ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಧಾರ್ಮಿಕ ಆಚರಣೆ ಮಧ್ಯೆ ಪ್ರವೇಶಿಸುವುದಿಲ್ಲ: ಕೇರಳ ಸರ್ಕಾರ

|
Google Oneindia Kannada News

ತಿರುವನಂತಪುರಂ, ನವೆಂಬರ್ 12: ಶಬರಿಮಲೆ ದೇವಸ್ಥಾನದ ವಿವಾದಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಯಾವುದೇ ಧಾರ್ಮಿಕ ವಿಚಾರ ಹಾಗೂ ಆಚರಣೆಗಳ ಮಧ್ಯೆ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕೇರಳ ಸರ್ಕಾರ ಅಲ್ಲಿನ ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ನ.17ಕ್ಕೆ ಶಬರಿಮಲೆ ಯಾತ್ರೆ ಆರಂಭ; 10ರಿಂದ 50 ವರ್ಷದ 560 ಮಹಿಳೆಯರ ನೋಂದಣಿನ.17ಕ್ಕೆ ಶಬರಿಮಲೆ ಯಾತ್ರೆ ಆರಂಭ; 10ರಿಂದ 50 ವರ್ಷದ 560 ಮಹಿಳೆಯರ ನೋಂದಣಿ

ತಮ್ಮದೇ ಹಿತಾಸಕ್ತಿಗಳನ್ನು ಒಳಗೊಂಡಿರುವ ಕೆಲವು ರಾಜಕೀಯ ಪಕ್ಷಗಳು ಸುಪ್ರೀಂಕೋರ್ಟ್ ತೀರ್ಪನ್ನು ಖಂಡಿಸಿ ಪ್ರತಿಭಟನೆಗಳನ್ನು ನಡೆಸಿ, ಮಹಿಳಾ ಭಕ್ತರು ಒಳಕ್ಕೆ ಹೋಗದಂತೆ ತಡೆದಿವೆ ಎಂದರು.

ಶಬರಿಮಲೆ ಸಂರಕ್ಷಣಾ ರಥಕ್ಕೆ ಕೇರಳದಲ್ಲಿ ಚಾಲನೆ ನೀಡಿದ ಯಡಿಯೂರಪ್ಪ ಶಬರಿಮಲೆ ಸಂರಕ್ಷಣಾ ರಥಕ್ಕೆ ಕೇರಳದಲ್ಲಿ ಚಾಲನೆ ನೀಡಿದ ಯಡಿಯೂರಪ್ಪ

ದೇವಸ್ಥಾನದ ಆಡಳಿತಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಯಾವುದೇ ನಿರ್ದೇಶನ ನೀಡಿಲ್ಲ. ಭಾರಿ ಪ್ರಮಾಣದ ಪ್ರತಿಭಟನೆಗಳು ನಡೆದ ಕಾರಣ ಮತ್ತು ಕೆಲವು ವ್ಯಕ್ತಿಗಳಿಂದ ಹಿಂಸಾಚಾರಗಳು ಉಂಟಾದ ಕಾರಣ ಭದ್ರತೆಯನ್ನು ಬಿಗಿಗೊಳಿಸುವಂತೆ ಮಾತ್ರ ಪೊಲೀಸರಿಗೆ ಸೂಚನೆ ನೀಡಿದ್ದರು.

sabarimala temple issue kerala government submits affidavit in high court

ದೇವಸ್ಥಾನವನ್ನು ಪ್ರವೇಶ ಮಾಡುವ ವಿಚಾರದಲ್ಲಿ ಯಾವುದೇ ಸೂಕ್ತ ಭಕ್ತರಿಗೆ ಅಡ್ಡಿಪಡಿಸಿಲ್ಲ. ಆದರೆ, ತೊಂದರೆ ಉಂಟು ಮಾಡುವ ಸಲುವಾಗಿಯೇ ಬಂದವರನ್ನು ಪೊಲೀಸರು ಹಿಡಿದಿದ್ದಾರೆ ಎಂದು ಅಫಿಡವಿಟ್‌ನಲ್ಲಿ ಸರ್ಕಾರ ಹೇಳಿದೆ.

ಇರುಮುಡಿಯಿಲ್ಲದೆ ಮೆಟ್ಟಲೇರಿ ಶಬರಿಮಲೆ ಸಂಪ್ರದಾಯ ಮುರಿದ ಆರೆಸ್ಸೆಸ್ ಮುಖಂಡಇರುಮುಡಿಯಿಲ್ಲದೆ ಮೆಟ್ಟಲೇರಿ ಶಬರಿಮಲೆ ಸಂಪ್ರದಾಯ ಮುರಿದ ಆರೆಸ್ಸೆಸ್ ಮುಖಂಡ

ಶಬರಿಮಲೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿದ್ದು, ಅದನ್ನು ನ.13ರಂದು ವಿಚಾರಣೆಗೆ ತೆಗೆದುಕೊಳ್ಳಲಿದೆ. ಇದೇ 17ರಂದು ದೇವಸ್ಥಾನದ ಬಾಗಿಲು ತೆರೆಯಲಿದ್ದು, ಅದಕ್ಕಾಗಿ ಆನ್‌ಲೈನ್ ನೋಂದಣಿಯನ್ನು ಮಾಡಲಾಗುತ್ತಿದೆ.

English summary
The Kerala government on Monday submitted an affidavit in the High Court on Sabarimala Temple issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X