ಶಬರಿಮಲೆ ದರ್ಶನಕ್ಕೆ ಹೊರಟ ಭಕ್ತರ ಗಮನಕ್ಕೆ

ತಿರುವನಂತಪುರಂ, ಅಕ್ಟೋಬರ್ 29: ಕೋವಿಡ್ ಭೀತಿಯ ನಡುವೆಯೇ ಕೇರಳದ ಶಬರಿಮಲೆ ದೇವಾಲಯ ಭಕ್ತರಿಗಾಗಿ ಬಾಗಿಲು ತೆರೆಯಲಿದೆ. ಮಕರ ಸಂಕ್ರಾಂತಿ ಮಂಡಲ ಪೂಜೆ ಸಮಯದಲ್ಲಿ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಹೆಚ್ಚಿನ ಭಕ್ತರು ಆಗಮಿಸುತ್ತಾರೆ.

ನವೆಂಬರ್ 16ರಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಭಕ್ತರಿಗೆ ಪ್ರವೇಶ ನೀಡಲಾಗುತ್ತದೆ ಎಂದು ತಿರುವಂಕೂರು ದೇವಸ್ಥಾನ ಮಂಡಳಿ ಹೇಳಿದೆ. ಮೊದಲ ಒಂದು ವಾರಗಳ ಕಾಲ ದಿನಕ್ಕೆ 1000 ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಆದರೆ, ವಾರಾಂತ್ಯದಲ್ಲಿ 1000ಕ್ಕಿಂತ ಹೆಚ್ಚಿನ ಭಕ್ತರು ದರ್ಶನ ಮಾಡಲು ಅವಕಾಶ ನೀಡಲಾಗುತ್ತದೆ. ಮಕರ ವಿಳಕ್ಕು, ಮಂಡಳ ವಿಳಕ್ಕು ಸಂದರ್ಭದಲ್ಲಿ 5000 ಭಕ್ತರಿಗೆ ಪ್ರವೇಶ ನೀಡಲಾಗುತ್ತದೆ ಎಂದು ಆಡಳಿತ ಮಂಡಳಿ ಹೇಳಿದೆ.

 Sabarimala Temple Open Pilgrims Limited To 1000 Per Day

ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ದೇವಾಲಯಕ್ಕೆ ಬರುವ ಭಕ್ತರು 24 ಗಂಟೆ ಹಿಂದಿನ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರವನ್ನು ತರಬೇಕು. ಸನ್ನಿಧಾನದಲ್ಲಿ ರಾತ್ರಿ ವಾಸ್ತವ್ಯ ಹೂಡುವುದನ್ನು ನಿಷೇಧಿಸಲಾಗಿದೆ ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

ಗುರುವಾರ ಕೇರಳದಲ್ಲಿ 7020 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 4,18,485ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 91,786.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+