ಆಸ್ಪತ್ರೆಗೆ ಬಂದ ನಿರ್ಮಲಾ ಸೀತಾರಾಮನ್ ಸೌಜನ್ಯಕ್ಕೆ ಕರಗಿಹೋದ ಶಶಿ ತರೂರ್
Recommended Video
ತಿರುವನಂತಪುರಂ, ಏಪ್ರಿಲ್ 16: "ಭಾರತದ ರಾಜಕೀಯದಲ್ಲಿ ಇಂಥ ಪ್ರಬುದ್ಧ ವರ್ತನೆ ಅಪರೂಪ. ಆಕೆಯ ಸೌಜನ್ಯ ನನ್ನನ್ನು ತಟ್ಟಿತು" ಹೀಗೆಂದು ಕಾಂಗ್ರೆಸ್ ಮುಖಂಡ ಶಶಿ ತರೂರ್, ಬಿಜೆಪಿ ನಾಯಕಿ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಹೊಗಳಿಕೆಯ ಮಾತನ್ನಾಡಿದ್ದಾರೆ.
ಕೇರಳದ ಗಾಂಧಾರಿ ಅಮನ್ ಕೋವಿಲ್ ದೇವಸ್ಥಾನದಲ್ಲಿ ಅಚಾನಕ್ಕಾಗಿ ಬಿದ್ದ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ತಲೆಗೆ ತೀವ್ರವಾಗಿ ಗಾಯವಾಗಿತ್ತು. ಆದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಲೋಕಸಭಾ ಚುನಾವಣಾ ಪ್ರಚಾರಕ್ಕೆಂದು ಕೇರಳಕ್ಕೆ ತೆರಳಿದ್ದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶಶಿ ತರೂರ್ ಅವರಿದ್ದ ಆಸ್ಪತ್ರೆಗೆ ತೆರಳಿ, ಅವರ ಕುಶಲ ವಿಚಾರಿಸಿದರು. ಕೈಕುಲುಕಿ ಬೇಗ ಗುಣಮುಖರಾಗುವಂತೆ ಹಾರೈಸಿದರು. ಅವರ ಅನಿರೀಕ್ಷಿತ ಭೇಟಿಯ ನಂತರ ಮನದುಂಬಿ ಶಶಿ ತರೂರ್ ಟ್ವೀಟ್ ಮಾಡಿದ್ದಾರೆ.
Touched by the gesture of @nsitharaman, who dropped by today morning to visit me in the hospital, amid her hectic electioneering in Kerala. Civility is a rare virtue in Indian politics - great to see her practice it by example! pic.twitter.com/XqbLf1iCR5
— Shashi Tharoor (@ShashiTharoor) April 16, 2019
"ಚುನಾವಣೆಯ ಬಿಡುವಿಲ್ಲದ ಶೆಡ್ಯೂಲ್ ನಡುವೆಯೂ ನನ್ನನ್ನು ಆಸ್ಪತ್ರೆಗೆ ಬಂದು ಭೇಟಿ ಮಾಡಿ, ವಿಚಾರಿಸಿದ ನಿರ್ಮಲಾ ಸೀತಾರಾಮನ್ ಅವರ ಸೌಜನ್ಯದ ನಡೆ ನನ್ನನ್ನು ತಟ್ಟಿತು. ಭಾರತೀಯ ರಾಜಕೀಯದಲ್ಲಿ ಇಂಥ ಪ್ರಬುದ್ಧ ವರ್ತನೆ ಅಪರೂಪ. ಆದರೆ ಅದನ್ನು ಈಗಲೂ ಪಾಲಿಸುತ್ತಿರುವುದು ನಿರ್ಮಲಾ ಅವರ ದೊಡ್ಡಗುಣ" ಎಂದು ಶಶಿ ತರೂರ್ ಟ್ವೀಟ್ ಮಾಡಿ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.
ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?
ಕೇರಳದ ತಿರುವನಂತಪುರಂ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಶಶಿ ತರೂರ್, ಏಪ್ರಿಲ್ 23 ರಂದು ಚುನಾವಣೆ ಎದುರಿಸಲಿದ್ದಾರೆ. ಮೇ 23 ರಂದು ಫಲಿತಾಂಶ ಹೊರಬೀಳಲಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications