ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿ: ನಾಳೆ ಮಂಡಲಪೂಜೆ
ತಿರುವನಂತಪುರಂ, ಡಿಸೆಂಬರ್ 25: ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಪವಿತ್ರ ಮಂಡಲ ಪೂಜೆ ಶನಿವಾರದಿಂದ ಶುರುವಾಗಲಿದೆ. ಅಯ್ಯಪ್ಪ ಸ್ವಾಮಿಗೆ ತೊಡಿಸುವ ಚಿನ್ನದ ಅಂಗಿಯ ಮೆರವಣಿಗೆ ಶುಕ್ರವಾರ ಶಬರಿಮಲೆಗೆ ತಲುಪಲಿದೆ. ಅಲ್ಲಿಂದ ಸನ್ನಿಧಾನಕ್ಕೆ ಅದನ್ನು ಕೊಂಡೊಯ್ದ ಬಳಿಕ ಮಂಡಲ ಪೂಜೆ ಆರಂಭವಾಗಲಿದೆ. ಅದಕ್ಕೆ ಅಗತ್ಯವಾದ ಎಲ್ಲ ತಯಾರಿಗಳು ಪೂರ್ಣಗೊಂಡಿದೆ.
42 ದಿನಗಳ ವ್ರತದ ಬಳಿಕ ಶಬರಿಮಲೆ ದೇವಸ್ಥಾನವು ಮಂಡಲ ಪೂಜೆಗೆ ಸಜ್ಜುಗೊಂಡಿದೆ. ಆಚರಣೆಗಳಿಗೆ ಅನುಗುಣವಾಗಿ ಅರಣ್ಮುಲ ಪಾರ್ಥಸಾರಥಿ ದೇವಸ್ಥಾನದಿಂದ ಹೊರಟ ತಂಕಯಂಕಿ ರಥಯಾತ್ರೆಯು ಪಂಬಾಕ್ಕೆ ಇಂದು ತಲುಪಲಿದೆ. ಮೆರವಣಿಗೆಯು ಮಧ್ಯಾಹ್ನ 1 ಗಂಟೆಗೆ ಪಂಬಾದ ಗಣಪತಿ ದೇವಸ್ಥಾನಕ್ಕೆ ತಲುಪಿದೆ. 3 ಗಂಟೆಯವರೆಗೂ ತಂಕ ಅಂಕಿಯನ್ನು ಪ್ರದರ್ಶನಕ್ಕೆ ಇರಿಸಿ ಬಳಿಕ ವಿಶೇಷ ಪೆಟ್ಟಿಗೆಗೆ ವರ್ಗಾಯಿಸಲಾಗುತ್ತದೆ. ಅಯ್ಯಪ್ಪ ಸೇವಾ ಸಂಘದ ಕೆಲಸಗಾರರು ಅದನ್ನು ತಲೆಯ ಮೇಲೆ ಇರಿಸಿಕೊಂಡು ಅರಣ್ಯ ಪ್ರದೇಶದಲ್ಲಿ ಸಾಗಿ ಸಂಜೆ 5 ಗಂಟೆಗೆ ಶರಮುಕ್ತಿಗೆ ಸಾಗಿಸಲಿದ್ದಾರೆ.
ದೇವಸ್ವಂ ಮಂಡಳಿಯ ಅಧಿಕಾರಿಗಳು ತಂಕ ಅಂಕಿಯನ್ನು ಶರಮುಕ್ತಿಯಲ್ಲಿ ಬರಮಾಡಿಕೊಂಡು ಸನ್ನಿಧಾನಕ್ಕೆ ಸಾಗಿಸುತ್ತಾರೆ. ಅದನ್ನು ಸೋಪಾನದಲ್ಲಿ ತಂತ್ರಿಗಳು ಮತ್ತು ಮುಕ್ತ ಅರ್ಚಕರು ಸ್ವಾಗತಿಸುತ್ತಾರೆ. ಇದರ ನಂತರ ಅಯ್ಯಪ್ಪನ ವಿಗ್ರಹಕ್ಕೆ ಚಿನ್ನದ ದಿರಿಸನ್ನು ತೊಡಿಸಿ ಸಂಜೆ 6.30ರಿಂದ ದೀಪಾರಾಧನೆ ಆರಂಭವಾಗುತ್ತದೆ.

ಸಂಜೆ 6.30ರ ಆಚರಣೆಗಳು ಪೂರ್ಣಗೊಳ್ಳುವವರೆಗೂ 18 ಮೆಟ್ಟಿಲನ್ನು ಏರಿ ಬರಲು ಭಕ್ತರಿಗೆ ಅವಕಾಶ ನೀಡುವುದಿಲ್ಲ. ಉಚ್ಚಪೂಜಾ ಆರಂಭವಾದ ನಂತರ ಮಧ್ಯಾಹ್ನ 3 ಗಂಟೆಯವರೆಗೆ ಮೆರವಣಿಗೆ ಹೊರಡುವವರೆಗೂ ಭಕ್ತರು ಪಂಬಾದಿಂದ ಹೊರಹೋಗುವಂತಿಲ್ಲ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications