ಶಬರಿಮಲೆಯಲ್ಲಿ ಮಂಡಲ ಪೂಜೆ; ಪರಿಶೀಲನೆ ನಂತರ ಭಕ್ತರಿಗೆ ಅವಕಾಶ
ತಿರುವನಂತಪುರಂ, ಡಿಸೆಂಬರ್ 26: ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಪವಿತ್ರ ಮಂಡಲ ಪೂಜೆ ಶನಿವಾರದಿಂದ ಆರಂಭವಾಗಿದ್ದು, ಹಲವು ಕಡೆಗಳಿಂದ ಭಕ್ತರು ಅಯ್ಯಪ್ಪನ ದರ್ಶನಕ್ಕೆ ಆಗಮಿಸುತ್ತಿದ್ದಾರೆ.
ಕೊರೊನಾ ಸೋಂಕಿನ ನಡುವೆ ಅಯ್ಯಪ್ಪನ ದರ್ಶನಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದ್ದು, ಭಕ್ತರು ತಮ್ಮೊಂದಿಗೆ ಕೊರೊನಾ ಪರೀಕ್ಷೆಯ ಪ್ರಮಾಣ ಪತ್ರ ತರುವುದು ಕಡ್ಡಾಯವಾಗಿದೆ. ಕೊರೊನಾ ಆರ್ ಟಿ ಪಿಸಿಆರ್ ಪರೀಕ್ಷೆ ನಡೆಸಿ, ಆ ಪ್ರಮಾಣ ಪತ್ರವನ್ನು ತಮ್ಮೊಂದಿಗೆ ತಂದವರಿಗಷ್ಟೆ ಪ್ರವೇಶಕ್ಕೆ ಅನುಮತಿ ನೀಡಲು ಕೇರಳ ಹೈಕೋರ್ಟ್ ಹಾಗೂ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ.
ದೇವಸ್ಥಾನ ಪ್ರವೇಶಿಸುವ 48 ಗಂಟೆಗಳ ಮುನ್ನ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಿದ ಪ್ರಮಾಣ ಪತ್ರ ತರುವುದು ಕಡ್ಡಾಯ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಕೂಡ ಭಕ್ತರಿಗೆ ತಿಳಿಸಿದೆ. "ದೇವಸ್ಥಾನ ಪ್ರವೇಶಕ್ಕೆ ಮುನ್ನ, 48 ಗಂಟೆಗಳ ಒಳಗೆ ನಡೆಸಿದ ಕೊರೊನಾ ಪರೀಕ್ಷೆಯ ಪ್ರಮಾಣ ಪತ್ರ ತರುವುದು ಭಕ್ತರಿಗೆ ಕಡ್ಡಾಯ. ಇಲ್ಲವೆಂದರೆ ಭಕ್ತರಿಗೆ ದೇವಸ್ಥಾನಕ್ಕೆ ಅನುಮತಿ ಇಲ್ಲ" ಎಂದು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಎನ್ ವಾಸು ತಿಳಿಸಿದ್ದಾರೆ.

ಶನಿವಾರದಿಂದ ಪ್ರಮಾಣ ಪತ್ರಗಳನ್ನು ಪರಿಶೀಲಿಸಿ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ.
ಈಚೆಗೆ ಹೈಕೋರ್ಟ್, ಶಬರಿಮಲೆಗೆ ಮಂಡಲ ಮಕರವಿಳಕ್ಕು ಅವಧಿ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆಯನ್ನೂ ಐದು ಸಾವಿರಕ್ಕೆ ಏರಿಸಿತ್ತು. ಭಕ್ತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಶಬರಿಮಲೆಯಲ್ಲಿ ಆಂಟಿಜೆನ್ ಪರೀಕ್ಷೆಯನ್ನು ಚುರುಕುಗೊಳಿಸಿದೆ.
ಡಿಸೆಂಬರ್ 26ರ ಮಂಡಲ ಪೂಜೆ ನಂತರ ದೇವಸ್ಥಾನವನ್ನು ಮುಚ್ಚಲಿದ್ದು, ಡಿಸೆಂಬರ್ 31ರ ಮಕರವಿಳಕ್ಕು ಪೂಜೆಯಂದು ತೆರೆಯಲಾಗುತ್ತದೆ. ಡಿಸೆಂಬರ್ 31 ರಿಂದ ಜನವರಿ 19ರ ತನಕ ಮಕರವಿಳಕ್ಕು ಹಬ್ಬದ ಋತು ಆರಂಭವಾಗಲಿದ್ದು, ಆರ್ಟಿ-ಪಿಸಿಆರ್ ಪರೀಕ್ಷೆ ನಡೆಸಿ, ಕೋವಿಡ್ 19 ನೆಗೆಟಿವ್ ಇದ್ದ ಭಕ್ತರು ಮಾತ್ರ ಶಬರಿ ಬೆಟ್ಟವನ್ನೇರಬಹುದಾಗಿದೆ.
ಕೇರಳದಲ್ಲಿ ಶುಕ್ರವಾರ, ಡಿ.25ರ ವರದಿಯಂತೆ, 5000 ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು 732084 ಪ್ರಕರಣಗಳು ದಾಖಲಾಗಿದ್ದು, 664951 ಮಂದಿ ಬಿಡುಗಡೆಯಾಗಿದ್ದಾರೆ. 2,930 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications