ಆಡು ಮಾರಿ ಸಿಎಂ ನಿಧಿಗೆ ದೇಣಿಗೆ ನೀಡಿದ್ದ ಸುಬೈದಾ ಕೇರಳ ಪ್ರಮಾಣವಚನ ಸಮಾರಂಭದಲ್ಲಿ ವಿಶೇಷ ಅತಿಥಿ
ಕೊಲ್ಲಂ, ಮೇ 20: ತನ್ನ ಜೀವನೋಪಾಯದ ಮಾರ್ಗವಾಗಿದ್ದ ತನ್ನ ಆಡು, ಕುರಿಗಳನ್ನು ಎರಡು ಬಾರಿ ಮಾರಿ, ಮುಖ್ಯಮಂತ್ರಿಯ ಪರಿಹಾರ ನಿಧಿಗೆ ಹಣವನ್ನು ದೇಣಿಗೆ ನೀಡಿದ ಸುಬೈದಾ ಉಮ್ಮಾ, ಪಿಣರಾಯಿ ನೇತೃತ್ವದ 2.0 ಸರ್ಕಾರದ ಪ್ರಮಾಣವಚನ ಸಮಾರಂಭದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನಿನ್ನೆಯಷ್ಟೇ ಅವರಿಗೆ ಕಲೆಕ್ಟರ್ ವಿವಿಐಪಿ ಪಾಸ್ ನೀಡಿದ್ದಾರೆ.
ಕೊರೊನಾ ಮೊದಲನೇ ಅಲೆಯ ಸಂದರ್ಭದಲ್ಲಿ ಸಿಎಂ ಪಿಣರಾಯಿ ವಿಜಯನ್ ನಡೆಸುತ್ತಿದ್ದ ಎಲ್ಲಾ ಪತ್ರಿಕಾಗೋಷ್ಠಿ ಟಿವಿ ಮೂಲಕ ನೋಡುತ್ತಿದ್ದ ಸುಬೈದಾ, ಕೆಲವು ಮಕ್ಕಳು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡುವುದನ್ನು ನೋಡಿದ್ದರು. ಈ ಮಕ್ಕಳಂತೆ ತಾನು ಕೂಡಾ ಏನಾದರೂ ಸಹಾಯ ಮಾಡಬೇಕು ಎಂದು ನಿರ್ಧರಿಸಿದ ಸುಬೈದಾ, ನಾಲ್ಕು ಆಡುಗಳನ್ನು 12,000 ರೂ. ಗಳಿಗೆ ಮಾರಾಟ ಮಾಡಿ, ಈ ಪೈಕಿ 5,000 ರೂಗಳನ್ನು ಕಲೆಕ್ಟರ್ಗೆ ಹಸ್ತಾಂತರಿಸಿ, ಉಳಿದ ಹಣದಲ್ಲಿ ಬಡವರಿಗೆ ಆಹಾರ ಪೂರೈಸಿದ್ದಾರೆ.
ಇತ್ತೀಚೆಗೆ, ಕೋವಿಡ್ ಲಸಿಕೆ ಉಚಿತವಾಗಿ ಲಭ್ಯವಾಗುವುದಿಲ್ಲ ಎಂಬ ಸುದ್ದಿಯನ್ನು ಕೇಳಿ ಸುಬೈದಾ ಮತ್ತೆ ದೇಣಿಗೆ ನೀಡಲು ನಿರ್ಧರಿಸಿದ್ದು, ಎರಡು ಕುರಿಮರಿ ಮತ್ತು ಎರಡು ದೊಡ್ಡ ಆಡುಗಳನ್ನು ಮತ್ತೆ 16,000 ರೂ.ಗೆ ಮಾರಾಟ ಮಾಡಿ ಇದರಲ್ಲಿ 5,000 ರೂಗಳನ್ನು ಕಲೆಕ್ಟರ್ಗೆ ಹಸ್ತಾಂತರಿಸಿ, ಉಳಿದ ಹಣದಲ್ಲಿ ಬಡವರಿಗೆ ಆಹಾರ ಪೂರೈಸಲು ವ್ಯಯಿಸಿದ್ದಾರೆ.

ಸುಬೈದಾ ಉಮ್ಮಾ ಮತ್ತು ಆಕೆಯ ಕುಟುಂಬವು ಪಲ್ಲಿತೋತ್ತಂ ಪೊಲೀಸ್ ಠಾಣೆ ಎದುರಿನ ಸಂಗಮಂ ನಗರದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದಾರೆ. ಸುಬೈದಾ ಮತ್ತು ಆಕೆಯ ಪತಿ ಅಬ್ದುಲ್ ಸಲಾಮ್ ತಮ್ಮ ಮನೆಯ ಬಳಿ ಚಹಾ ಅಂಗಡಿಯೊಂದನ್ನು ತೆರೆದಿದ್ದು ಆದರೆ ಅದರಲ್ಲಿ ಸಾಕಷ್ಟು ಆದಾಯವಿಲ್ಲದ ಹಿನ್ನೆಲೆ ಆಡುಗಳನ್ನು ಸಾಕುತ್ತಿದ್ದಾರೆ. ನಿಶಾ, ಶೀಜಾ ಮತ್ತು ಕುಂಜುಮೊನ್ ಎಂಬ ಮೂವರು ಮಕ್ಕಳಿದ್ದಾರೆ. ಮೂವರು ವಿವಾಹಿತರು.
ಕೇರಳದ ಪಿಣರಾಯ್ ವಿಜಯನ್ ನೇತೃತ್ವದ 2.0 ಸರ್ಕಾರದ ನೂತನ ಸಚಿವರುಗಳು ಗುರುವಾರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಹೊಸಬರಿಗೆ ಈ ಸಂಪುಟದಲ್ಲಿ ಅವಕಾಶ ನೀಡಿರುವುದು ಮಾದರಿ ನಡೆ ಎಂದು ಶ್ಲಾಘಿಸಲಾಗಿದ್ದರೂ ಆರೋಗ್ಯ ಸಚಿವೆಯಾಗಿದ್ದ ಕೆ.ಕೆ. ಶೈಲಜಾಗೆ ಅವಕಾಶ ನೀಡದಿರುವುದು ಚರ್ಚೆಗೆ ಗ್ರಾಸವಾಗಿದೆ.
Courtesy: thenewsminute
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications