ಕೇರಳ: ಮೇ 20ರಂದು ಪಿಣರಾಯಿ ವಿಜಯನ್ ಪ್ರಮಾಣವಚನ
ತಿರುವನಂತಪುರಂ, ಮೇ 17: ಕೇರಳದಲ್ಲಿ ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಮೇ 20 ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಸಿಪಿಐಎಂ ಹಾಗೂ ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎಫ್ನ ಸಂಚಾಲಕ ವಿಜಯರಾಘವನ್ ಮಾತನಾಡಿ, ಕೇರಳ ಸರ್ಕಾರವು 21 ಸದಸ್ಯರ ಸಂಪುಟವನ್ನು ಹೊಂದಿರಲಿದೆ ಎಂದು ತಿಳಿಸಿದ್ದಾರೆ.
ಮಾಹಿತಿ ಪ್ರಕಾರ ಮೇ 20 ರಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಪಿಣರಾಯಿ ವಿಜಯನ್ ಸಚಿವ ಸಂಪುಟದಲ್ಲಿ ಸಿಪಿಐ(ಎಂ)ಗೆ 12, ಸಿಪಿಐಗೆ 4, ಕೇರಳ ಕಾಂಗ್ರೆಸ್, ಜನತಾದಳ ಎಸ್ ಹಾಗೂ ಎನ್ಸಿಪಿಗೆ ತಲಾ 1 ಸಂಪುಟ ಸ್ಥಾನ ದೊರೆಯಲಿದೆ.

ಅದರ ಜತೆಗೆ ಇನ್ನುಳಿದ ಎರಡು ಸಚಿವ ಸ್ಥಾನವನ್ನು ಜನಾಧಿಪತ್ಯ ಕೇರಳ ಕಾಂಗ್ರೆಸ್, ಹಾಗೂ ಇಂಡಿಯನ್ ನ್ಯಾಷನಲ್ ಲೀಗ್ ಎರಡೂವರೆ ವರ್ಷ ಮತ್ತು ಮುಂದಿನ ಎರಡೂವರೆ ವರ್ಷವನ್ನು ಕೇರಳ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಎಸ್ ಹಂಚಿಕೊಳ್ಳಲಿದೆ.
ಸಿಪಿಐಎಂಗೆ ಸಭಾಧ್ಯಕ್ಷ ಹಾಗೂ ಸಿಪಿಐಗೆ ಉಪ ಸಭಾಧ್ಯಕ್ಷ ಹುದ್ದೆ ದೊರೆಯಲಿದ್ದು, ಮುಖ್ಯ ಸಚೇತಕ ಹುದ್ದೆಯು ಕೇರಳ ಕಾಂಗ್ರೆಸ್ಗೆ ದೊರೆಯಲಿದೆ. ಆದರೆ ಸಚಿವರ ಖಾತೆ ಹಂಚಿಕೆಯನ್ನು ಸಂಪೂರ್ಣವಾಗಿ ಮುಖ್ಯಮಂತ್ರಿಗೆ ಪರಮಾಧಿಕಾರ ನೀಡಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications