ಶಬರಿಮಲೆ: ಪವಿತ್ರ ಚಿನ್ನದ ದಿರಿಸಿನ ಮೆರವಣಿಗೆ ಆರಂಭ
ತಿರುವನಂತಪುರಂ, ಡಿಸೆಂಬರ್ 22: ಶಬರಿಮಲೆಯಲ್ಲಿ ನಡೆಯುವ ಮಂಡಲ ಪೂಜೆಗಾಗಿ ಪವಿತ್ರ ಚಿನ್ನದ ಉಡುಗೆಯನ್ನು ಕೊಂಡೊಯ್ಯುವ 'ತಂಕ ಅಂಕಿ' ಮೆರವಣಿಗೆಗೆ ಅರನ್ಮುಲ ಪಾರ್ಥಸಾರಥಿ ದೇವಸ್ಥಾನದಿಂದ ಮಂಗಳವಾರ ಚಾಲನೆ ನೀಡಲಾಯಿತು.
ಅರನ್ಮುಲ ಪಾರ್ಥಸಾರಥಿ ದೇವಸ್ಥಾನದಲ್ಲಿ ಬೆಳಗಿನ ಜಾವ 5 ರಿಂದ 6.30ರವರೆಗೆ ಪವಿತ್ರ ಚಿನ್ನದ ಅಂಗಿಯನ್ನು ವೀಕ್ಷಿಸುವ ಅವಕಾಶವನ್ನು ಭಕ್ತರಿಗೆ ನೀಡಲಾಗಿತ್ತು. ಬೆಳಿಗ್ಗೆ ಏಳು ಗಂಟೆ ಸುಮಾರಿಗೆ ಅರನ್ಮುಲದ ಪೂರ್ವ ದ್ವಾರದಿಂದ ಮೆರವಣಿಗೆ ಪ್ರಾರಂಭವಾಯಿತು. ಪ್ರತಿ ವರ್ಷ ಮೆರವಣಿಗೆ ವೇಳೆ ಲಕ್ಷಾಂತರ ಭಕ್ತರು ನೆರೆದಿರುತ್ತಿತ್ತು. ಚಿನ್ನದ ಅಂಗಿಗೆ ಪೂಜೆ ಮೆರವಣಿಗೆ ಅಲಂಕಾರ ಬಹು ವಿಜೃಂಭಣೆಯಿಂದ ನಡೆಯುತ್ತಿತ್ತು. ಆದರೆ ಈ ಬಾರಿ ಕೊರೊನಾ ವೈರಸ್ ನಿರ್ಬಂಧಗಳ ಕಾರಣ ಉತ್ಸವ ಕಳೆಗುಂದಿದೆ.

ತಂಕ ಅಂಕಿಯನ್ನು ಸಾಗಿಸುವ ಮೆರವಣಿಗೆಯು ಸ್ವಾಗತ ಸಮಾರಂಭಕ್ಕೂ ಮುನ್ನ ಕೆಲವೇ ನಿರ್ದಿಷ್ಟ ಸ್ಥಳಗಳಲ್ಲಿ ನಿಲ್ಲಿಸಲಾಗುತ್ತದೆ. ಬೆಳಿಗ್ಗೆ 6.30ರ ಬಳಿಕ ಭಕ್ತರ ವೀಕ್ಷಣೆಗೆ ಅವಕಾಶ ನೀಡುವುದಿಲ್ಲ.
#Sabarimala Thanka Anki for Swami Ayyappa began its Yatra from #Aranmula temple 🙏 ( @surnell @lotophagus @mohandastg @tvjanam @kochattil ) pic.twitter.com/3LPHPjSzEl
— Kerala Comrade (@KeralaComrade1) December 22, 2020
ಈ ಮೆರವಣಿಗೆಯು ಡಿಸೆಂಬರ್ 25ರಂದು ಮಧ್ಯಾಹ್ನ 1.30ರ ಸುಮಾರಿಗೆ ಪಂಬಾಕ್ಕೆ ತಲುಪುತ್ತದೆ. ಅಲ್ಲಿ ಪಂಬಾ ಗಣಪತಿ ದೇವಸ್ಥಾನದಿಂದ ಮಧ್ಯಾಹ್ನ 3 ಗಂಟೆಗೆ ಹೊರಟು ಶರಂಕುಥಿಗೆ ತಲುಪುತ್ತದೆ. ಅಲ್ಲಿ ಸಾಂಪ್ರದಾಯಿಕವಾಗಿ ಅದಕ್ಕೆ ಸ್ವಾಗತ ನೀಡಲಾಗುತ್ತದೆ. ಸಂಜೆ ವೇಳೆ ಅಯ್ಯಪ್ಪನ ಮೂರ್ತಿಗೆ ಚಿನ್ನದ ಅಂಗಿಯನ್ನು ತೊಡಿಸಿದ ಬಳಿಕ ದೀಪಾರಾಧನೆ ನಡೆಯುತ್ತದೆ. ಮಂಡಲ ಪೂಜೆಯು ಡಿ. 26ರಂದು ನಡೆಯುತ್ತದೆ.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications