ಶಬರಿಮಲೆ ಗರ್ಭಗುಡಿ ಮುಚ್ಚಲು ರಾಜಮನೆತನದ ಆದೇಶ?
ತಿರುವನಂತಪುರಂ, ಅ 19: ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುವು ಮಾಡಿಕೊಟ್ಟ ಸುಪ್ರೀಂಕೋರ್ಟ್ ಆದೇಶ, ಕೇರಳ ಸರಕಾರಕ್ಕೆ ನುಂಗಲಾರದ ತುತ್ತಾಗುತ್ತಿದ್ದು, ಪಂಡಾಲಂ ರಾಜಮನೆತನ ಖಡಕ್ ನಿರ್ಧಾರಕ್ಕೆ ಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ತಾಜಾ ಮಾಹಿತಿಯ ಪ್ರಕಾರ, ಮಹಿಳಾ ಭಕ್ತರು ಅಥವಾ ಕಾರ್ಯಕರ್ತರು ದೇವಾಲಯ ಪ್ರವೇಶಿಸಿದ್ದೇ ಆದಲ್ಲಿ, ದೇವಾಲಯವನ್ನು ಮುಚ್ಚುವಂತೆ ಶಬರಿಮಲೆ ದೇವಾಲಯದ ಪ್ರಧಾನ ಅರ್ಚಕರಿಗೆ (ತಂತ್ರಿಗಳು) ರಾಜಮನೆತನ ಮನವಿ ಮಾಡಿದೆ ಎಂದು ತಿಳಿದುಬಂದಿದೆ.
ಹೈದರಾಬಾದ್ ಮೂಲದ ಕವಿತಾ ಮತ್ತು ಎರ್ನಾಕುಲುಂ ಮೂಲದ ಫಾತಿಮಾ, ದೇವಾಲಯ ಪ್ರವೇಶಿಸಲು ಮುಂದಾಗಿ ವಿಫಲವಾದ ನಂತರ, ಪಂಡಾಲಂ ರಾಜಮನೆತನ ಈ ನಿರ್ಧಾರಕ್ಕೆ ಬಂದಿದೆ. ರಾಜಮನೆತನದ ಅಧಿಕಾರಿಗಳು ದೇವಾಲಯದ ಪ್ರಧಾನ ಅರ್ಚಕರಾದ ಕಂಡರೂರು ರಾಜೀವರಾರು ಅವರಿಗೆ ಈ ಸಂಬಂಧ ಮನವಿ ಮಾಡಿದ್ದಾರೆ.

ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಶತಮಾನಗಳಿಂದ ನಡೆದುಕೊಂಡು ಬರುತ್ತಿರುವ ಸಂಪ್ರದಾಯ, ಪೂಜಾಪದ್ದತಿಗೆ ಯಾವರೀತಿಯಲ್ಲೂ ಚ್ಯುತಿ ಬರಬಾರದು. ಭಾರೀ ಪ್ರತಿಭಟನೆಯ ನಡುವೆಯೂ ಒಂದು ವೇಳೆ 10-50ವಯಸ್ಸಿನ ಮಹಿಳೆಯರು ದೇವಾಲಯ ಪ್ರವೇಶಿಸಿದ್ದೇ ಆದಲ್ಲಿ, ದೇವಾಲಯವನ್ನು ಮುಚ್ಚಲು ರಾಜಮನೆತನ ಸೂಚಿಸಿದೆ.

ದೇವಾಲಯದ ಆವರಣದಲ್ಲಿ ಅಹಿತಕರ ಘಟನೆ ನಡೆದರೆ, ದೇವಾಲಯದ ಸಂಪ್ರದಾಯಕ್ಕೆ ಧಕ್ಕೆಯಾಗುತ್ತದೆ, ಇದು ನಾಡಿಗೆ ಶುಭಕರವಲ್ಲ. ಹಾಗಾಗಿ, ಅಂತಹ ಪರಿಸ್ಥಿತಿ ನಿರ್ಮಾಣವಾದರೆ ಮಾತ್ರ, ಅಯ್ಯಪ್ಪಸ್ವಾಮಿಯ ಗರ್ಭಗುಡಿಯನ್ನು ಮುಚ್ಚುವುದೇ ಸೂಕ್ತ ಎನ್ನುವ ನಿರ್ಧಾರಕ್ಕೆ ಬರಲಾಗಿದೆ ಎಂದು ಪಂಡಾಲಂ ರಾಜಮನೆತನದ ಕಾರ್ಯದರ್ಶಿ ಪಿ ಎನ್ ನಾರಾಯಣ ವರ್ಮ, ಮಾಧ್ಯಮಗಳಿಗೆ ಸ್ಪಷ್ಟ ಪಡಿಸಿದ್ದಾರೆ.
ಈ ನಡುವೆ, ಹಿಂದೂ ಧಾರ್ಮಿಕ ನಂಬಿಕೆಯನ್ನು ಅಪಹಾಸ್ಯ ಮಾಡಬೇಡಿ ಎಂದು ಶಬರಿಮಲೆ ದೇವಾಲಯದ ಪ್ರಧಾನ ತಂತ್ರಿಗಳಾದ ರಾಜೀವರಾರು ಭಾವೋದ್ವೇಗದಿಂದ ಮನವಿ ಮಾಡಿದ್ದಾರೆ. ಗರ್ಭಗುಡಿ ಮುಚ್ಚುವ ವಿಚಾರದಲ್ಲಿ ತಂತ್ರಿಗಳ ನಿರ್ಧಾರವೇ ಅಂತಿಮ ಎನ್ನಲಾಗುತ್ತಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications