ಅಪಘಾತದಲ್ಲಿ ಗಾಯಗೊಂಡಿದ್ದ ಸಂಗೀತಗಾರ ಬಾಲಭಾಸ್ಕರ್ ಇನ್ನಿಲ್ಲ
ತಿರುವನಂತಪುರಂ, ಅಕ್ಟೋಬರ್ 02: ಸತತ 7 ದಿನಗಳ ಜೀವನ್ಮರಣ ಹೋರಾಟ ನಡೆಸಿದ್ದ ಗಾಯಕ, ಪಿಟೀಲುವಾದಕ, ಸಂಗೀತಗಾರ ಬಾಲಭಾಸ್ಕರ್(40) ಅವರು ಇಹಲೋಕ ತ್ಯಜಿಸಿದ್ದಾರೆ. ಸೋಮವಾರ ತಡರಾತ್ರಿ 1 ಗಂಟೆ ವೇಳೆಗೆ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಕಳೆದ ಮಂಗಳವಾರ(ಸೆಪ್ಟೆಂಬರ್ 25) ಮುಂಜಾನೆ ತಿರುವನಂತಪುರಂ ಹೆದ್ದಾರಿಯ ಪಕ್ಕದಲ್ಲಿದ್ದ ಮರವೊಂದಕ್ಕೆ ಬಾಲಭಾಸ್ಕರ್ ಅವರ ಕುಟುಂಬವಿದ್ದ ಕಾರು ಅಪ್ಪಳಿಸಿತ್ತು. ಈ ದುರ್ಘಟನೆಯಲ್ಲಿ ಬಾಲಭಾಸ್ಕರ್, ಬಾಲಭಾಸ್ಕರ್ ಅವರ ಪತ್ನಿ ಲಕ್ಷ್ಮಿ, ಕಾರು ಚಾಲಕ ಅರ್ಜುನ್ ಅವರಿಗೆ ತೀವ್ರ ಗಾಯಗಳಾಗಿತ್ತು. ದಂಪತಿಯ ಎರಡು ವರ್ಷ ವಯಸ್ಸಿನ ಮಗು ತೇಜಸ್ವಿನಿ ಮೃತಪಟ್ಟಿದ್ದಳು.

ತೀವ್ರವಾಗಿ ಗಾಯಗೊಂಡಿರುವ ಬಾಲಭಾಸ್ಕರ್ ಅವರ ಪತ್ನಿ ಲಕ್ಷ್ಮಿ ಹಾಗೂ ಕಾರು ಚಾಲಕ ಅರ್ಜುನ್ ಅವರು ಇನ್ನೂ ಐಸಿಯುನಲ್ಲಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ಬಾಲಭಾಸ್ಕರ್ ಅವರು ತ್ರಿಸ್ಸೂರ್ ದೇಗುಲಕ್ಕೆ ಭೇಟಿ ನೀಡಿ, ವಾಪಸ್ ಬರುವಾಗ ಈ ದುರ್ಘಟನೆ ನಡೆದಿತ್ತು. ಮುಂಜಾನೆ ನಿದ್ರೆ ರಹಿತ ಪಯಣದಿಂದ ಚಾಲಕನ ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿರುವ ಸಾಧ್ಯತೆಯಿದೆ ಎಂದು ಮಂಗಳಾಪುರಂ ಪೊಲೀಸರು ಹೇಳಿದ್ದಾರೆ.
12 ವರ್ಷ ವಯಸ್ಸಿನಿಂದಲೇ ಸಂಗೀತ ಕ್ಷೇತ್ರದಲ್ಲಿ ಮಿಂಚಿದ್ದ ಬಾಲ ಭಾಸ್ಕರ್ ಅವರು, ಮಾಂಗಲ್ಯ ಪಲ್ಲಕ್ಕು ಎಂಬ ಮಲಯಾಳಂ ಸಿನಿಮಾಕ್ಕೆ ತಮ್ಮ 17ನೇ ವಯಸ್ಸಿನಲ್ಲೆ ಸಂಗೀತ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದರು. ಬಾಲಭಾಸ್ಕರ್ ಅವರ ಫ್ಯೂಷನ್ ಸಂಗೀತಕ್ಕೆ ಸಾಕಷ್ಟು ಅಭಿಮಾನಿಗಳು ಹುಟ್ಟುಕೊಂಡಿದ್ದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications