ಶಬರಿಮಲೆ: ಭಕ್ತರಿಂದ 40 ನಕಲಿ ಕೋವಿಡ್ ಪರೀಕ್ಷೆ ಪ್ರಮಾಣ ಪತ್ರ ವಶ
ತಿರುವನಂತಪುರಂ, ಜನವರಿ 1: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ತೆರಳುವ ಭಕ್ತರ ನಿರ್ವಹಣೆಯ ಕಾರ್ಯಕ್ಕೆ ಮಕರವಿಳಕ್ಕು ಅವಧಿಯ ಮೊದಲ ದಿನ ಅನೇಕ ಸಮಸ್ಯೆಗಳು ಎದುರಾಗಿವೆ. ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆ ಸನ್ನಿಧಾನಕ್ಕೆ ತೆರಳುವ ಭಕ್ತರ ಸಂಖ್ಯೆಯನ್ನು 5,000ಕ್ಕೆ ಹೆಚ್ಚಿಸಲಾಗಿದೆ. ಆದರೆ ಮೂಲ ನೆಲೆಯಾದ ನಿಳಕ್ಕಳ್ನಲ್ಲಿ ಆರ್ಟಿ-ಪಿಸಿಆರ್, ಆರ್ಟಿ-ಲ್ಯಾಂಪ್ ಮತ್ತು ಟ್ರೂನಾಟ್ ಮಾದರಿಯಲ್ಲಿ ಕೊರೊನಾ ವೈರಸ್ ಪರೀಕ್ಷೆಗಳನ್ನು ನಡೆಸಲು ಪ್ರಯೋಗಾಲಯ ಸ್ಥಾಪಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಇದರಿಂದ ಭಕ್ತರ ಸರಾಗ ಪ್ರವೇಶ ಚಟುವಟಿಕೆಗೆ ಹಿನ್ನಡೆಯಾಗಿದೆ.
ಶಬರಿಮಲೆಯನ್ನು ಪ್ರವೇಶಿಸುವವರು ಕನಿಷ್ಠ 48 ಗಂಟೆಗಳ ಮುನ್ನ ಪರೀಕ್ಷೆಗೊಳಗಾಗಿ ಕೋವಿಡ್ ನೆಗೆಟಿವ್ ವರದಿಯ ಪ್ರಮಾಣಪತ್ರವನ್ನು ತರುವುದು ಕಡ್ಡಾಯವಾಗಿದೆ. ಮಕರವಿಳಕ್ಕು ಅವಧಿಯಲ್ಲಿ ಭಕ್ತರ ಸಂಖ್ಯೆಯನ್ನು 5,000ಕ್ಕೆ ಹೆಚ್ಚಿಸುವಂತೆ ಹೈಕೋರ್ಟ್ ಆದೇಶಿಸಿದ್ದರೂ, ಗುರುವಾರ ನಿಳಕ್ಕಳ್ನ ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ ದಾಖಲಾದ ಭಕ್ತರ ಸಂಖ್ಯೆ 3,225 ಮಾತ್ರ. ಹೆಚ್ಚಿನವರಿಗೆ ಕೋವಿಡ್ ಟೆಸ್ಟ್ ಪ್ರಮಾಣಪತ್ರದ ಕಾರಣ ಪ್ರವೇಶಾವಕಾಶ ಸಿಕ್ಕಿಲ್ಲ.
ನಿಳಕ್ಕಳ್ನಲ್ಲಿ ಕೋವಿಡ್ ಪರೀಕ್ಷೆ ಪ್ರಯೋಗಾಲಯ ತೆರೆಯಲು ಪ್ರಕ್ರಿಯೆಯಲ್ಲಿನ ವಿಳಂಬ ಮತ್ತು ಅಧಿಕಾರಿಗಳು ಅನುಮೋದನೆ ನೀಡುವಲ್ಲಿ ವಿಫಲವಾಗಿರುವುದು ಈ ಎಲ್ಲ ಸಮಸ್ಯೆಗಳಿಗೆ ಕಾರಣವಾಗಿದೆ. ಆದರೆ ನಿಳಕ್ಕಳ್ನಲ್ಲಿ ಇನ್ನು ಒಂದೆರಡು ದಿನಗಳಲ್ಲಿ ಕೋವಿಡ್ ಪರೀಕ್ಷೆ ಪ್ರಯೋಗಾಲಯ ಆರಂಭವಾಗಲಿದೆ ಎಂದು ದೇವಸ್ವಂ ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ಒಂದೇ ದಿನ ನಿಳಕ್ಕಳ್ನಲ್ಲಿ ಕಂಟ್ರೋಲ್ ರೂಂನ ಪೊಲೀಸರು ಭಕ್ತರಿಂದ ಸುಮಾರು 40 ನಕಲಿ ಕೋವಿಡ್ ಪ್ರಮಾಣಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ನಿಳಕ್ಕಳ್ನಲ್ಲಿ ಅಧಿಕೃತ ಕೋವಿಡ್ ಪರೀಕ್ಷೆ ಪ್ರಮಾಣಪತ್ರ ಒದಗಿಸುವ ವ್ಯವಸ್ಥೆ ಇಲ್ಲದಿರುವುದರ ಲಾಭ ಪಡೆದುಕೊಂಡಿರುವ ಅನಧಿಕೃತ ಪ್ರಯೋಗಾಲಯಗಳು ಭಕ್ತರಿಂದ ಹೆಚ್ಚುವರಿ ಹಣ ಪಡೆದು ನಕಲಿ ಪ್ರಮಾಣಪತ್ರಗಳನ್ನು ನೀಡುತ್ತಿವೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications