ಕೇರಳ ಹಾರರ್! ನಡುಬೀದಿಯಲ್ಲೇ ಮಹಿಳಾ ಪೊಲೀಸ್ ಸಿಬ್ಬಂದಿಗೆ ಬೆಂಕಿಹಚ್ಚಿ ಕೊಂದ ಸಹದ್ಯೋಗಿ
ತಿರುವನಂತಪುರಂ, ಜೂನ್ 15: ಇಡೀ ರಾಜ್ಯವೇ ಬೆಚ್ಚಿಬೀಳಿಸುವಂತಹ ಘಟನೆ ಅಲಪುಳ ಜಿಲ್ಲೆಯಿಂದ ವರದಿಯಾಗಿದ್ದು, ಪೊಲೀಸ್ ಸಿಬ್ಬಂದಿಯೊಬ್ಬ, ತಮ್ಮ ಮಹಿಳಾ ಅಧಿಕಾರಿಯನ್ನೇ ಬೆಂಕಿಹಚ್ಚಿ ಕೊಂದಿದ್ದಾನೆ.
ರಾಜ್ಯದ ಅಲಪುಳ ಜಿಲ್ಲೆಯ ವಳ್ಳಿಕುನ್ನಂ ಬಳಿಯ ಕಾಂಜಿಪುಳ ಎಂಬಲ್ಲಿ ಈ ಘಟನೆ ವರದಿಯಾಗಿದ್ದು, ದುರಂತ ಸಾವು ಕಂಡ ಪೊಲೀಸ್ ಅಧಿಕಾರಿಯನ್ನು ಸೌಮ್ಯ ಪುಷ್ಪಾಕರನ್ (34) ಎಂದು ಗುರುತಿಸಲಾಗಿದೆ.
ಸೌಮ್ಯ, ವಳ್ಳಿಕುನ್ನಂ ಠಾಣೆಯ ಅಧಿಕಾರಿಯಾಗಿದ್ದು, ಮೊದಲ ಶಿಫ್ಟ್ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ, ಅಳುವಾ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಎಜಾಜ್ ಎನ್ನುವ ಪೊಲೀಸ್ ಸಿಬ್ಬಂದಿ ಈ ಕೃತ್ಯವನ್ನು ಎಸಗಿದ್ದಾನೆ.

ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ಸೌಮ್ಯ ತೆರಳುತ್ತಿದ್ದ ವೇಳೆ, ಕಾರಿನಲ್ಲಿ ಬಂದ ಎಜಾಜ್, ಆಕೆಯ ವಾಹನವನ್ನು ತಡೆಗಟ್ಟಿ, ಆಕೆಗೆ ಚಾಕುವಿನಿಂದ ಇರಿದು, ನಂತರ ಸೀಮೆಯೆಣ್ಣೆ ಸುರಿದು, ಬೆಂಕಿಹಚ್ಚಿದ್ದಾನೆ. ಸೌಮ್ಯ, ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ಸಿವಿಲ್ ಪೊಲೀಸ್ ಆಫೀಸರ್ ಆಗಿರುವ ಸೌಮ್ಯ, ಮೂರು ಮಕ್ಕಳ ತಾಯಿಯಾಗಿದ್ದು, ಈಕೆಯ ಪತಿ ವಿದೇಶದಲ್ಲಿ ಕೆಲಸದಲ್ಲಿದ್ದಾರೆ. ಎಜಾಜ್ ಇನ್ನೂ ಪ್ರಜ್ಞೆ ಕಳೆದುಕೊಂಡಿರುವುದರಿಂದ, ಯಾವ ಕಾರಣಕ್ಕಾಗಿ ಸೌಮ್ಯ ಅವರನ್ನು ಕೊಲೆಗೈದಿದ್ದಾನೆಂದು ತಿಳಿದುಬಂದಿಲ್ಲ.
ಸೌಮ್ಯಗೆ ಬೆಂಕಿಹಚ್ಚುವ ವೇಳೆ ಎಜಾಜ್ ಗೂ ಗಾಯಗಳಾಗಿದ್ದು ಅವರನ್ನು ಅಲಪುಳ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ಕೆ ಎಂ ಟೋಮಿ ಮಾಧ್ಯಮದವರಿಗೆ ಹೇಳಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications