ರಾಹುಲ್ ಆಸ್ತಿ 15.88 ಕೋಟಿ, 72 ಲಕ್ಷ ಸಾಲ, ಎಮ್.ಫಿಲ್., ವಿದ್ಯಾಭ್ಯಾಸ
Recommended Video

ವಯನಾಡು (ಕೇರಳ), ಏಪ್ರಿಲ್ 5: ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರ ಆಸ್ತಿ ಮೌಲ್ಯ 9.4 ಕೋಟಿ ರುಪಾಯಿ ಇದ್ದದ್ದು ಕಳೆದ ಐದು ವರ್ಷಗಳಲ್ಲಿ 15.88 ಕೋಟಿ ರುಪಾಯಿಗೆ ಏರಿಕೆ ಆಗಿದೆ. 2019ರ ಲೋಕಸಭಾ ಚುನಾವಣೆಗೆ ವಯನಾಡು ಲೋಕಸಭಾ ಕ್ಷೇತ್ರದಿಂದ ಗುರುವಾರ ಅವರು ನಾಮಪತ್ರ ಸಲ್ಲಿಸುವ ವೇಳೆ ನೀಡಿದ ಅಫಿಡವಿಟ್ ನಲ್ಲಿ ಈ ಸಂಗತಿ ಬಯಲಾಗಿದೆ.
ಅವರ ಬಳಿ ಒಟ್ಟು 9.4 ಕೋಟಿ ರುಪಾಯಿ ಮೌಲ್ಯದ ಆಸ್ತಿ ಇದೆ. 72 ಲಕ್ಷ ರುಪಾಯಿ ಸಾಲ ಮಾಡಿದ್ದಾರೆ. ಇನ್ನು ರಾಹುಲ್ ಬಳಿ ಇರುವ ನಗದು ಕೇವಲ 40 ಸಾವಿರ ರುಪಾಯಿ. ಗುರುವಾರದಂದು ಕಲ್ ಪೆಟ್ಟ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ನಾಮಪತ್ರವನ್ನು ರಾಹುಲ್ ಸಲ್ಲಿಸಿದರು. ಈ ವೇಳೆ ಸೋದರಿ ಪ್ರಿಯಾಂಕಾ ಗಾಂಧಿ ಜತೆಗಿದ್ದರು.
2017-18 ಆರ್ಥಿಕ ವರ್ಷದಲ್ಲಿ ರಾಹುಲ್ ಅವರ ಆದಾಯ 1.11 ಕೋಟಿ ರುಪಾಯಿ ಇದೆ. ಅವರ ಆದಾಯ ಮೂಲದಲ್ಲಿ ಸಂಸದರಾಗಿ ಅವರಿಗೆ ಬರುವ ಸಂಬಳ, ರಾಯಲ್ಟಿ ಮೂಲಕ ಬರುವ ಆದಾಯ, ಬಾದಿಗೆ ಮತ್ತು ಹೂಡಿಕೆಗಳು ಒಳಗೊಂಡಿವೆ.

ದೆಹಲಿಯ ಸುಲ್ತಾನ್ ಪುರ್ ಹಳ್ಳಿಯಲ್ಲಿನ ಫಾರ್ಮ್ ನಲ್ಲಿ ರಾಹುಲ್ ಗಾಂಧಿ ಅವರ ಪಾಲಿದೆ. ಅದರ ಮೌಲ್ಯ 1.32 ಕೋಟಿ ರುಪಾಯಿ. ಇನ್ನು 2014ರಲ್ಲಿ ಗುರ್ ಗ್ರಾಮ್ ನ ಸಿಗ್ನೇಚರ್ ಟವರ್ ನಲ್ಲಿ ಕಚೇರಿ ಸ್ಥಳ ಖರೀದಿಸಿದ್ದು, ಅದರ ಮೌಲ್ಯ 8.75 ಕೋಟಿ ರುಪಾಯಿ ಆಅಗಿದೆ. ಅವರ ಬಳಿ ಒಡವೆಗಳು ಸಹ ಇದ್ದು, ಅವುಗಳ ಮೌಲ್ಯ 2.91 ಲಕ್ಷ ರುಪಾಯಿ ಎಂದು ಘೋಷಿಸಲಾಗಿದೆ.
ಕಾಂಗ್ರೆಸ್ ಅಧ್ಯಕ್ಷರ ಮೇಲೆ 5 ಪ್ರಕರಣಗಳು ಬಾಕಿ ಇದ್ದು, ಅದರಲ್ಲಿ 4 ಮಾನನಷ್ಟ ಮೊಕದ್ದಮೆಗಳಾಗಿವೆ. ಆಂದಹಾಗೆ ಶೈಕ್ಷಣಿಕ ಅರ್ಹತೆ ಎಂಬಲ್ಲಿ ಅಭಿವೃದ್ಧಿ ಅಧ್ಯಯನದಲ್ಲಿ ಕೇಂಬಿಡ್ಜ್ ವಿಶ್ವವಿದ್ಯಾಲಯದ ಟ್ರಿನಿಟಿ ಕಾಲೇಜಿನಿಂದ ಎಮ್.ಫಿಲ್., ಮಾಡಿದ್ದಾರೆ ಎಂದು ತಿಳಿಸಲಾಗಿದೆ.
ರಾಹುಲ್ ಗಾಂಧಿ ಅವರು 2004ರಿಂದ ಉತ್ತರಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾ ಬರುತ್ತಿದ್ದಾರೆ. ಈ ಬಾರಿ ದಕ್ಷಿಣ ಭಾರತದ ಕೇರಳ ರಾಜ್ಯದ ವಯನಾಡಿನಿಂದಲೂ ಸ್ಪರ್ಧೆಗೆ ಇಳಿದಿದ್ದಾರೆ.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications