರಾಹುಲ್ ಗಾಂಧಿ ವಾಗ್ದಾಳಿ ಮಾಡಿದರು.

ಇಂಥ ಋಣಾತ್ಮಕ ಮಾತುಗಳನ್ನು ಲೋಕಸಭಾ ಚುನಾವಣೆಯ ಪ್ರಚಾರದುದ್ದಕ್ಕೂ ಬಳಸಿದ್ದ ರಾಹುಲ್ ಗಾಂಧಿ ಅವರು ಹೀನಾಯವಾಗಿ ಸೋತಿದ್ದಾರೆ. 542 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದು ಕೇವಲ 52 ಕ್ಷೇತ್ರಗಳಲ್ಲಿ ಮಾತ್ರ. ಅವರು ಉತ್ತರ ಪ್ರದೇಶದ ಅಮೇಥಿಯಲ್ಲಿ ಅವಮಾನಕರ ಸೋಲು ಅನುಭವಿಸಿದರೂ, ಕೇರಳದಲ್ಲಿ 20ರಲ್ಲಿ 15 ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ.
ತಾವು ಕೇವಲ 52 ಸಂಸದರು ಮಾತ್ರವಿದ್ದರೇನಂತೆ, ಸಂಸತ್ತಿನಲ್ಲಿ ಬಿಜೆಪಿಯ ವಿರುದ್ಧ ಹೋರಾಟ ಮಾಡುತ್ತಲೇ ಇರುತ್ತೇವೆ ಎಂದು ತೊಡೆತಟ್ಟಿರುವ ರಾಹುಲ್ ಗಾಂಧಿ ಅವರು, ನರೇಂದ್ರ ಮೋದಿಯವರು ದೇಶದ ಕೆಟ್ಟ ಭಾವನೆಗಳನ್ನು ಪ್ರತಿನಿಧಿಸುತ್ತಿದ್ದಾರೆ. ಅವರು ದ್ವೇಷ, ಸಿಟ್ಟು, ಅಸೂಯೆ, ಅಭದ್ರತೆ ಮತ್ತು ಸುಳ್ಳುಗಳನ್ನು ಪ್ರತಿನಿಧಿಸುತ್ತಿದ್ದಾರೆ ಎಂದು ಮೋದಿಯವರ ಮೇಲೆ ದ್ವೇಷ ಕಾರಿದರು. ಆದರೂ, ಅವರು ಪ್ರತಿಬಾರಿ ಹೇಳುವುದು ನಾನು ಪ್ರೀತಿಯಿಂದಲೇ ಜನರ ಮನಸ್ಸನ್ನು ಗೆಲ್ಲುತ್ತೇನೆಂದು.
ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದರೂ, ವಯನಾಡಿನ ಜನತೆಗೆ ಕಾಂಗ್ರೆಸ್ ಬಾಗಿಲು ಸದಾಕಾಲ ತೆರೆದಿರುತ್ತದೆ. ನೀವು ಯಾರೇ ಆಗಿರಿ, ಎಲ್ಲಿಂದಲೇ ಬಂದಿರಿ, ನಿಮ್ಮ ವಯಸ್ಸು ಎಷ್ಟೇ ಇರಲಿ, ನಿಮ್ಮ ಸಿದ್ಧಾಂತ ಯಾವುದೇ ಇರಲಿ ನಿಮಗೆ ಕಾಂಗ್ರೆಸ್ ಬಾಗಿಲು ತೆರೆದಿರುತ್ತದೆ, ನೀವು ಪಕ್ಷವನ್ನು ಸೇರಬಹುದು ಎಂದು ಅವರು ನೆರೆದಿದ್ದ ಜನತೆಗೆ ಕರೆ ನೀಡಿದರು.
ಆದರೆ, ಅವರ ಈ ಮಾತುಗಳಿಗೆ ಟ್ವಿಟ್ಟರ್ ನಲ್ಲಿ ವಿಭಿನ್ನವಾದ ಮಾತುಗಳು ಕೇಳಿಬರುತ್ತಿವೆ. ಅವರು ಇದೇ ಮಾತನ್ನು ಅಮೇಥಿಯಲ್ಲಿಯೂ ಹೇಳಿದ್ದರು. ಅಯ್ಯೋ ಜನರ ಮೇಲೆ ಇವರಿಗೆ ಎಷ್ಟೊಂದು ಪ್ರೀತಿ, ಇದನ್ನು ನೋಡಿ ನನ್ನ ಕಣ್ಣುಗಳು ತುಂಬಿ ಬಂದಿವೆ. ಇವರಿಗೆ ಅಮೇಥಿ ಜನರ ಮೇಲೆ ಇಷ್ಟೊಂದು ಪ್ರೀತಿಯಿದ್ದರೆ ಸೋಲಮೇಲಾದರೂ ಅಮೇಥಿಗೆ ಭೇಟಿ ನೀಡಿ ಜನರೊಂದಿಗೆ ಮಾತಾಡಬಹುದಿತ್ತು. ಇದು ಇವರ ಮೊದಲ ಮತ್ತೆ ಕಡೆಯ ಭೇಟಿ, ಇನ್ನು ಐದು ವರ್ಷ ಇನ್ನು ಇವರು ಇಲ್ಲಿ ಕಾಲಿಡುವುದಿಲ್ಲ ಎಂದು ಜನರು ವ್ಯಂಗ್ಯವಾಗಿ ಮಾತನಾಡುತ್ತಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications