ಮತದಾರರ ಸಹಾಯಕ್ಕೆ ನಿಂತ ರೋಬೋಟ್; ಕೇರಳದಲ್ಲೊಂದು ಹೊಸ ಪ್ರಯೋಗ
ತಿರುವನಂತಪುರಂ, ಡಿಸೆಂಬರ್ 11: ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತದಾನ ಪ್ರಕ್ರಿಯೆ ನಡೆದಿದ್ದು, ಗುರುವಾರ ಎರ್ನಾಕುಲಂನ ನಗರ ಸಭೆಯೊಂದರಲ್ಲಿ ಮತದಾನಕ್ಕೆಂದು ಬಂದವರಿಗೆ ಅಚ್ಚರಿ ಕಾದಿತ್ತು.
ಮತದಾರರನ್ನು ಸ್ವಾಗತಿಸಲು, ಅವರ ದೇಹದ ಉಷ್ಣತೆ ಪರೀಕ್ಷಿಸಲು, ಸ್ಯಾನಿಟೈಸರ್ ನೀಡುವ ಕೆಲಸವನ್ನು ಮನುಷ್ಯರ ಬದಲು ರೋಬೋಟ್ ಮಾಡುತ್ತಿದ್ದುದು ಆ ಅಚ್ಚರಿಗೆ ಕಾರಣವಾಗಿತ್ತು.
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಎರ್ನಾಕುಲಂ ಜಿಲ್ಲಾಡಳಿತವು ಸಯಾಬಾಟ್ ಎಂಬ ಈ ರೋಬೋಟ್ ನನ್ನು ಮತದಾನಕ್ಕೆ ತರಿಸಿಕೊಂಡಿತ್ತು. ಈ ರೋಬೋಟ್ ನ ಕಾರ್ಯವೈಖರಿಯೇ ಎಲ್ಲರ ಕಣ್ಸೆಳೆದಿತ್ತು. ಮತದಾನಕ್ಕೆಂದು ಬರುವವರ ದೇಹದ ಉಷ್ಣತೆಯನ್ನು ಪರೀಕ್ಷೆ ಮಾಡಿ, ಸ್ಯಾನಿಟೈಸರ್ ನೀಡುವ ಕೆಲಸವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದ ರೋಬೋಟ್ ನನ್ನೇ ಬೆರಗಿನಿಂದ ಜನರು ನೋಡುತ್ತಾ ನಿಂತರೆ, ಅವರಿಗೆ ಸಾಮಾಜಿಕ ಅಂತರ ಪಾಲನೆ ಮಾಡಬೇಕೆಂಬ ಎಚ್ಚರಿಕೆಯನ್ನೂ ನೀಡುತ್ತಿತ್ತು.

ಜನರ ದೇಹದ ಉಷ್ಣತೆ ಪರೀಕ್ಷಿಸಿ, ನಿರ್ದಿಷ್ಟ ತಾಪಮಾನಕ್ಕಿಂತ ಹೆಚ್ಚಿನ ತಾಪಮಾನವಿದ್ದರೆ ಘೋಷಣೆ ಮಾಡಿ, ಪೋಲಿಂಗ್ ಅಧಿಕಾರಿಯನ್ನು ಸಂಪರ್ಕಿಸುವಂತೆ ಸೂಚನೆ ನೀಡುತ್ತಿತ್ತು. ಮಾಸ್ಕ ಧರಿಸಲು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತಿಳಿಹೇಳುವ ಕೆಲಸವನ್ನು ರೋಬೋಟ್ ನಿರ್ವಹಿಸಿತ್ತು.
ಮತದಾನದ ಸಂದರ್ಭ ಕೋವಿಡ್ ನಿಯಮಗಳನ್ನು ಪಾಲಿಸಲು ರೋಬೋಟ್ ತರಲಾಗಿದೆ. ಈ ಬಾರಿ ರೋಬೋಟ್ ಅನ್ನು ಪ್ರಾಯೋಗಿಕವಾಗಿ ಬಳಸಲಾಗಿದೆ. ಇದರ ಕಾರ್ಯವೈಖರಿ ಯಶಸ್ವಿಯಾದರೆ ಮುಂದೆ ಇನ್ನಷ್ಟು ಕಡೆ ಬಳಸಿಕೊಳ್ಳಲಾಗುವುದು ಎಂದು ಎರ್ನಾಕುಲಂ ಡಿಸಿ ಸುಹಾಸ್ ತಿಳಿಸಿದ್ದಾರೆ.
ಭಾರತದಿಂದಲೇ ಆಡಿ, 520 ಮಿ ಡಾಲರ್ ಪವರ್ಬಾಲ್ ಜಾಕ್ಪಾಟ್ ಗೆಲ್ಲಿ
ಎರ್ನಾಕುಲಂ, ಕೊಟ್ಟಾಯಂ, ತ್ರಿಶೂರ್, ಪಾಲಕ್ಕಡ್, ವೈನಾಡ್ ಜಿಲ್ಲೆಗಳಲ್ಲಿ ಸ್ಥಳೀಯ ಸಂಸ್ಥೆಗಳ ಮತದಾನ ಗುರುವಾರ ನಡೆದಿದೆ. ಮತದಾನ ಸಮಯದಲ್ಲಿ ರೋಬೋಟ್ ಬಳಕೆಗೆ ಮೆಚ್ಚುಗೆಯೂ ವ್ಯಕ್ತಗೊಂಡಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications