ಬಂಧನಕ್ಕೊಳಗಾದ ರೆಹನಾ ಫಾತಿಮಾ ಉದ್ಯೋಗದಿಂದ ಅಮಾನತು
ತಿರುವನಂತಪುರಂ, ನವೆಂಬರ್ 27: ಶಬರಿಮಲೆ ಅಯ್ಯಪ್ಪ ಸನ್ನಿಧಿಗೆ ತೆರಳಲು ಯತ್ನಿಸಿ ವಿಫಲರಾಗಿದ್ದ ಸಾಮಾಜಿಕ ಕಾರ್ಯಕರ್ತೆ ರೆಹನಾ ಫಾತಿಮಾ ಅವರಿಗೆ ಮಂಗಳವಾರ(ನವೆಂಬರ್ 27) ಕರಾಳ ದಿನವಾಗಿ ಪರಿಣಮಿಸಿದೆ. ಪೊಲೀಸರಿಂದ ಬಂಧನ, ವಿಚಾರಣೆ ಜೊತೆಗೆ ಉದ್ಯೋಗವನ್ನು ಕಳೆದುಕೊಂಡಿದ್ದಾರೆ.
ಸಾಮಾಜಿಕ ಜಾಲ ತಾಣಗಳಲ್ಲಿ ಅಯ್ಯಪ್ಪ ದೇಗುಲ ಭಕ್ತರ ಬಗ್ಗೆ ಕೆಟ್ಟದಾಗಿ ಬರೆದಿರುವ ಆರೋಪ ಹೊತ್ತುಕೊಂಡಿದ್ದ ರೆಹನಾ ಫಾತಿಮಾರನ್ನು ಪಥನಂತಿಟ್ಟ ಪೊಲೀಸರು ಬಂಧಿಸಿದ್ದರು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಕೊಚ್ಚಿಯಲ್ಲಿ ಬಂಧಿಸಲಾಗಿದ್ದು, ಪಥನಂಥಿಟ್ಟ ನಗರ ಠಾಣೆ ಪೊಲೀಸರು, ಆರೋಪಿಯನ್ನು ವಿಚಾರಣೆಗೊಳಪಡಿಸುತ್ತಿದ್ದಾರೆ.

ಅಕ್ಟೋಬರ್ 22ರಂದು ಪಥನಂಥಿಟ್ಟ ಪೊಲೀಸರು, ರೆಹನಾ ವಿರುದ್ಧ ದೂರು ದಾಖಲಿಸಿಕೊಂಡಿದ್ದರು. ರೆಹನಾ ಅವರು ಫೇಸ್ ಬುಕ್ ನಲ್ಲಿ ಬಳಸಿದ ಭಾಷೆ, ಚಿತ್ರಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಿದೆ. ಅಯ್ಯಪ್ಪ ಮಾಲೆಧಾರಿಯಂತೆ ವಸ್ತ್ರ ಧರಿಸಿ, ರುದ್ರಾಕ್ಷಿ ಮಾಲೆ ಹಾಕಿಕೊಂಡು ತತ್ವಮಸಿ ಎಂದು ಅಡಿಬರಹ ಬರೆದುಕೊಂಡಿದ್ದರು.
ರೆಹನಾ ಅವರು ಪೋಸ್ಟ್ ಗಳ ವಿರುದ್ಧ ಶಬರಿಮಲೆ ಸಂರಕ್ಷಣಾ ಸಮಿತಿ ದೂರು ನೀಡಿತ್ತು. ಐಪಿಎಸ್ ಸೆಕ್ಷನ್ 295 ಎ ಅನ್ವಯ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಅರ್ಜಿ ಹಾಕಿದ್ದ ರೆಹನಾ ಅವರಿಗೆ ಹಿನ್ನಡೆಯುಂಟಾಗಿದ್ದು, ನವೆಂಬರ್ 16ರಂದು ಅವರ ಅರ್ಜಿಯನ್ನು ಕೇರಳ ಹೈಕೋರ್ಟ್ ತಿರಸ್ಕರಿಸಿತ್ತು.
ಮಂಗಳವಾರದಂದು ಬಿಎಸ್ಎನ್ಎಲ್ ನಲ್ಲಿ ಟೆಕ್ನಿಷಿಯನ್ ಆಗಿರುವ ರೆಹನಾ ಅವರು ಕಚೇರಿಯಲ್ಲಿ ಕಾರ್ಯ ನಿರ್ವಹಿಸುವಾಗಲೇ ಪೊಲೀಸರು ಬಂಧಿಸಿ ಕರೆದೊಯ್ದಿದ್ದರು. ಹೀಗಾಗಿ, ರೆಹನಾ ವಿರುದ್ಧ ಕ್ರಮ ಕೈಗೊಂಡಿದೆ.
ಸುಪ್ರೀಂಕೋರ್ಟ್ ಆದೇಶದಂತೆ ಎಲ್ಲಾ ವಯೋಮಾನದ ಮಹಿಳೆಯರು ಅಯ್ಯಪ್ಪ ದೇಗುಲ ಪ್ರವೇಶಿಸಲು ಅರ್ಹರಾಗಿದ್ದಾರೆ. ಹೀಗಾಗಿ, ಅಯ್ಯಪ್ಪ ದೇಗುಲ ಪ್ರವೇಶಿಸಲು ವಿಫಲ ಯತ್ನ ನಡೆಸಿದರು. ಪೊಲೀಸ್ ಪಡೆ ಭದ್ರತೆಯೊಂದಿಗೆ ಬಂದರೂ ದೇಗುಲಕ್ಕೂ 500 ಮೀಟರ್ ದೂರದಲ್ಲಿ ಅವರನ್ನು ತಡೆದು ವಾಪಸ್ ಕಳಿಸಲಾಗಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications