ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲ ಓಪನ್: 5 ಸಾವಿರ ಭಕ್ತರಿಗಷ್ಟೇ ಅವಕಾಶ

ತಿರುವನಂತಪುರ, ಜುಲೈ 17: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಬಾಗಿಲು ತೆರೆದಿದ್ದು, ಭಕ್ತರ ದರ್ಶನಕ್ಕೆ ಅವಕಾಶಮಾಡಿಕೊಡಲಾಗಿದೆ.

ಆನ್‌ಲೈನ್ ಸರದಿಯನ್ನು ಅನುಸರಿಸಿ ದರ್ಶನಕ್ಕೆ ಕೇವಲ 5,000 ಮಂದಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗುತ್ತಿದೆ. ಎಲ್ಲ ಭಕ್ತಾದಿಗಳು ಕಡ್ಡಾಯವಾಗಿ 48 ಗಂಟೆಗಳ ಹಿಂದೆ ನೀಡಿದ ನೆಗೆಟಿವ್ ಆರ್‌ಟಿ-ಪಿಸಿಆರ್ ಕೋವಿಡ್-19 ಪರೀಕ್ಷಾ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. ಮಾಸಿಕ ಧಾರ್ಮಿಕ ಆಚರಣೆಗಳ ಬಳಿಕ ಈ ತಿಂಗಳ 21ರಂದು ದೇವಾಲಯ ಮತ್ತೆ ಮುಚ್ಚಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Sabarimala

ತಿಂಗಳ ಐದು ದಿನಗಳ ಪೂಜೆ ನೆರವೇರಿಸಲು ದೇವಾಲಯದ ಬಾಗಿಲು ತೆರೆಯಲಾಗಿದೆ. ಆನ್‌ಲೈನ್ ಸರದಿಯನ್ನು ಅನುಸರಿಸಿ ದರ್ಶನಕ್ಕೆ ಕೇವಲ 5,000 ಮಂದಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದೆ.

ದೇಗುಲ ಆವರಣದಲ್ಲಿ ಕಡ್ಡಾಯ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಮತ್ತು ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಸೂಕ್ತ ಕೋವಿಡ್ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ದೇವಾಲಯ ಆವರಣದಲ್ಲಿ ಭಕ್ತರ ನಡವಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರತ್ಯೇಕ ಮಾರ್ಗಸೂಚಿ ನೀಡಿವೆ.

ಜುಲೈ 17ರಿಂದ 21ರವರೆಗೆ ಮಾಸಿಕ ವಿಧಿವಿಧಾನಗಳಿಗಾಗಿ ದೇವಾಲಯ ಬಾಗಿಲು ತೆರೆಯಲಾಗಿದೆ. ಮಾಸಿಕ ಆಚರಣೆಗಳಿಗಾಗಿ ದೇವಾಲಯವನ್ನು ತಿಂಗಳ ಕೆಲ ನಿರ್ದಿಷ್ಟ ದಿನಗಳಲ್ಲಿ ತೆರೆದರೂ ಕೋವಿಡ್-19 ನಿರ್ಬಂಧಗಳಿಂದಾಗಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರಲಿಲ್ಲ.

ಲಾಕ್‌ಡೌನ್ ಅವಧಿಯಲ್ಲಿ ತನ್ನ ಅಧೀನದಲ್ಲಿರುವ 1,200 ದೇವಾಲಯಗಳಿಗೆ ಭಕ್ತರು ಪ್ರವೇಶಿಸದಂತೆ ತಿರುವಾಂಕೂರು ದೇವಸ್ವಂ ಬೋರ್ಡ್ (ಟಿಡಿಬಿ) ನಿರ್ಬಂಧ ವಿಧಿಸಿತ್ತು. ಆದಾಗ್ಯೂ ಧಾರ್ಮಿಕ ವಿಧಿವಿಧಾನಗಳಿಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಂಡಿತ್ತು.

ಇಂದಿನಿಂದ ಆರಂಭವಾಗುವ ಮಾಸಿಕ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸುವ ಭಕ್ತರಿಗೆ ಅಯ್ಯಪ್ಪ ದೇಗುಲದಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+