ಕರೆ ಮಾಡಿದ್ದಕ್ಕಾಗಿ ರಾಜನಾಥ್ ಸಿಂಗ್ ಗೆ ಧನ್ಯವಾದ ಅರ್ಪಿಸಿದ ಶಶಿ ತರೂರ್
ನವದೆಹಲಿ, ಏಪ್ರಿಲ್ 17: ಗೃಹಸಚಿವ ರಾಜನಾಥ್ ಸಿಂಗ್ ಅವರಿಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಧನ್ಯವಾದ ಅರ್ಪಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ದೇವಾಲಯವೊಂದರಲ್ಲಿ ಬಿದ್ದು ತಲೆಗೆ ಪೆಟ್ಟಾದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಶಿ ತರೂರ್ ಅವರಿಗೆ ದೂರವಾಣಿ ಕರೆ ಮಾಡಿ, ರಾಜನಾಥ್ ಸಿಂಗ್ ಅವರು ಆರೋಗ್ಯ ವಿಚಾರಿಸಿದ್ದರು.
ಶಶಿ ತರೂರ್ ಭೇಟಿ ಬಗ್ಗೆ ನಿರ್ಮಲಾ ಸೀತಾರಾಮನ್ ಯಾರಿಗೂ ಹೇಳಿರಲಿಲ್ಲ!
ಅದಕ್ಕೆ ಪ್ರತಿಯಾಗಿ ಧನ್ಯವಾದ ಅರ್ಪಿಸಿರುವ ಶಶಿ ತರೂರ್, ಟ್ವೀಟ್ ಮಾಡಿ ತಮ್ಮ ಸಂತಸ ಹಂಚಿಕೊಂಡಿದ್ದಾರೆ.
Thank you @rajnathsingh for your call. I am touched by your concern. By the grace of God I am well enough to be back in action.
— Shashi Tharoor (@ShashiTharoor) April 17, 2019
"ಕರೆ ಮಾಡಿದ್ದಕ್ಕೆ ಧನ್ಯವಾದಗಳು ರಾಜನಾಥ್ ಸಿಂಗ್ ಅವರೇ. ನಿಮ್ಮ ಕಾಳಜಿ ನನ್ನನ್ನು ತಟ್ಟಿತು. ದೇವರ ದಯೆಯಿಂದ ನಾನು ಗುಣಮುಖನಾಗಿ, ಕೆಲಸಕ್ಕೆ ವಾಪಸ್ಸಾಗಿದ್ದೇನೆ" ಎಂದು ಟ್ವೀಟ್ ಮಾಡಿದ್ದಾರೆ.
ಲೋಕಸಭಾ ಚುನಾವಣಾ ಪ್ರಚಾರಕ್ಕೆಂದು ಕೇರಳಕ್ಕೆ ತೆರಳಿದ್ದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಶಶಿ ತರೂರ್ ಅವರಿದ್ದ ಆಸ್ಪತ್ರೆಗೆ ತೆರಳಿ, ಅವರ ಕುಶಲ ವಿಚಾರಿಸಿದ್ದರು.
ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?
ಕೇರಳದ ತಿರುವನಂತಪುರಂ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಶಶಿ ತರೂರ್, ಏಪ್ರಿಲ್ 23 ರಂದು ಚುನಾವಣೆ ಎದುರಿಸಲಿದ್ದಾರೆ. ಮೇ 23 ರಂದು ಫಲಿತಾಂಶ ಹೊರಬೀಳಲಿದೆ.