ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲ ಓಪನ್: 5 ಸಾವಿರ ಭಕ್ತರಿಗಷ್ಟೇ ಅವಕಾಶ
ತಿರುವನಂತಪುರ, ಜುಲೈ 17: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಬಾಗಿಲು ತೆರೆದಿದ್ದು, ಭಕ್ತರ ದರ್ಶನಕ್ಕೆ ಅವಕಾಶಮಾಡಿಕೊಡಲಾಗಿದೆ.
ಆನ್ಲೈನ್ ಸರದಿಯನ್ನು ಅನುಸರಿಸಿ ದರ್ಶನಕ್ಕೆ ಕೇವಲ 5,000 ಮಂದಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗುತ್ತಿದೆ. ಎಲ್ಲ ಭಕ್ತಾದಿಗಳು ಕಡ್ಡಾಯವಾಗಿ 48 ಗಂಟೆಗಳ ಹಿಂದೆ ನೀಡಿದ ನೆಗೆಟಿವ್ ಆರ್ಟಿ-ಪಿಸಿಆರ್ ಕೋವಿಡ್-19 ಪರೀಕ್ಷಾ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. ಮಾಸಿಕ ಧಾರ್ಮಿಕ ಆಚರಣೆಗಳ ಬಳಿಕ ಈ ತಿಂಗಳ 21ರಂದು ದೇವಾಲಯ ಮತ್ತೆ ಮುಚ್ಚಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಿಂಗಳ ಐದು ದಿನಗಳ ಪೂಜೆ ನೆರವೇರಿಸಲು ದೇವಾಲಯದ ಬಾಗಿಲು ತೆರೆಯಲಾಗಿದೆ. ಆನ್ಲೈನ್ ಸರದಿಯನ್ನು ಅನುಸರಿಸಿ ದರ್ಶನಕ್ಕೆ ಕೇವಲ 5,000 ಮಂದಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದೆ.
ದೇಗುಲ ಆವರಣದಲ್ಲಿ ಕಡ್ಡಾಯ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಮತ್ತು ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಸೂಕ್ತ ಕೋವಿಡ್ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ದೇವಾಲಯ ಆವರಣದಲ್ಲಿ ಭಕ್ತರ ನಡವಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರತ್ಯೇಕ ಮಾರ್ಗಸೂಚಿ ನೀಡಿವೆ.
ಜುಲೈ 17ರಿಂದ 21ರವರೆಗೆ ಮಾಸಿಕ ವಿಧಿವಿಧಾನಗಳಿಗಾಗಿ ದೇವಾಲಯ ಬಾಗಿಲು ತೆರೆಯಲಾಗಿದೆ. ಮಾಸಿಕ ಆಚರಣೆಗಳಿಗಾಗಿ ದೇವಾಲಯವನ್ನು ತಿಂಗಳ ಕೆಲ ನಿರ್ದಿಷ್ಟ ದಿನಗಳಲ್ಲಿ ತೆರೆದರೂ ಕೋವಿಡ್-19 ನಿರ್ಬಂಧಗಳಿಂದಾಗಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರಲಿಲ್ಲ.
ಲಾಕ್ಡೌನ್ ಅವಧಿಯಲ್ಲಿ ತನ್ನ ಅಧೀನದಲ್ಲಿರುವ 1,200 ದೇವಾಲಯಗಳಿಗೆ ಭಕ್ತರು ಪ್ರವೇಶಿಸದಂತೆ ತಿರುವಾಂಕೂರು ದೇವಸ್ವಂ ಬೋರ್ಡ್ (ಟಿಡಿಬಿ) ನಿರ್ಬಂಧ ವಿಧಿಸಿತ್ತು. ಆದಾಗ್ಯೂ ಧಾರ್ಮಿಕ ವಿಧಿವಿಧಾನಗಳಿಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಂಡಿತ್ತು.
ಇಂದಿನಿಂದ ಆರಂಭವಾಗುವ ಮಾಸಿಕ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸುವ ಭಕ್ತರಿಗೆ ಅಯ್ಯಪ್ಪ ದೇಗುಲದಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಲಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications