ವಿಸ್ಮಯ ಸಾವು: ಎಚ್ಚೆತ್ತುಕೊಂಡ ಸರ್ಕಾರ, ಸಹಾಯವಾಣಿಗೆ ಚಾಲನೆ
ತಿರುವನಂತಪುರಂ, ಜೂನ್ 23: ಕೇರಳದಲ್ಲಿ ಭಾರಿ ಸಂಚಲನ ಮೂಡಿಸಿದ ವಿಸ್ಮಯ ಸಾವು ಪ್ರಕರಣದ ನಂತರ ಪಿಣರಾಯಿ ವಿಜಯನ್ ಸರ್ಕಾರ ಎಚ್ಚೆತ್ತುಕೊಂಡಿದೆ. ವರದಕ್ಷಿಣೆ ಕಿರುಕುಳಕ್ಕೆ ಯುವ ಗೃಹಿಣಿ ಬಲಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿ ಸರ್ಕಾರಿ ನೌಕರನಿಗೆ ತಕ್ಕಶಿಕ್ಷೆಯಾಗಬೇಕು ಎಂದು ಸಾರ್ವಜನಿಕರಿಂದ ಬಂದ ಆಕ್ರೋಶದ ಮನವಿಗೆ ಕೇರಳ ಸರ್ಕಾರ ಸ್ಪಂದಿಸಿದೆ. ವಿಸ್ಮಯ ಪತಿ ಕಿರಣ್ ಬಂಧನವಾಗಿದೆ, ತನಿಖೆ ಜಾರಿಯಲ್ಲಿದೆ. ಈ ಬಗ್ಗೆ ಇಂಥ ದುರಂತಗಳು ಸಂಭವಿಸದಂತೆ ಎಚ್ಚರಿಕೆ ವಹಿಸುವಂತೆ ಸಿಎಂ ಕರೆ ನೀಡಿದ್ದಾರೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವರದಕ್ಷಿಣೆ ಕಿರುಕುಳ ಸಾವು ಪ್ರಕರಣಗಳ ಬಗ್ಗೆ ಮಾತನಾಡಿ, ''ಪಥನಂತಿಟ್ಟ ಜಿಲ್ಲಾ ಪೊಲೀಸ್ ವರಿಷ್ಠರಾದ ಆರ್ ನಿಶಾಂತಿನಿರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ವರದಕ್ಷಿಣೆ ಕಿರುಕುಳ ಸಂಬಂಧಿಸಿದ ದೂರುಗಳನ್ನು ನೇರವಾಗಿ ಅವರೊಂದಿಗೆ ಹಂಚಿಕೊಳ್ಳಬಹುದು, 9497999955 ಸಂಖ್ಯೆ ಚಾಲನೆಗೊಳ್ಳಲಿದ್ದು, ಮಹಿಳಾ ಎಸ್ಐಯೊಬ್ಬರು ನಿಶಾಂತಿನಿಗೆ ನೆರವು ನೀಡಲಿದ್ದಾರೆ. ಯಾವುದೇ ವಯೋಮಾನದವರು ಕಿರುಕುಳ ಬಗ್ಗೆ ದೂರು ನೀಡಿದರೆ ತಕ್ಷಣವೇ ಆ ಬಗ್ಗೆ ಗಮನ ಹರಿಸಬೇಕು ಎಂದು ಜಿಲ್ಲಾ ಪೊಲೀಸರಿಗೆ ಸೂಚನೆ ನೀಡಲಾಗಿದೆ'' ಎಂದರು.

''ಮಹಿಳೆಯರ ಮೇಲೆ ದೌರ್ಜನ್ಯ ಮೆರೆಯುವುದೇ ಪುರುಷತ್ವದ ಲಕ್ಷಣ ಎಂಬಂತೆ ವರ್ತಿಸುವ ಸಮಾಜ ನಮ್ಮದಲ್ಲ, ಇಂಥ ಕ್ರೂರ ಘಟನೆಗಳು ಕಂಡು ಬಂದರೆ ತಕ್ಷಣವೇ ಸೂಕ್ತ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶಾಲಾ, ಕಾಲೇಜು ಪಠ್ಯಕ್ರಮಗಳನ್ನು ಈ ಬಗ್ಗೆ ಜಾಗೃತಿ ಮೂಡಿಸುವ ಪಾಠ, ಸಂದೇಶ ಸೇರಿಸಲು ಸರ್ಕಾರ ಮುಂದಾಗಿದೆ. ಮದುವೆ ಎನ್ನುವುದು ಸ್ಟೇಟಸ್, ಮಾರುಕಟ್ಟೆ ಮೌಲ್ಯ, ವ್ಯಾಪಾರದ ವಿಷಯ ವಸ್ತುವಲ್ಲ, ಕೌಟುಂಬಿಕ ಮೌಲ್ಯಕ್ಕೆ ಬೆಲೆ ಕೊಟ್ಟು ಸಂಸಾರ ನಡೆಸುವವರಿಗೆ ನಿಮ್ಮ ಮಕ್ಕಳನ್ನು ಮದುವೆ ಮಾಡಿಕೊಡಿ, ಸರಕುಗಳಂತೆ ವ್ಯಾಪಾರ ಮಾಡಬೇಡಿ,'' ಎಂದು ಸಿಎಂ ವಿಜಯನ್ ಎಚ್ಚರಿಕೆ ಮಾತಗಳನ್ನಾಡಿದ್ದಾರೆ.

ಪಂಡಾಲಂನ ಮನ್ನಂ ಆಯುರ್ವೇದ ಮೆಡಿಕಲ್ ಕಾಲೇಜಿನ ನಾಲ್ಕನೇ ವರ್ಷ ಬಿಎಎಂಎಸ್ ವಿದ್ಯಾರ್ಥಿನಿ ವಿಸ್ಮಯ(24) ತನ್ನ ಪತಿ ಕಿರಣ್ ನೀಡುತ್ತಿದ್ದ ವರದಕ್ಷಿಣೆಗಾಗಿ ಕಿರುಕುಳ ಸಹಿಸದೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಬಂಧಿತ ಕಿರಣ್ ಕುಮಾರ್ ಎರಡು ವಾರಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಸಾಸ್ಥಂಕೊಟ್ಟ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ನೀಡಿದೆ. ಕೊಟ್ಟರಕ್ಕರ ಸಬ್ ಜೈಲಿನಲ್ಲಿರಿಸಲಾಗುತ್ತದೆ ಎಂದು ತಿಳಿದು ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ಲಂ ಪೊಲೀಸರಲ್ಲದೆ, ರಾಜ್ಯ ಮಹಿಳಾ ಆಯೋಗ ಕೂಡಾ ಸುಮೋಟೋ ಕೇಸ್ ದಾಖಲಿಸಿಕೊಂಡಿದೆ.
Note: The all-India helpline for women in distress is 1091. ರಾಜ್ಯವಾರು ಸಹಾಯವಾಣಿ ಸಂಖ್ಯೆಗಳ ವಿವರ ಇಲ್ಲಿದೆ (https://indianhelpline.com/WOMEN-HELPLINE/)
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications