ಶಬರಿಮಲೆ ತೀರ್ಪು: ಅ.1 ರಂದು ಶಿವಸೇನೆಯಿಂದ ಕೇರಳ ಬಂದ್
Recommended Video
ತಿರುವನಂತಪುರಂ, ಸೆಪ್ಟೆಂಬರ್ 29: ಕೇರಳದ ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ವಿರೋಧಿಸಿ ಶಿವಸೇನೆಯು ಕೇರಳ ಬಂದ್ ಗೆ ಕರೆನೀಡಿದೆ.
ಭಾರತದ ಭವಿಷ್ಯ ಬದಲಿಸಲಿರುವ ಸುಪ್ರೀಂಕೋರ್ಟ್ನ 10 ಮಹತ್ವದ ತೀರ್ಪುಗಳು
ಅಕ್ಟೋಬರ್ 1 ರಂದು 12 ಗಂಟೆಗಳ ಕಾಲ ಕೇರಳ ರಾಜ್ಯದಾದ್ಯಂತ ಬಂದ್ ಗೆ ಕರೆನೀಡಲಾಗಿದ್ದು, ತೀರ್ಪನ್ನು ವಿರೋಧಿಸುವ ಸಂಘಟನೆಗಳು ಬಂದ್ ಗೆ ಬೆಂಬಲ ನೀಡುವ ಸಾಧ್ಯತೆ ಇದೆ.
ಶಬರಿಮಲೆಗೆ ಮಹಿಳೆಯರ ಪ್ರವೇಶ: ಸುಪ್ರೀಂ ತೀರ್ಪಿನ ಮುಖ್ಯಾಂಶ, ಚಿತ್ರ ಮಾಹಿತಿ
800 ವರ್ಷಗಳ ಅಯ್ಯಪ್ಪ ದೇವಾಲಯದ ಇತಿಹಾಸದಲ್ಲಿ ಮಹಿಳೆಯರ ಪ್ರವೇಶಕ್ಕೆ ಅವಕಾಶವಿರಲಿಲ್ಲ. 10 ವರ್ಷ ವಯಸ್ಸಿನಿಂದ 50 ವರ್ಷ ವಯಸ್ಸಿನವರೆಗಿನ ಹೆಣ್ಣು ಮಕ್ಕಳಿಗೆ ಪ್ರವೇಶ ನೀಡದಿರುವುದಕ್ಕೆ ಕಾರಣ, ಆ ವಯಸ್ಸಿನ ಹೆಣ್ಣುಮಕ್ಕಳು ಋತುಮತಿಯರಾಗುತ್ತಾರೆ ಎಂಬುದು.
ಋತುಮತಿಯಾಗುವ ಹೆಣ್ಣು ಮಕ್ಕಳು ದೇವಾಲಯಕ್ಕೆ ಪ್ರವೇಶಿಸುವುದರಿಂದ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆ ಬರುತ್ತದೆ ಎಂಬ ಕಾರಣಕ್ಕೆ ಈ ದೇವಾಲಯದ ಆಡಳಿತ ಮಂಡಳಿಯೇ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು. ಆದರೆ ಶುಕ್ರವಾರ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಲ್ಲಿ ಈ ನಿರ್ಬಂಧವನ್ನು ತೆರವುಗೊಳಿಸಲಾಗಿದ್ದು, ಸುಪ್ರೀಂ ತೀರ್ಪನ್ನು ಹಲವರು ಖಂಡಿಸಿದ್ದಾರೆ.
ಶಬರಿಮಲೆ ದೇವಳಕ್ಕೆ ಮಹಿಳೆಯರ ಪ್ರವೇಶ ನಿಷೇಧಕ್ಕೆ ಕಾರಣ ಗೊತ್ತೆ?
ತೀರ್ಪಿಗೆ ಸಂಬಂಧಿಸಿದಂತೆ ಮರುಪರಿಶೀಲನಾ ಅರ್ಜಿಯನ್ನು ದೇವಾಲಯದ ಆಡಳಿತ ಮಂಡಳಿ ಸಲ್ಲಿಸುವ ಸಾಧ್ಯತೆ ಇದೆ.