ಮಹಿಳೆಯರಿಗೆ ಅಯ್ಯಪ್ಪನ ದರ್ಶನ ಮಾಡಿಸಲು ಕೇರಳ ಪೊಲೀಸರ ಹೊಸ ಐಡಿಯಾ
ಶಬರಿಮಲೆ, ನವೆಂಬರ್ 13: ಮಹಿಳೆಯರಿಗೆ ಅಯ್ಯಪ್ಪ ಸ್ವಾಮಿ ದೇವಾಲಯ ಪ್ರವೇಶಕ್ಕೆ ಮುಕ್ತ ಅವಕಾಶ ನೀಡಬೇಕು ಎಂಬ ಸುಪ್ರಿಂಕೋರ್ಟ್ನ ತೀರ್ಪನ್ನು ಜಾರಿಗೆ ತರಲು ಕೇರಳ ಪೊಲೀಸರು ಹೆಣಗುತ್ತಿದ್ದಾರೆ.
ಕೆಲವು ಮಹಿಳೆಯರು ಮಲೆ ಏರಲು ಯತ್ನ ಮಾಡಿದರಾದರೂ ಭಾರಿ ಪ್ರತಿಭಟನೆಯಿಂದಾಗಿ ಅದು ಸಾಧ್ಯವಾಗಿಲ್ಲ. ಹಿಂಸಾತ್ಮಕ ಪ್ರತಿಭಟನೆಗಳು ಕೂಡ ಅಯ್ಯಪ್ಪನ ಸನ್ನಿಧಿಯ ಬಳಿ ನಡೆದಿವೆ. ಹಾಗಾಗಿ ತೀರ್ಪು ಬಂದು ತಿಂಗಳುಗಳಾದರೂ ಇನ್ನೂ ಅಯ್ಯಪ್ಪನ ಸನ್ನಿಧಿಗೆ ಮಹಿಳೆಯರ ಪ್ರವೇಶ ಸಾಧ್ಯವಾಗಿಲ್ಲ.
ಸುಪ್ರಿಂಕೋರ್ಟ್ನ ತೀರ್ಪನ್ನು ಪಾಲಿಸಲೇಬೇಕಾದ ಒತ್ತಡದಲ್ಲಿರುವ ಕೇರಳ ಪೊಲೀಸರು, ಮಹಿಳೆಯರಿಗೆ ಅಯ್ಯಪ್ಪನ ದರ್ಶನ ಮಾಡಿಸಲು ಹೊಸ ಐಡಿಯಾ ಒಂದನ್ನು ಮಾಡಿದ್ದಾರೆ.
ದೇವಾಲಯದ ದಾರಿಯಲ್ಲಿ ಪ್ರತಿಭಟನಾಕಾರರು ಮಹಿಳೆಯರ ಪ್ರವೇಶಕ್ಕೆ ಅಡ್ಡಿ ಮಾಡುತ್ತಿರುವ ಕಾರಣ ಮಹಿಳೆಯರನ್ನು ಹೆಲಿಕಾಪ್ಟರ್ನಲ್ಲಿ ಬೆಟ್ಟದ ಮೇಲಿನ ಅಯ್ಯಪ್ಪನ ದೇಗುಲದ ಬಳಿಗೆ ಕರೆದುಕೊಂಡು ಹೋಗುವ ಯೋಜನೆಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

ನವೆಂಬರ್ 17 ಕ್ಕೆ ತೆರೆಯಲಿದೆ ಶಬರಿಮಲೆ ಬಾಗಿಲು
ನವೆಂಬರ್ 17 ರಂದು ಶಬರಿಮಲೆ ಅಯ್ಯಪ್ಪ ದೇವಾಲಯದ ಬಾಗಿಲು ತೆರೆಯುತ್ತಿದ್ದು, ಈಗಾಗಲೇ 560 ಕ್ಕೂ ಹೆಚ್ಚು ಮಂದಿ 10-50 ವರ್ಷದ ಒಳಗಿನ ಮಹಿಳೆಯರು ದೇವಾಲಯ ಪ್ರವೇಶಕ್ಕೆ ಹೆಸರು ನೊಂದಾವಣಿ ಮಾಡಿಕೊಂಡಿದ್ದಾರೆ. ಅವರೆಲ್ಲರಿಗೂ ಸುರಕ್ಷಿತವಾಗಿ ದರ್ಶನ ಮಾಡಿಸುವ ಜವಾಬ್ದಾರಿ ಪೊಲೀಸರ ಮೇಲಿದೆ.

ಮಲೆ ಏರುವ ದಾರಿಯಲ್ಲಿ ತೀವ್ರ ಪ್ರತಿಭಟನೆ
ಕೇರಳ ಸರ್ಕಾರ ಸಹ ಸುಪ್ರಿಂ ತೀರ್ಪಿನ ಪರವಾಗಿದ್ದು, ಅದು ಸಹ ಪೊಲೀಸರ ಮೇಲೆ ಒತ್ತಡ ಹೇರುತ್ತಿದೆ. ಹಾಗಾಗಿ ಪ್ರತಿಭಟನೆ ಹೆಚ್ಚಿರುವ ಶಬರಿಮಲೆ ಏರುವ ದಾರಿಯನ್ನು ತಪ್ಪಿಸುವ ಉದ್ದೇಶದಿಂದ ಮಹಿಳೆಯರನ್ನು ಸೇನಾ ಹೆಲಿಕಾಪ್ಟರ್ಗಳನ್ನು ಬಳಸಿ ಬೆಟ್ಟದ ಮೇಲಕ್ಕೆ ಕೊಂಡೊಯ್ದು ಪ್ರತಿಭಟನೆ ಕಡಿಮೆ ಇರುವ ಅಯ್ಯಪ್ಪ ದೇವಾಲಯದ ಬಳಿಸಿ ಅಲ್ಲಿಯೇ ದರ್ಶನ ಮಾಡಿಸುವ ಬಗ್ಗೆ ಕೇರಳ ಪೊಲೀಸರು ಯೋಜನೆ ತಯಾರಿಸಿದ್ದಾರೆ.

ಎರಡು ಬಾರಿ ಭಾರಿ ಪ್ರತಿಭಟನೆ
ಆದರೆ ಸಂಪ್ರದಾಯವಾದಿಗಳು ಅಯ್ಯಪ್ಪನ ದೇವಾಲಯದೊಳಗೆ ಮಹಿಳೆಯರ ಪ್ರವೇಶವನ್ನು ಸುತಾರಾಂ ತಪ್ಪಿಸುವ ಹಠ ತೊಟ್ಟಿದ್ದಾರೆ. ಈ ಮೊದಲು ಎರಡು ಬಾರಿ ದೇವಾಲಯದ ಬಾಗಿಲು ತೆರೆದಿದ್ದಾಗ ಮಹಿಳೆಯರ ಪ್ರವೇಶಕ್ಕೆ ಭಾರಿ ಅಡ್ಡಿ ವ್ಯಕ್ತವಾಗಿತ್ತು. ಈಗಲೂ ಸಹ ಅದೇ ಅಡ್ಡ ಆತಂಕ ಎದುರಾಗುವ ಸಾಧ್ಯತೆ ದಟ್ಟವಾಗಿದೆ.

ತೀರ್ಪು ಪರಿಶೀಲನೆಗೆ ಸುಪ್ರಿಂ ಒಪ್ಪಿಗೆ
ಸುಪ್ರಿಂಕೋರ್ಟ್ನ ತೀರ್ಪನ್ನು ಮರುಪರೀಶಲನೆ ಮಾಡಬೇಕೆಂದು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಲು ಸುಪ್ರಿಂ ಕೋರ್ಟ್ ಒಪ್ಪಿಗೆ ಸೂಚಿಸಿ ಇಂದು ವಿಚಾರಣೆಯನ್ನೂ ನಡೆಸಿದೆ. ಮುಂದಿನ ವಿಚಾರಣೆಯನ್ನು ಜನವರಿ 22 ಕ್ಕೆ ಮುಂದೂಡಿದೆ.
-
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications