ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಬರಿಮಲೆ ಹಿಂಸಾಚಾರ: ಬಿಜೆಪಿಯ 4 ಕಾರ್ಯಕರ್ತರಿಗೆ ಚೂರಿ ಇರಿತ

|
Google Oneindia Kannada News

ತಿರುವನಂತಪುರಂ, ಜನವರಿ 3: ಶಬರಿಮಲೆಗೆ ಇಬ್ಬರು ಮಹಿಳೆಯರ ಪ್ರವೇಶವನ್ನು ವಿರೋಧಿಸಿ ಕೇರಳದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇದೀಗ ಹಿಂಸಾಚಾರಕ್ಕೆ ತಿರುಗಿದೆ. ಇದರಲ್ಲಿ ನಾಲ್ವರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಕೇರಳಕ್ಕೆ ಸಾರಿಗೆ ನಿಗಮದ ಯಾವ ಬಸ್ ತೆರಳುತ್ತಿಲ್ಲ, ಖಾಸಗಿ ವ್ಯವಸ್ಥೆಯೂ ಇಲ್ಲ ಕೇರಳಕ್ಕೆ ಸಾರಿಗೆ ನಿಗಮದ ಯಾವ ಬಸ್ ತೆರಳುತ್ತಿಲ್ಲ, ಖಾಸಗಿ ವ್ಯವಸ್ಥೆಯೂ ಇಲ್ಲ

ಮಹಿಳೆಯರ ಶಬರಮಲೆ ಪ್ರವೇಶ ಖಂಡಿಸಿ ಕೇರಳ ಬಂದ್‌ಗೆ ಕರೆ ನೀಡಲಾಗಿದ್ದು, ಕರ್ನಾಟಕದಿಂದ ಕೇರಳಕ್ಕೆ ಹೋಗುವ ಕೆಎಸ್‌ಆರ್‌ರ್ಟಿಸಿ ಬಸ್‌ಗಳು ಕೂಡ ಸ್ಥಗಿತಗೊಂಡಿವೆ.

ಸುಪ್ರೀಂ ತೀರ್ಪಿನ ನಂತರ ಮೊದಲ ಬಾರಿಗೆ ತೆರೆದ ಅಯ್ಯಪ್ಪ ದೇವಾಲಯ ಸುಪ್ರೀಂ ತೀರ್ಪಿನ ನಂತರ ಮೊದಲ ಬಾರಿಗೆ ತೆರೆದ ಅಯ್ಯಪ್ಪ ದೇವಾಲಯ

ಕಾರ್ಯಕರ್ತರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಯಲ್ಲಿ ಎಸ್'ಡಿಪಿಐ ಕೈವಾಡವಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.ಇದಲ್ಲದೆ, ಪೊಲೀಸರು, ಮಾಧ್ಯಮದ ವರದಿಗಾರರು ಹಾಗೂ ಲೇಖಕರ ಮೇಲೆಯೂ ದಾಳಿಗಲು ನಡೆದಿರುವುದಾಗಿ ವರದಿಗಳು ತಿಳಿಸಿವೆ.

Sabarimala Temple row : 4 BJP workers stabbed in Kerala

ಮಾಧ್ಯಮ ವರದಿಗಾರರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೇರಳ ರಾಜ್ಯ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹೆರಾ ಅವರು, ಆಯಾ ಜಿಲ್ಲಾ ಮುಖ್ಯಸ್ಥರು ವಿಶೇಷ ತಂಡವನ್ನು ರಚಿಸಿ ತನಿಖೆ ನಡೆಸುವಂತೆ ಸೂಚಿಸಿದ್ದಾರೆ.

 ಶಬರಿಮಲೆ ದೇವಳಕ್ಕೆ ಮಹಿಳೆಯರ ಪ್ರವೇಶ ನಿಷೇಧಕ್ಕೆ ಕಾರಣ ಗೊತ್ತೆ? ಶಬರಿಮಲೆ ದೇವಳಕ್ಕೆ ಮಹಿಳೆಯರ ಪ್ರವೇಶ ನಿಷೇಧಕ್ಕೆ ಕಾರಣ ಗೊತ್ತೆ?

ಪ್ರತಿಭಟನೆ ವೇಳೆ 7 ಪೊಲೀಸ್ ವಾಹನಗಳು ಹಾಗೂ 79 ಕೆಎಸ್ಆರ್'ಟಿಸಿ ಬಸ್ ಗಳನ್ನು ಧ್ವಂಸಗೊಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ತಿರುವನಂತಪುರಂನ ನೆಡುಮಂಗಡುವಿನಲ್ಲಿ ಕೆಲ ದುಷ್ಕರ್ಮಗಿಳು ಬಾಂಬ್ ದಾಳಿಯನ್ನೂ ನಡೆಸಿದ್ದು, ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.

English summary
Widespread violence was reported across Kerala as a shutdown began on Thursday, day after two women under the age of 50 managed to enter the Sabarimala temple.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X