ಶಬರಿಮಲೆ ತೀರ್ಪು: ಕೇರಳ ಸರ್ಕಾರದಿಂದ ಮರುಪರಿಶೀಲನಾ ಅರ್ಜಿ ಇಲ್ಲ!

ತಿರುವನಂತಪುರಂ, ಅಕ್ಟೋಬರ್ 03: ಶಬರಿಮಲೆಯಲ್ಲಿ ಮಹಿಳೆಯರಿಗೆ ಪ್ರವೇಶ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಮರುಪರಿಶೀಲಿಸುವಂತೆ ಅರ್ಜಿ ಸಲ್ಲಿಸುವುದಿಲ್ಲ ಎಂದು ಕೇರಳ ಸರ್ಕಾರ ಬುಧವಾರ ಹೇಳಿದೆ.

ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಾಲಯದಲ್ಲಿ 10 ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ದೇವಾಲಯಕ್ಕೆ ಪ್ರವೇಶಿಸಲು ಅನುಮತಿ ಇರಲಿಲ್ಲ. ಈ ವಯಸ್ಸಿನ ಹೆಣ್ಣುಮಕ್ಕಳು ಋತುಮತಿಯಾಗುವ ಕಾರಣಕ್ಕೆ ಅವರು ದೇವಾಲಯಕ್ಕೆ ಕಾಲಿಡುವುದರಿಂದ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆ ಬರುತ್ತದೆ ಎಂದು ವಾದಿಸಲಾಗುತ್ತಿತ್ತು. ಈ ಸಂಪ್ರದಾಯವನ್ನು ಕಳೆದ 800 ವರ್ಷಗಳಿಂದ ದೇವಾಲಯದ ಆಡಳಿತ ಮಂಡಳಿ ಪಾಲಿಸಿಕೊಂಡು ಬಂದಿತ್ತು.

ಆದರೆ ಈ ಪದ್ಧತಿಯಿಂದ ಮಹಿಳೆಯರನ್ನು ಅಸಮಾನರನ್ನಾಗಿ ಕಾಣಲಾಗುತ್ತಿದೆ ಎಂದ ಸುಪ್ರೀಂ ಕೋರ್ಟ್ ಸೆ.28 ರಂದು ಮಹಿಳೆಯರಿಗೆ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಿ ಐತಿಹಾಸಿಕ ತೀರ್ಪು ನೀಡಿತು. ಈ ತೀರ್ಪಿಗೆ ಪ್ರತಿಯಾಗಿ ಕೇರಳ ಸರ್ಕಾರ ಮರುಪರಿಶೀಲನಾ ಅರ್ಜಿ ಸಲ್ಲಿಸಬಹುದು ಎಂದು ಊಹಿಸಲಾಗಿತ್ತು. ಆದರೆ ಅದನ್ನು ತಳ್ಳಿಹಾಕಿದ ಕೇರಳ ಸರ್ಕಾರ, ತಾನು ಮರುಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

Sabarimala verdict: Kerala government will not file review petition

ಶಬರಿಮಲೆ ಪ್ರಕರಣದ ವಿಚಾರಣೆ ನಡೆಸಿದ್ದ ಸಿಜೆಐ ದೀಪಕ್ ಮಿಶ್ರಾ, ನ್ಯಾ. ಆರ್ ಎಫ್ ನಾರಿಮನ್, ಎಎಂ ಖಾನ್ವಿಲ್ಕರ್, ಡಿವೈ ಚಂದ್ರಚೂಡ ಮತ್ತು ನ್ಯಾ. ಇಂದು ಮಲ್ಹೋತ್ರಾ ಅವರಿದ್ದ ಪಂಚ ಸದಸ್ಯ ಪೀಠ ಈ ಮಹತ್ವದ ತೀರ್ಪು ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+