ತನ್ನನ್ನು ಮೊದಲು ಎತ್ತಿ ಹಿಡಿದಿದ್ದ ನರ್ಸ್ ರಾಜಮ್ಮನನ್ನು ಭೇಟಿಯಾದ ರಾಹುಲ್
ತಿರುವನಂತಪುರಂ, ಜೂನ್ 9: ಅಮೇಥಿಯಲ್ಲಿ ಸೋತರೂ, ತನ್ನನ್ನು ಅಭೂತಪೂರ್ವ ಮತಗಳ ಅಂತರದಿಂದ ಗೆಲ್ಲಿಸಿದ್ದ ವಯನಾಡು ಜನತೆಗೆ ಧನ್ಯವಾದ ಸಲ್ಲಿಸುವ ಸಲುವಾಗಿ, ಮೂರು ದಿನಗಳ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಪ್ರವಾಸ, ಹಲವು ಭಾವನಾತ್ಮಕ ಸನ್ನಿವೇಶಗಳಿಗೆ ಸಾಕ್ಷಿಯಾಗಿದೆ.
ಮೂರು ದಿನಗಳ ಭೇಟಿಯ ಕೊನೆಯ ದಿನವಾದ ಭಾನುವಾರ ರಾಹುಲ್, ವಯನಾಡು ನಲ್ಲಿ ನರ್ಸ್ ರಾಜಮ್ಮ ವವಾತಿಲ್ ಅವರನ್ನು ಭೇಟಿಯಾಗಿದ್ದಾರೆ. ರಾಹುಲ್ ಇಲ್ಲಿಗೆ ಬಂದಾಗ ಅವರನ್ನು ಭೇಟಿಯಾಗುವ ಇಂಗಿತವನ್ನು ರಾಜಮ್ಮ ವ್ಯಕ್ತಪಡಿಸಿದ್ದರು.
ಜೂನ್ 19, 1970ರಂದು ರಾಹುಲ್ ಗಾಂಧಿ ಜನಿಸಿದ ದಿನ. ಆ ವೇಳೆ, ರಾಜಮ್ಮ ದೆಹಲಿಯ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ಶುಶ್ರೂಕಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ರಾಜೀವ್ ಗಾಂಧಿ - ಸೋನಿಯಾ ಗಾಂಧಿ ದಂಪತಿಗಳ ಗಂಡು ಮಗುವಿನ ಜನನಕ್ಕೆ (ರಾಹುಲ್) ರಾಜಮ್ಮ ಸಾಕ್ಷಿಯಾಗಿದ್ದರು.

1987ರಲ್ಲಿ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದ ರಾಜಮ್ಮ, ಕೇರಳದ ಸುಲ್ತಾನ್ ಬತ್ತೇರಿ ಬಳಿಯ ಕಲ್ಲೂರಿನಲ್ಲಿ ನೆಲೆಸಿದ್ದರು. ರಾಹುಲ್ ಭೇಟಿಯಾಗುವ ಆಸೆಯನ್ನು ಕಾಂಗ್ರೆಸ್ ಮುಖಂಡರಲ್ಲಿ ರಾಜಮ್ಮ ತೋಡಿಕೊಂಡಿದ್ದರು. ಅದಕ್ಕೆ ಸಮಯ ಈಗ ಕೂಡಿ ಬಂದಿದೆ.
ಇದೇ ಮೇ ತಿಂಗಳಲ್ಲಿ, ಅದರಲ್ಲೂ ಲೋಕಸಭಾ ಚುನಾವಣೆಯ ಪ್ರಚಾರದ ಭರಾಟೆ ಜೋರಾಗಿದ್ದಾಗ, ರಾಹುಲ್ ಗಾಂಧಿಯ ಪೌರತ್ವದ ವಿಚಾರ ಭಾರೀ ಚರ್ಚೆಯ ವಿಷಯವಾಗಿತ್ತು. ಆ ವೇಳೆ, ರಾಜಮ್ಮ, ಈ ವಿಚಾರದಲ್ಲಿ ಯಾರೂ ಶಂಕೆ ವ್ಯಕ್ತಪಡಿಸಬಾರದು, ಯಾಕೆಂದರೆ, ಅವರ ಜನನಕ್ಕೆ ನಾನೂ ಸಾಕ್ಷಿಯಾಗಿದ್ದೆ ಎಂದು ಹೇಳಿದ್ದರು.
ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ನೀಡಿದ್ದ ದೂರಿನನ್ವಯ, ಗೃಹ ಸಚಿವಾಲಯ ಪೌರತ್ವದ ವಿಚಾರದಲ್ಲಿ ರಾಹುಲ್ ಗಾಂಧಿಗೆ ನೊಟೀಸ್ ಜಾರಿ ಮಾಡಿತ್ತು.
ರಾಹುಲ್ ಗಾಂಧಿ ನರ್ಸ್ ರಾಜಮ್ಮನನ್ನು ಭೇಟಿಯಾಗಿರುವುದು, ಸಾಮಾಜಿಕ ತಾಣದಲ್ಲಿ ವ್ಯಾಪಕ ಪ್ರಶಂಸೆಗೊಳಗಾಗಿದೆ.
-
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು











Click it and Unblock the Notifications