ಲೋಕಸಭಾ ಚುನಾವಣೆ: ಕೇರಳದಲ್ಲಿ ಕಮ್ಯೂನಿಸ್ಟರು ನೆಲಕಚ್ಚಲು ಇದೇ ಕಾರಣ
ತಿರುವನಂತಪುರಂ, ಜೂನ್ 26: ಕಳೆದ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲಲು ಕಾರಣವಾದ ಅಂಶಗಳೇನು ಎಂದು ಸಿಪಿಐ(ಎಂ) ಆತ್ಮಾವಲೋಕನ ಮಾಡಿಕೊಂಡಿದೆ.
ಚುನಾವಣೆಗೆ ಕೆಲವು ತಿಂಗಳ ಹಿಂದೆ ಆರಂಭವಾದ ಶಬರಿಮಲೆ ದೇವಾಲಯದ ವಿವಾದವೇ, ಚುನಾವಣೆಯಲ್ಲಿ ಸೋಲಲು ಕಾರಣ ಎಂದು ಪಕ್ಷ ಹೇಳಿದೆ. ಪಕ್ಷದ ಸೆಂಟ್ರಲ್ ಕಮಿಟಿ, ಚುನಾವಣೋತ್ತರ ಸಮೀಕ್ಷಾ ವರದಿಯಲ್ಲಿ ಈ ವಿಚಾರವನ್ನು ಹೇಳಿದೆ.
ಕಳೆದ ಭಾನುವಾರ ಮತ್ತು ಸೋಮವಾರ ಪಕ್ಷದ ಸದಸ್ಯರ ಸಭೆಯನ್ನು ಕರೆಯಲಾಗಿತ್ತು. ಪಕ್ಷ ತನ್ನ ಮುಖವಾಣಿ 'ದೇಶಾಭಿಮಾನಿ'ಯಲ್ಲಿ ಚುನಾವಣಾ ಸೋಲಿಗೆ ಶಬರಿಮಲೆ ವಿವಾದವೇ ಕಾರಣ ಎಂದಿದೆ.

ಇಪ್ಪತ್ತು ಲೋಕಸಭಾ ಸ್ಥಾನವನ್ನು ಹೊಂದಿರುವ ಕೇರಳದಲ್ಲಿ, ಸಿಪಿಎಂ ನೇತೃತ್ವದ ಎಲ್ಡಿಎಫ್ ಕೇವಲ ಒಂದು ಸ್ಥಾನವನ್ನು ಗೆದ್ದು, ತೀವ್ರ ಮುಖಭಂಗ ಎದುರಿಸಿತ್ತು. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಹತ್ತೊಂಬತ್ತು ಸ್ಥಾನಗಳನ್ನು ಗೆದ್ದಿತ್ತು.
ಜನವರಿ ಎರಡನೇ ತಾರೀಕಿನಂದು ಇಬ್ಬರು ಮಹಿಳೆಯರು (ಬಿಂದು ಮತ್ತು ಕನಕದುರ್ಗ) ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯವನ್ನು ಪ್ರವೇಶಿಸಿದ್ದರು. ದೇಶಾದ್ಯಂತ ಇದು ಭಾರೀ ವಿರೋಧಕ್ಕೆ ಇದು ಕಾರಣವಾಗಿತ್ತು.
ದೇವಾಲಯಕ್ಕೆ ಮಹಿಳೆಯರಿಗೂ ಪ್ರವೇಶ ನೀಡಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಸೆಪ್ಟಂಬರ್ 28ರಂದು ಐತಿಹಾಸಿಕ ತೀರ್ಪನ್ನು ನೀಡಿತ್ತು. ಇದು ಹೊಸ ಸಂಘರ್ಷಕ್ಕೆ ನಾಂದಿ ಹಾಡಿ, ಬಿಜೆಪಿ ಮಂಚೂಣಿಯಲ್ಲಿ ಹೋರಾಟದಲ್ಲಿ ಭಾಗವಹಿಸಿತ್ತು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications