ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಬರಿಮಲೆಯಲ್ಲಿ ಕೆಲಸ ಮಾಡುತ್ತಿರುವ ಪೊಲೀಸರಿಗೆ ಉಚಿತ ಊಟವಿಲ್ಲ

|
Google Oneindia Kannada News

ತಿರುವನಂತಪುರಂ, ನವೆಂಬರ್.18: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಶಬರಿಮಲೆ ಅಯ್ಯಪ್ಪಸ್ವಾಮಿ ಸನ್ನಿಧಿಯಲ್ಲಿ ಸೇವೆಗೆ ನಿಯೋಜನೆಗೊಂಡ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರಿಗೆ ಈ ಬಾರಿ ಉಚಿತವಾಗಿ ಉಪಹಾರ ಮತ್ತು ಊಟವನ್ನು ನೀಡುತ್ತಿಲ್ಲ ಎಂದು ತಿಳಿದು ಬಂದಿದೆ.

ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ ದೇವಸ್ವಂ ಆಡಳಿತ ಮಂಡಳಿಯು ಯಾವುದೇ ರೀತಿ ಸಬ್ಸಿಡಿ ನೀಡಿಲ್ಲವಾದ್ದರಿಂದ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಆರೋಪಿಸಲಾಗುತ್ತಿದೆ. ಊಟ ಮತ್ತು ಉಪಹಾರದ ಹಣವನ್ನು ಪೊಲೀಸ್ ಸಿಬ್ಬಂದಿಯಿಂದಲೇ ಪಡೆಯಲಾಗುತ್ತಿದೆ.

ಶಬರಿಮಲೆ ದರ್ಶನ: ಭಕ್ತರ ಮಿತಿ ಹೆಚ್ಚಿಸುವ ಸಾಧ್ಯತೆಶಬರಿಮಲೆ ದರ್ಶನ: ಭಕ್ತರ ಮಿತಿ ಹೆಚ್ಚಿಸುವ ಸಾಧ್ಯತೆ

ಪೊಲೀಸರು ಮತ್ತು ಭದ್ರತಾ ಸಿಬ್ಬಂದಿಗೆ ಉಚಿತ ಆಹಾರ ಒದಗಿಸುವಲ್ಲಿ ಸರ್ಕಾರವೇ ಸಬ್ಸಿಡಿ ನೀಡುತ್ತಿಲ್ಲ. ಇದನ್ನು ಮುಚ್ಚಿಹಾಕುವುದಕ್ಕಾಗಿ ದೇವಸ್ವಂ ಆಡಳಿತ ಮಂಡಳಿ ವಿರುದ್ಧ ವೃಧಾ ಆರೋಪ ಮಾಡಲಾಗುತ್ತಿದೆ ಎಂದು ಮಂಡಳಿ ಹೇಳುತ್ತಿದೆ.

Sabarimala News: On Duty Police Not Get Free Food At Sabarimala

ಆಡಳಿತ ಮಂಡಳ ಆದಾಯಕ್ಕೆ ಭಾರಿ ಹೊಡೆತ:

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದಾಗಿ ಶಬರಿಮಲೆ ಯಾತ್ರಾರ್ಥಿಗಳ ಸಂಖ್ಯೆಯನ್ನು ನಿರ್ದಿಷ್ಟ ಪ್ರಮಾಣದಲ್ಲಿ ನಿಗದಿಗೊಳಿಸಲಾಗಿದೆ. ಇದರಿಂದಾಗಿ ದೇವಸ್ಥಾನದ ಆದಾಯಕ್ಕೆ ಭಾರಿ ಹೊಡೆತ ಬಿದ್ದಿದೆ. ಕಳೆದ ವರ್ಷ ಈ ಅವಧಿಗೆ 80,000 ಯಾತ್ರಾರ್ಥಿಗಳು ಅಯ್ಯಪ್ಪಸ್ವಾಮಿ ಸನ್ನಿಧಿಗೆ ಭೇಟಿ ನೀಡಿದ್ದು, 263 ಕೋಟಿಗೂ ಅಧಿಕ ಮೊತ್ತದ ಆದಾಯ ಬಂದಿತ್ತು. ಈ ಹಿನ್ನೆಲೆ ದಿನಕ್ಕೆ ಕೇವಲ 1000 ಯಾತ್ರಾರ್ಥಿಗಳು ಮತ್ತು ರಜೆ ದಿನಗಳಲ್ಲಿ 2,000 ಯಾತ್ರಾರ್ಥಿಗಳು ಶಬರಿಮಲೆಗೆ ತೆರಳುವುದಕ್ಕೆ ಅವಕಾಶ ನೀಡಲಾಗಿದೆ. ಈ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುವುದಕ್ಕೆ ಆಡಳಿತ ಮಂಡಳಿಯು ಮನವಿ ಮಾಡಿದ್ದು, ಆ ಮೂಲಕವಾದರೂ ನಷ್ಟವನ್ನು ಕೊಂಚ ಮಟ್ಟಿಗೆ ಸರಿದೂಗಿಸಿಕೊಳ್ಳಲು ಪ್ರಸ್ತಾಪಿಸಲಾಗಿದೆ.

English summary
Sabarimala News: On Duty Police Not Get Free Food At Sabarimala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X