ಭೂ ಹಗರಣ ಪ್ರಕರಣ, ಜನಪ್ರಿಯ ನಟನಿಗೆ ಬಂಧನದಿಂದ ರಿಲೀಫ್
ತಿರುವನಂತಪುರಂ, ಏಪ್ರಿಲ್ 24: ಭೂ ಹಗರಣ ಪ್ರಕರಣವೊಂದರಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಜನಪ್ರಿಯ ನಟ ಬಾಬುರಾಜ್ಗೆ ನೆಮ್ಮದಿಯ ಸುದ್ದಿ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಬುರಾಜ್ ಬಂಧನಕ್ಕೆ ಕೇರಳ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಕೋಥಮಂಗಲಂ ಮೂಲದ ಎಸ್ ಅರುಣ್ ಕುಮಾರ್ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ನಟ ಬಾಬುರಾಜ್ ಬಂಧನಕ್ಕೆ ಮುಂದಾಗಿದ್ದರು. ಆದರೆ, ಬಾಬುರಾಜ್ ಪರ ವಕೀಲರು ಬಂಧನ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದರು.
ಬಾಬುರಾಜ್ ಅವರು ಸುಮಾರು 40 ಲಕ್ಷ ರು ಗಳಿಗೆ ಮುನ್ನಾರ್ ಬಳಿಯ ಕಂಬಿಲಿನ್ ರೆಸಾರ್ಟ್ ಭೋಗ್ಯಕ್ಕೆ ಬಿಟ್ಟಿದ್ದರು. ಆದರೆ, ರೆಸಾರ್ಟ್ ಜಾಗದ ಮೇಲಿದ್ದ ಕೇಸ್ ಹಾಗೂ ಸಿವಿಎಲ್ ಕಟ್ಲೆಗಳ ವಿವರಗಳನ್ನು ಮುಚ್ಚಿಟ್ಟರು ಎಂದು ಅರುಣ್ ಕುಮಾರ್ ಆರೋಪಿಸಿದ್ದಾರೆ.

ಅಸಲಿಗೆ ರೆಸಾರ್ಟ್ ಇರುವ ಜಾಗವನ್ನು ಲೀಸ್ ಮೇಲೆ ಕೊಡಲು ಪಲ್ಲಿವಾಸಲ್ ಪಂಚಾಯಿತಿಯ ಅನುಮತಿ ಬೇಕು. ಆದರೆ, ಪಂಚಾಯಿತಿ ಇದಕ್ಕೆ ನಿರ್ಬಂಧ ವಿಧಿಸಿದೆ. ಆದರೆ, ಈ ವಿಷಯ ಮುಚ್ಚಿಟ್ಟು 11 ತಿಂಗಳ ಅವಧಿಗೆ ಎಂದು ಫೆಬ್ರವರಿ 2020ರಲ್ಲಿ ಲೀಸ್ ಮೇಲೆ ಕೊಟ್ಟಿದ್ದರು.
1993ರಲ್ಲಿ ವೃಂದಾವನ್ ಪಟ್ಟಯಾಮ್ಸ್ ಕೈವಶವಾಗಿದ್ದ ಈ ಜಾಗ ಹಲವು ಕೇಸ್ ಎದುರಿಸಿದೆ. ಇಡುಕ್ಕಿ ಮೂಲದ ಲಾಡ್ಜ್ ವೊಂದರ ಹೆಸರಿನಲ್ಲಿ ಬೋಗಸ್ ಟೈಟಲ್ ಡೀಡ್ ಮಾಡಿ, ನಕಲಿ ದಾಖಲೆ ನೀಡೀ ಕಂದಾಯ ಇಲಾಖೆಗೂ ವಂಚನೆ ಮಾಡಲಾಗಿದೆ.
ಇಷ್ಟಾದರೂ ಲೀಸ್ ಒಪ್ಪಂದವನ್ನು ಮುರಿದುಕೊಳ್ಳಲು ಬಾಬುರಾಜ್ ಸಿದ್ಧರಿಲ್ಲ. ಹೀಗಾಗಿ ಪೊಲೀಸರಿಗೆ ದೂರು ನೀಡಿದ್ದು, ಕಾನೂನು ಹೋರಾಟ ಮುಂದುವರೆಸುತ್ತೇನೆ ಎಂದು ಅರುಣ್ ಕುಮಾರ್ ಹೇಳಿದ್ದಾರೆ.
ಕಳೆದ 11 ತಿಂಗಳುಗಳಿಂದ ರೆಸಾರ್ಟ್ ಕಡೆಯಿಂದ ಯಾವುದೇ ಮೊತ್ತ ಕೈ ಸೇರಿಲ್ಲ, ನನಗೆ ವಂಚನೆಯಾಗಿದೆ ಎಂದು ನಟ ಬಾಬುರಾಜ್ ಪ್ರತಿವಾದ ಮಾಡಿದ್ದಾರೆ. ಮಾನಹಾನಿ ಮಾಡಲು ಈ ರೀತಿ ಸುಳ್ಳು ಆರೋಪ ಮಾಡಲಾಗಿದೆ ಎಂದು ಬಾಬುರಾಜ್ ಪ್ರತಿಕ್ರಿಯಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications