Get Updates
Get notified of breaking news, exclusive insights, and must-see stories!

ಸ್ವಾಮಿಯೇ ಶರಣಂ ಅಯ್ಯಪ್ಪ: ಮುಂದಿನ ವಾರದಿಂದ ಭಕ್ತರಿಗಾಗಿ ತೆರೆಯಲಿದೆ ಶಬರಿಮಲೆ

ತಿರುವನಂತಪುರಂ, ಜೂನ್ 6:ಭಾರತದ ಬಹುದೊಡ್ಡ ದೇವಾಲಯಗಳಲ್ಲಿ ಒಂದಾದ ಕೇರಳದ ಅಯ್ಯಪ್ಪ ಸ್ವಾಮಿ ದೇವಸ್ಥಾನ ಮುಂದಿನ ವಾರದಿಂದ ಭಕ್ತರಿಗಾಗಿ ಕೇಂದ್ರದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಮತ್ತೆ ತೆರಯಲಾಗುವುದು. ಆದರೆ ಹೆಚ್ಚಿನ ನಿರ್ಬಂಧಗಳು ಜಾರಿಯಲ್ಲಿರುತ್ತವೆ.

Recommended Video

      ಬದಲಾಯಿಸಲು ಯಾರೆಲ್ಲಾ ಸ್ಟಾರ್ ಗಳು ಬಂದಿದ್ದಾರೆ ನೋಡಿ | Badalagu Neenu Badalayisu Neenu | Oneindia Kannada

      ತಿರುಮಲ ವೆಂಕಟೇಶ್ವರ ದೇವಸ್ಥಾನದಂತೆ, ಕೇರಳದ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೂ ವೃದ್ಧರು ಮತ್ತು ಮಕ್ಕಳನ್ನು ಅನುಮತಿಸಲಾಗುವುದಿಲ್ಲ, ಆದರೆ ದೇವಾಲಯ ದರ್ಶನಕ್ಕೆ ಅವಕಾಶವಿರುವ ಭಕ್ತರ ಸಂಖ್ಯೆಯ ಮೇಲೆ ಮಿತಿ ಇರುತ್ತದೆ.

      ಜೂನ್ 9 ರಿಂದ ಶಬರಿಮಲೆ ದೇವಾಲಯ ಕಾರ್ಯನಿರ್ವಹಿಸಲಿದೆ' ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿರುವನಂತಪುರದಲ್ಲಿ ತಿಳಿಸಿದ್ದಾರೆ.

      Sabarimala Temple Gates Will Open For Devotees From Next Week

      ಕೊರೊನಾವೈರಸ್ ಹರಡುವುದನ್ನು ತಡೆಯಲು ದೇವಾಲಯಗಳು ಮುಚ್ಚಲ್ಪಟ್ಟಿದ್ದವು. ಆದರೆ ಕೇಂದ್ರವು ಇತ್ತೀಚೆಗೆ "ಅನ್ಲಾಕ್ 1.0" ಅನ್ನು ಘೋಷಿಸಿತು, ಲಾಕ್‌ಡೌನ್‌ನಿಂದ ಅದರ ಶ್ರೇಣೀಕೃತ ನಿರ್ಗಮನ ಯೋಜನೆ, ಮತ್ತು ಜೂನ್ 8 ರಿಂದ ದೇವಾಲಯಗಳು ಮತ್ತು ಇತರ ಧಾರ್ಮಿಕ ಪೂಜಾ ಸ್ಥಳಗಳನ್ನು ತೆರೆಯಲು ಅವಕಾಶ ಮಾಡಿಕೊಟ್ಟಿತು.

      ಹೀಗಾಗಿ 60,000 ಕ್ಕಿಂತ ಹೆಚ್ಚಿನ ಸಾಮಾನ್ಯ ಭಕ್ತರ ಪ್ರವೇಶಕ್ಕೆ ವಿರುದ್ಧವಾಗಿ ದಿನಕ್ಕೆ 6,000 ಭಕ್ತರಿಗೆ ಮಾತ್ರ ಅವಕಾಶ ನೀಡಲಾಗುವುದು ಮತ್ತು ಪರಸ್ಪರರ ನಡುವೆ ಆರು ಅಡಿ ಅಂತರ ಮತ್ತು ಮುಖಕ್ಕೆ ಮಾಸ್ಕ್‌ ಧರಿಸುವುದು ಸೇರಿದಂತೆ ಕೋವಿಡ್-19 ಮುನ್ನೆಚ್ಚರಿಕೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುವುದು ಎಂದು ತಿಳಿಸಲಾಗಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+