ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜುಲೈ 17ರಿಂದ ಶಬರಿಮಲೆ ದೇಗುಲ ಓಪನ್; ನಿಯಮಗಳು ಹೀಗಿವೆ...

|
Google Oneindia Kannada News

ತಿರುವನಂತಪುರಂ, ಜುಲೈ 10: ಕೊರೊನಾ ಸೋಂಕಿನ ಏರಿಕೆ ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲವನ್ನು ತಿಂಗಳ ಪೂಜೆಯ ಪ್ರಯುಕ್ತ ಜುಲೈ 17ರಿಂದ 21ರವರೆಗೂ ತೆರೆಯಲಾಗುತ್ತಿದೆ.

ಈ ಐದು ದಿನಗಳ ಸಮಯದಲ್ಲಿ ಕೆಲವು ನಿಬಂಧನೆಗಳೊಂದಿಗೆ ಭಕ್ತರಿಗೆ ದೇಗುಲ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದು ಶನಿವಾರ ದೇಗುಲ ಆಡಳಿತ ಮಂಡಳಿ ತಿಳಿಸಿದೆ.

ಕೊರೊನಾ ಲಸಿಕೆ ಪಡೆದಿರುವ ಪ್ರಮಾಣಪತ್ರ ಹಾಗೂ 48 ಗಂಟೆಗಳ ಹಿಂದೆ ಪರೀಕ್ಷೆ ಮಾಡಿಸಿದ ಕೊರೊನಾ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯೊಂದಿಗೆ ಭಕ್ತರು ದೇಗುಲಕ್ಕೆ ಬರಬಹುದಾಗಿದೆ.

Sabarimala Temple To Open From July 17-21 With Covid Rules

ಆನ್‌ಲೈನ್ ಬುಕ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಗರಿಷ್ಠ ಐದು ಸಾವಿರ ಭಕ್ತರಿಗೆ ಅವಕಾಶ ನೀಡಲಾಗಿದೆ.

ಕೊರೊನಾ ಸೋಂಕಿನ ಏರಿಕೆ ಹಿನ್ನೆಲೆಯಲ್ಲಿ ಕೇರಳದಲ್ಲಿ ಶಬರಿಮಲೆ ದೇಗುಲ ಸೇರಿದಂತೆ ಹಲವು ಪ್ರಮುಖ ದೇಗುಲಗಳನ್ನು ಮುಚ್ಚಲಾಗಿತ್ತು. ಇದೀಗ ಐದು ದಿನಗಳ ಕಾಲ ದೇವಾಲಯವನ್ನು ತೆರೆಯಲಾಗುತ್ತಿದೆ.

ಕೋವಿಡ್; ಕೇರಳದ ಟಿಡಿಬಿ ಆದಾಯ 21 ಕೋಟಿಗೆ ಕುಸಿತ! ಕೋವಿಡ್; ಕೇರಳದ ಟಿಡಿಬಿ ಆದಾಯ 21 ಕೋಟಿಗೆ ಕುಸಿತ!

ಇದೇ ವೇಳೆ ರಾಜ್ಯದಲ್ಲಿ ಸೋಂಕಿನ ಪ್ರಕರಣಗಳೂ ಏರಿಕೆಯಾಗಿವೆ. ಶನಿವಾರ ಕೇರಳದಲ್ಲಿ 14,087 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟಾರೆ 30,53,116 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಒಂದೇ ದಿನ 109 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. 11,867 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ರಾಜ್ಯದಲ್ಲಿ ಒಟ್ಟು 1,15,226 ಸಕ್ರಿಯ ಪ್ರಕರಣಗಳಿವೆ.

English summary
Sabarimala Temple in kerala to open from 17-21 July for monthly puja. Here is rules to be followed by devotees
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X