ಶಬರಿಮಲೆ ಪೂಜೆ ಪುನರಾರಂಭ: ಮುಖ್ಯ ಅರ್ಚಕ ಕ್ವಾರೆಂಟೈನ್
ತಿರುವನಂತಪುರಂ, ಡಿಸೆಂಬರ್ 30: ಶಬರಿಮಲೆ ಪವಿತ್ರ ಅಯ್ಯಪ್ಪ ಸ್ವಾಮಿ ದೇವಸ್ಥಾನದ ವಾರ್ಷಿಕ ಉತ್ಸವದ ಎರಡನೆಯ ಅವಧಿಯ ಪೂಜಾ ವಿಧಾನಗಳು ಬುಧವಾರ ಆರಂಭವಾಗಿದೆ. ಕೋವಿಡ್ ಪಾಸಿಟಿವ್ ಪತ್ತೆಯಾದ ಮೂವರು ವ್ಯಕ್ತಿಗಳ ಜತೆಗೆ ದೇವಸ್ಥಾನದ ಮುಖ್ಯ ಅರ್ಚಕ ಸಂಪರ್ಕಕ್ಕೆ ಬಂದಿರುವುದು ಆತಂಕ ಮೂಡಿಸಿದೆ. ಈ ನಡುವೆಯೇ ಮಕರವಿಳಕ್ಕು ಹಬ್ಬದ ಸಂಪ್ರದಾಯಗಳು ಸಂಜೆ ಶುರುವಾಗಿವೆ.
ಬುಧವಾರ ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲು ತೆರೆದಿದ್ದು, ಬುಕಿಂಗ್ ಪೋರ್ಟಲ್ ಮತ್ತೆ ಕಾರ್ಯಾರಂಭ ಮಾಡಿದೆ. ಗುರುವಾರ ಬೆಳಗಿನಿಂದ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ ಎಂದು ಟ್ರಾವಂಕೋರ್ ದೇವಸ್ವಂ ಮಂಡಳಿ ತಿಳಿಸಿದೆ.
ಮಕರವಿಳಕ್ಕು ಹಬ್ಬವು ಜನವರಿ 14ರಂದು ನಡೆಯಲಿದ್ದು, ಅಂದು ವೈಭವೋಪೇತ ಪೂಜೆ ಆಚರಣೆಗಳು ನಡೆಯಲಿದೆ. ಜನವರಿ 20ರಿಂದ ದೇವಸ್ಥಾನದ ಬಾಗಿಲು ಮುಚ್ಚಲಿದೆ. ಮುಖ್ಯ ಅರ್ಚಕ ವಿ.ಕೆ. ಜಯರಾಜನ್ ಪೊಟ್ಟಿ ಅವರು ಮಂಗಳವಾರದಿಂದ ಸ್ವತಃ ಕ್ವಾರೆಂಟೈನ್ಗೆ ಒಳಗಾಗಿದ್ದಾರೆ ಎಂದು ಟಿಡಿಬಿ ಅಧಿಕಾರಿಗಳು ತಿಳಿಸಿದ್ದಾರೆ.

'ಅರ್ಚಕರೊಂದಿಗೆ ನಿಕಟ ಸಂಪರ್ಕಕ್ಕೆ ಬಂದಿದ್ದ ಮೂವರು ವ್ಯಕ್ತಿಗಳಲ್ಲಿ ಕೋವಿಡ್ 19 ಪಾಸಿಟಿವ್ ಕಂಡುಬಂದಿದೆ. ಅವರು ಶಬರಿಮಲೆಯಲ್ಲಿಯೇ ಕ್ವಾರೆಂಟೈನ್ಗೆ ಒಳಗಾಗಿದ್ದಾರೆ. ಪ್ರಸ್ತುತ ದೇವಸ್ಥಾನದ ದೈನಂದಿನ ಆಚರಣೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇವಸ್ಥಾನದ ಪೂಜಾ ಕಾರ್ಯದ ಉಸ್ತುವಾರಿ ಪಡೆದುಕೊಂಡ ಒಂದು ವರ್ಷದ ಬಳಿಕವಷ್ಟೇ ಮುಖ್ಯ ಅರ್ಚಕರು ಪವಿತ್ರ ಬೆಟ್ಟದ ದೇವಾಲಯವನ್ನು ತೊರೆಯಬಹುದಾಗಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications