ಮಹಿಳಾ ಅಭ್ಯರ್ಥಿ ಕುರಿತಾದ ಕಮಲ್ ನಾಥ್ ಹೇಳಿಕೆಗೆ ರಾಹುಲ್ ಗಾಂಧಿ ಖಂಡನೆ
ವಯನಾಡ್, ಅಕ್ಟೋಬರ್ 20: ಮಧ್ಯಪ್ರದೇಶ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಇಮಾರ್ತಿ ದೇವಿ ಅವರನ್ನು 'ಐಟಂ' ಎಂದು ಹೀಯಾಳಿಸಿದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿಕೆಯನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಖಂಡಿಸಿದ್ದಾರೆ.
ಕೇರಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕಮಲ್ ನಾಥ್ ನನ್ನ ಪಕ್ಷದವರು ನಿಜ ಆದರೆ ಅವರು ಬಳಸಿದ ಭಾಷೆಯ ಮಾದರಿ ನನಗೆ ವೈಯಕ್ತಿಕವಾಗಿ ಇಷ್ಟವಾಗಲಿಲ್ಲ. ಅದು ಯಾರೇ ಆಗಿದ್ದರೂ ನಾನು ಅದನ್ನು ಅನುಮೋದಿಸುವುದಿಲ್ಲ. ಇದು ಬಹಳ ದುರದೃಷ್ಟಕರ' ಎಂದರು.
ಆದರೆ ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ ನಂತರವೂ ಕ್ಷಮಾಪಣೆ ಕೇಳಲು ಕಮಲ್ ನಾಥ್ ನಿರಾಕರಿಸಿದ್ದಾರೆ. 'ಅದು ರಾಹುಲ್ ಗಾಂಧಿ ಅವರ ಅಭಿಪ್ರಾಯ. ನಾನು ಯಾವ ಅರ್ಥದಲ್ಲಿ ಆ ಹೇಳಿಕೆ ನೀಡಿದ್ದೇನೆ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ನಾನು ಯಾರನ್ನೂ ಅವಮಾನಿಸುವ ಉದ್ದೇಶ ಹೊಂದಿರದೇ ಇದ್ದಾಗ ನಾನೇಕೆ ಕ್ಷಮೆ ಕೇಳಬೇಕು? ಯಾರಿಗಾದರೂ ಅವಮಾನವಾಗಿದ್ದರೆ, ನಾನು ಈಗಾಗಲೇ ಅದಕ್ಕೆ ವಿಷಾದ ವ್ಯಕ್ತಪಡಿಸಿದ್ದೇನೆ' ಎಂದಿದ್ದಾರೆ.

'ನಾನು ಅಗೌರವ ತೋರುವಂತಹದ್ದನ್ನು ಏನನ್ನೂ ಹೇಳಿಲ್ಲ. ನಾನು ಮಹಿಳೆಯರನ್ನು ಗೌರವಿಸುತ್ತೇನೆ. ಇದು ಅಗೌರವಯುತವಾದುದು ಎಂದು ಯಾರಿಗಾದರೂ ಅನಿಸಿದರೆ ಅದಕ್ಕೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ' ಎಂದು ಅವರು ಸೋಮವಾರ ಹೇಳಿದ್ದರು.
ಮೋದಿ ಮಾತನಾಡುತ್ತಾರೆಯೇ?:
ಮಂಗಳವಾರ ಸಂಜೆ 6 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡುವ ಪ್ರಕಟಣೆಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, 'ಚೀನೀಯರು ನಮ್ಮ ದೇಶ ತೊರೆಯುತ್ತಾರೆಯೇ ಎಂದು ಮೋದಿಯಿಂದ ತಿಳಿಯುವುದನ್ನು ಬಯಸಿದ್ದೇನೆ. ಈ ರೀತಿ ಮೌನವಾಗಿರುವ ಜಗತ್ತಿನ ಬೇರೆ ಯಾವ ದೇಶವೂ ಇಲ್ಲ ಎನಿಸುತ್ತದೆ. ಪ್ರಧಾನಿ ಇದರ ಕುರಿತು ಮಾತನಾಡುವುದನ್ನು ಬಯಸುತ್ತೇನೆ. ಆದರೆ ನಾನು ನಿಮಗೆ ಖಚಿತವಾಗಿ ಹೇಳುತ್ತೇನೆ, ಅವರ ಚೀನಾ ಬಗ್ಗೆ ಒಂದೂ ಪದ ಬಳಸುವುದಿಲ್ಲ' ಎಂದು ಲೇವಡಿ ಮಾಡಿದ್ದಾರೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications