Breaking: ಕೇರಳ ಸಿಪಿಎಂ ನಾಯಕನ ಹತ್ಯೆ; 8 ಬಿಜೆಪಿ ಕಾರ್ಯಕರ್ತರ ಕೈವಾಡ
ತಿರುವನಂತಪುರಂ, ಆಗಸ್ಟ್ 16: ಕೇರಳದ ಪಾಲಕ್ಕಾಡ್ ಸಮೀಪದ ಮಲಂಪುಳದಲ್ಲಿ ನಡೆದ ಸಿಪಿಎಂ ಸ್ಥಳೀಯ ಸಮಿತಿ ಸದಸ್ಯ ಶಾಜಹಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಹತ್ಯೆಯ ಹಿಂದೆ ಎಂಟು ಬಿಜೆಪಿ ಕಾರ್ಯಕರ್ತರ ಕೈವಾಡವಿದೆ ಎಂದು ಮೃತನ ಸ್ನೇಹಿತ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.
ಬಂಧಿಸಲಾಗಿರುವ ಇಬ್ಬರಲ್ಲಿ ಒಬ್ಬರು ನೇರವಾಗಿ ಅಪರಾಧದಲ್ಲಿ ಭಾಗಿಯಾಗಿದ್ದರೆ ಮತ್ತು ಇನ್ನೊಬ್ಬರು ಹಿಂದಿನಿಂದ ಕೊಲೆ ಮಾಡಿದವರಿಗೆ ಸಹಾಯ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಕರಣದ ಎಂಟು ಆರೋಪಿಗಳ ಪೈಕಿ ಬಂಧಿತರೂ ಸೇರಿದ್ದಾರೆ. ಇಬ್ಬರನ್ನೂ ಬೇರೆ ಬೇರೆ ಅಡಗುತಾಣಗಳಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಶಹಜಹಾನ್ನ ಸ್ನೇಹಿತ ಸುರೇಶ್ ಎಂಬಾತ ಪೊಲೀಸರಿಗೆ ಹೇಳಿಕೆ ನೀಡಿದ್ದು, ಹತ್ಯೆಯ ಹಿಂದೆ ಎಂಟು ಬಿಜೆಪಿ ಕಾರ್ಯಕರ್ತರ ಕೈವಾಡವಿದೆ ಎಂದಿದ್ದಾರೆ.

ರಾಜಕೀಯ ಕಾರಣಗಳು ಕೊಲೆಗೆ ಕಾರಣವಾಗಿವೆ ಎಂದು ಎಫ್ಐಆರ್ನಲ್ಲಿ ಹೇಳಲಾಗಿದೆ. ಆದರೆ, ಈ ಹಂತದಲ್ಲಿ ಇದನ್ನು ರಾಜಕೀಯ ಕೊಲೆ ಎನ್ನಲಾಗದು ಎಂದು ಪಾಲಕ್ಕಾಡ್ ಜಿಲ್ಲಾ ಪೊಲೀಸ್ ಮುಖ್ಯಸ್ಥರು ಪ್ರತಿಕ್ರಿಯೆ ನೀಡಿದ್ದಾರೆ.
ಪಾಲಕ್ಕಾಡ್ ಉಪ ಪೊಲೀಸ್ ವರಿಷ್ಠಾಧಿಕಾರಿ ವಿ ಕೆ ರಾಜು ಅವರ ನೇತೃತ್ವದಲ್ಲಿ ಶಾಜಹಾನ್ ಹತ್ಯೆ ಪ್ರಕರಣದ ತನಿಖೆಗಾಗಿ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ.
ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ನಡೆದ ಶಾಜಹಾನ್ ಕೊಲೆಯು ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಈ ಕೊಲೆ ಹಿಂದೆ ಆರೆಸ್ಸೆಸ್-ಬಿಜೆಪಿ ಕೈವಾಡವಿದೆ ಎಂದು ಸಿಪಿಎಂ ಆರೋಪಿಸಿದೆ. ಆದರೆ, ವಿರೋಧ ಪಕ್ಷಗಳು ಮತ್ತು ಕೆಲವು ಹಿರಿಯ ನಾಯಕರು ಅಂತಹ ಹೇಳಿಕೆಗಳನ್ನು ನೀಡಲು ನಿರಾಕರಿಸಿದ್ದಾರೆ.

ಕೇರಳದ ಪಾಲಕ್ಕಾಡ್ನ ಮರುತರೋಡ್ನ ಸಿಪಿಐ (ಎಂ) ಸ್ಥಳೀಯ ಸಮಿತಿ ಸದಸ್ಯ ಶಾಜಹಾನ್ ಅವರನ್ನು ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ಹತ್ಯೆ ಮಾಡಲಾಗಿದೆ. ಪೊಲೀಸರ ಆರಂಭಿಕ ವರದಿಗಳ ಪ್ರಕಾರ, ಶಾಜಹಾನ್ ಮೇಲೆ 5 ರಿಂದ 8 ಜನರ ಗುಂಪು ಅವರ ಮನೆಯ ಬಳಿಯೇ ದಾಳಿ ಮಾಡಿ ಕೊಲೆ ಮಾಡಿದೆ ಎಂದಿದೆ.
ಇನ್ನು, ಬಿಜೆಪಿ ತನ್ನ ಕಾರ್ಯಕರ್ತರ ಮೇಲಿನ ಆರೋಪಗಳನ್ನು ತಳ್ಳಿಹಾಕಿದೆ. ಶಾಜಹಾನ್ರನ್ನು ಆರ್ಎಸ್ಎಸ್ ಕೊಂದಿದೆ ಎಂದು ಸಿಪಿಎಂ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಕೃಷ್ಣಕುಮಾರ್ ಹೇಳಿದ್ದಾರೆ.
'ಅರ್ಜುನ್ ಆಯಂಕಿ ಅವರಂತಹ ಸಿಪಿಎಂ ಕ್ರಿಮಿನಲ್ಗಳೊಂದಿಗೆ ಶಾಜಹಾನ್ ನಿಕಟ ಸಂಪರ್ಕ ಹೊಂದಿದ್ದಾರೆ. ಸಿಪಿಎಂ ತೊರೆದು ಬಿಜೆಪಿ ಸೇರಿರುವವರೇ ಕೊಲೆ ಮಾಡಿದ್ದಾರೆ ಎಂಬ ಆರೋಪ ನಿರಾಧಾರವಾಗಿದ್ದು, ಆ ಪಕ್ಷದ ಯಾರನ್ನೂ ಆರೋಪಿಗಳೆಂದು ಹೆಸರಿಸುವುದಿಲ್ಲ' ಎಂದು ಸಿ.ಕೃಷ್ಣಕುಮಾರ್ ಹೇಳಿದ್ದಾರೆ.
Recommended Video
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications