ಮೋದಿಯನ್ನು ಹೊಗಳಿದ್ದಕ್ಕೆ ಶಶಿ ತರೂರ್ ಗೆ ಕಾಂಗ್ರೆಸ್ ನಿಂದ ನೋಟಿಸ್?
ತಿರುವನಂತಪುರಂ, ಆಗಸ್ಟ್ 27: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುತ್ತಿರುವ ಕಾಂಗ್ರೆಸ್ ನಾಯಕರ ಪಟ್ಟಿಗೆ ಸಂಸದ ಶಶಿ ತರೂರ್ ಅವರೂ ಸೇರಿದ್ದು ಹಳೇ ವಿಷಯ. ಆದರೆ ಅದಕ್ಕಾಗಿ ಅವರು ಕಾಂಗ್ರೆಸ್ ಪಕ್ಷದಿಂದ ನೊಟಿಸ್ ಪಡೆಯಲಿದ್ದಾರೆ!
ವಿರೋಧಪಕ್ಷದಲ್ಲಿದ್ದುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದು ಏಕೆ ಎಂಬ ಬಗ್ಗೆ ವಿವರಣೆ ನೀಡುವಂತೆ ಅವರಿಗೆ ನೋಟಿಸ್ ನೀಡಲಾಗುತ್ತಿದೆ.
Recommended Video
"ನಾವು ಮೋದಿಯವರನ್ನು ಕಾಂಗ್ರೆಸ್ ಪಕ್ಷದ 'ಖರ್ಚಿನಲ್ಲಿ' ಹೊಗಳಿಲ್ಲ. ನಾನು ಆರು ವರ್ಷಗಳಿಂದಲೂ ಮೋದಿ ಅವರನ್ನು ಟೀಕಿಸುತ್ತಲೇ ಬಂದಿದ್ದೇನೆಂದು ನಿಮಗೂ ಗೊತ್ತು. ಆದರೆ ಅವರ ಉತ್ತಮ ನಡೆಯನ್ನು ಮೆಚ್ಚುವ ಉದಾರತೆ ತೋರುವುದರಿಂದ ನಮ್ಮ ವಿಶ್ವಾಸಾರ್ಹತೆಯೂ ಹೆಚ್ಚುತ್ತದೆ. ಎಲ್ಲವನ್ನೂ ವಿರೋಧಿಸಲೇಬೇಕೆಂದಿಲ್ಲ" ಎಂದು ಶಶಿ ತರೂರ್ ಪ್ರತಿಕ್ರಿಯೆ ನೀಡಿದ್ದಾರೆ.

ಕೇರಳದ ತಿರುವನಂತಪುರಂ ಸಂಸದ ಶಶಿ ತರೂರ್ ಅವರು ಇತ್ತೀಚೆಗೆ ಮಾತನಾಡುತ್ತ, "ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಮತ್ತು ಅಭಿಷೇಕ್ ಮನು ಸಿಂಗ್ವಿ ಅವರು ಮೋದಿಯವರ ಎಲ್ಲಾ ನಡೆಯನ್ನೂ ತಪ್ಪು ಎನ್ನುವುದಕ್ಕಾಗುವುದಿಲ್ಲ. ಅವರ ಕೆಲವು ನಡೆಯನ್ನು ಮೆಚ್ಚಬೇಕು. ಅದಿಲ್ಲದೆ ಎರಡನೇ ಬಾರಿಗೂ ಅವರಿಗೆ ಇಂಥ ಜನಾದೇಶ ದೊರಕುತ್ತಿರಲಿಲ್ಲ ಎಂಬ ಹೇಳಿಕೆ ನೀಡಿದ್ದನ್ನು ನಾನು ಸ್ವಾಗತಿಸುತ್ತೇನೆ. ಅವರ ಮಾತಿಗೆ ನನ್ನದೂ ಬೆಂಬಲವಿದೆ" ಎಂದಿದ್ದರು.
ಆದರೆ ಅವರ ನಡೆಯನ್ನು ಕೇರಳ ಕಾಂಗ್ರೆಸ್ ಘಟಕ ಪ್ರಶ್ನಿಸಿದ್ದು, 'ವಿರೋಧ ಪಕ್ಷದವರಾಗಿ ಆಡಳಿತ ಪಕ್ಷವನ್ನು ಹೊಗಳುವುದು ಪಕ್ಷದ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ, ಈ ಬಗ್ಗೆ ನೀವು ಸ್ಪಷ್ಟನೆ ನೀಡಬೇಕು' ಎಂದಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications