ಕೊಟ್ಟಾಯಂ: ಬಾವಿಯಲ್ಲಿ ಕ್ಯಾಥೊಲಿಕ್ ಚರ್ಚ್ ಪಾದ್ರಿ ಶವ ಪತ್ತೆ
ತಿರುವನಂತಪುರಂ, ಜೂನ್ 22: ಕೊಟ್ಟಾಯಂ ಜಿಲ್ಲೆಯೊಂದರ ಚರ್ಚ್ ಆವರಣದಲ್ಲಿರುವ ಬಾವಿಯಲ್ಲಿ ಪಾದ್ರಿಯೊಬ್ಬರ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು 51 ವರ್ಷ ವಯಸ್ಸಿನ ಫಾದರ್ ಜಾರ್ಜ್ ಎಟ್ಟುಪರಾಯಿಲ್ ಎಂದು ಗುರುತಿಸಲಾಗಿದೆ.
Recommended Video
ಪನ್ನಥುರಾದ ಬಳಿಯ ಸೈಂಟ್ ಥಾಮಸ್ ಚರ್ಚ್ ನಲ್ಲಿ ಸೇವೆ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ. ಪಾದ್ರಿ ಕಾಣೆಯಾಗಿದ್ದಾರೆ ಎಂದು ಭಾನುವಾರ ರಾತ್ರಿ ಪೊಲೀಸರಿಗೆ ದೂರು ಸಲ್ಲಿಸಲಾಗಿತ್ತು. ಸೋಮವಾರ ಬೆಳಗ್ಗೆ ಪಾದ್ರಿ ಬಗ್ಗೆ ಹುಡುಕಾಟ ನಡೆಸಿದಾಗ ಚರ್ಚ್ ಆವರಣದಲ್ಲಿದ್ದ ಬಾವಿಯೊಳಗೆ ಪಾದ್ರಿ ಶವ ಪತ್ತೆಯಾಗಿದೆ ಎಂದು ಕೊಟ್ಟಾಯಂ ಪೊಲೀಸರು ತಿಳಿಸಿದ್ದಾರೆ.
ಅಗ್ನಿಶಾಮಕದಳ ಸಿಬ್ಬಂದಿ ನೆರವಿನಿಂದ ಬಾವಿನಿಂದ ಶವವನ್ನು ಹೊರಕ್ಕೆ ತೆಗೆಯಲಾಗಿದೆ. ಸೈರೋ ಮಲಬಾರ್ ಚರ್ಚ್ ಚಂಗನಚ್ಚೇರಿ ಅರ್ಕ್ಡಿಯೋಸೀಸ್ ಗೆ ಸೇರಿದ ಪಾದ್ರಿ ಎಂದು ತಿಳಿದು ಬಂದಿದೆ. ಚರ್ಚ್ ಗೆ ಹೊಂದಿಕೊಂಡಂತೆ ಇದ್ದ ವಸತಿಗೃಹದಲ್ಲಿ ವಾಸಿಸುತ್ತಿದ್ದರು.

ಭಾನುವಾರ ಸಂಜೆ ನಂತರ ಪಾದ್ರಿ ಕಾಣಿಸದಿದ್ದಾಗ, ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಲಾಗಿತ್ತು. ರಾತ್ರಿ ಎಲ್ಲೆಡೆ ಹುಡುಕಾಟ ನಡೆಸಿದ್ದರೂ, ಬಾವಿಯಲ್ಲಿ ಹುಡುಕಿರಲಿಲ್ಲ. ಸೋಮವಾರ ಹುಡುಕಾಟ ನಡೆಸಿದಾಗ ಶವ ಪತ್ತೆಯಾಗಿದೆ. ಪಾದ್ರಿ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಭಾನುವಾರ ರಾತ್ರಿ 10.50ರ ತನಕದ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದ್ದು, ಆ ನಂತರ ಸಿಸಿಟಿವಿ ಕ್ಯಾಮೆರಾ ಸ್ವಿಚ್ ಆಫ್ ಆಗಿದೆ, ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications