ಬಡತನವೆಂಬ ಬೇಲಿ ದಾಟಿ MBBSಗೆ ಕಾಲಿಟ್ಟ ಕೇರಳದ ದಿನಗೂಲಿ ನೌಕರರ 3 ಮಕ್ಕಳು
ಪಾಲಕ್ಕಾಡ, ಫೆಬ್ರವರಿ 12: ಆರ್ಥಿಕವಾಗಿ ಬಡವರಾದವರು ವಿದ್ಯೆಯಲ್ಲಿ ಶ್ರೀಮಂತರಾಗಿರಬಹುದು, ಹೌದು ಕೇರಳದ ದಿನಗೂಲಿ ನೌಕರನ ಮೂವರು ಮಕ್ಕಳು ಎಂಬಿಬಿಎಸ್ಗೆ ಕಾಲಿಟ್ಟಿದ್ದಾರೆ.
ಮೂವರು ವೈದ್ಯರಾಗಬೇಕೆಂಬ ಕನಸು ಹೊತ್ತಿದ್ದಾರೆ, ಮೂವರು ಸರ್ಕಾರಿ ಶಾಲೆಯಲ್ಲಿಯೇ ಓದಿ ವೈದ್ಯಕೀಯ ಸೀಟನ್ನು ತನ್ನದಾಗಿದಿಕೊಂಡಿದ್ದಾರೆ.
ಮೆಟ್ಟುವಾಜಿ ಎಂಬ ಕುಗ್ರಾಮದಲ್ಲಿ ವಾಸಿಸುವ ರಾಮಚಂದ್ರನ್ ಹಾಗೂ ಕಮಲಾ ದಂಪತಿ ದಿನಗೂಲಿ ನೌಕರರು. ರಾಮನ್ ಓದಿರುವುದು ಕೇವಲ 5ನೇ ಕ್ಲಾಸ್. ಇನ್ನು ಕಮಲಾ ಸ್ಥಳೀಯ ಬುಡಕಟ್ಟು ಸಮುದಾಯಕ್ಕೆ ಸೇರಿದವರು.

ದಿನಗೂಲಿ ನೌಕರರಾಗಿದ್ದರೂ, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕೆಂಬ ಕನಸಿಗೆ ಅಡ್ಡಿಯಾಗಿಲ್ಲ. ಅಂತೆಯೇ ಅವರ ಮೂವರೂ ಮಕ್ಕಳು ಕೂಡಾ ಯಾವುದೇ ದುಬಾರಿ ಶಿಕ್ಷಣ ಪಡೆಯದೇ ಕೇವಲ ಸರ್ಕಾರ ಶಾಲೆಯಲ್ಲೇ ಓದಿ ಎಂಬಿಬಿಎಸ್ ಸೀಟು ಪಡೆದುಕೊಂಡಿದ್ದಾರೆ.
ಮಗ ಇಂದ್ರಜಿತ್ 3 ವರ್ಷದ ಹಿಂದೆಯೇ ಎಂಬಿಬಿಎಸ್ ಸೀಟು ಪಡೆದಿದ್ದ. ಮೊದಲ ಮಗಳು ಇಂದ್ರಜಾ 2 ವರ್ಷದ ಹಿಂದೆ ಸೀಟು ಪಡೆದುಕೊಂಡಿದ್ದಳು. ಇದೀಗ ಎರಡನೇ ಮಗಳು ಇಂದುಜಾ ಕೂಡಾ ಎಂಬಿಬಿಎಸ್ ಸೀಟು ದಕ್ಕಿಸಿಕೊಳ್ಳುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಇವರ ಮನೆ ಇರುವುದು ಕಾಡಿನ ನಡುವಾದ ಕಾರಣ, ನಿತ್ಯ ಶಾಲೆಗೆ 8 ಕಿ.ಮೀ ನಡೆದುಕೊಂಡೇ ಹೋಗಬೇಕಾಗಿತ್ತು.
ಕಾಡಿನ ಮಧ್ಯತೆ ಇರುವುದರಿಂದ ಪ್ರಾಣಿಗಳ ಭೀತಿಯೂ ಕಾಡುತ್ತಿದ್ದು, ಆದರೆ ಇದೆಲ್ಲಕ್ಕೆ ಹೆಸರದೆ ಶಾಲೆಗೆ ಹೋಗುತ್ತಿದ್ದರು. ಒಬ್ಬರಿಗೆ ಒಬ್ಬರ ನೆರವಾಗುವ ಮೂಲಕ ಈ ಸಾಧನೆ ಮಾಡಿದ್ದಾರೆ. ಕೇವಲ 3 ವರ್ಷಗಳ ಹಿಂದಿನವರೆಗೂ ನಾವು ನಿತ್ಯ 3 ಕಿ.ಮೀ ನಡೆದು ಮನೆಗೆ ನೀರು ಹೊತ್ತುಕೊಂಡು ಬರಬೇಕಾಗಿತ್ತು.
ಇದೆಲ್ಲದರ ನಡುವೆ ಹೊರತಾಗಿಯೂ ಮೂರೂ ಮಕ್ಕಳು ಕಟ್ಟಪಟ್ಟು ಸರ್ಕಾರಿ ಶಾಲೆಯಲ್ಲೇ ವಿದ್ಯಾಭ್ಯಾಸ ಮಾಡಿ ಉನ್ನತ ಶಿಕ್ಷಣದತ್ತ ಹೆಜ್ಜೆ ಇಟ್ಟಿದ್ದಾರೆ. ಇದು ಖಷಿಯ ವಿಷಯ ಎಂದು ರಾಮನ್-ಕಮಲಾ ಸಂತಸ ವ್ಯಕ್ತಪಡಿಸಿದ್ದಾರೆ.
ನೀಟ್ ಸೀಟು ಕೈಬಿಟ್ಟಿದ್ದ ವಿದ್ಯಾರ್ಥಿನಿ: ತಂಗಪೆಚ್ಚಿ ಎನ್ನುವ ವಿದ್ಯಾರ್ಥಿನಿ ಪಾನಮೂಪನ್ ಪತ್ತಿ ಕುಗ್ರಾಮದ ನಿವಾಸಿಯಾಗಿದ್ದರು, 2020ರಲ್ಲಿ ಆಕೆ ನೀಟ್ ಪರೀಕ್ಷೆ ಬರೆದಿದ್ದಳು. ಹಿಂದುಳಿದ ವರ್ಗದಿಂದ ಹಿನ್ನೆಲೆಯ ಆಕೆಗೆ ಡಾಕ್ಟರ್ ಆಗಬೇಕು ಎನ್ನುವ ಕನಸು. ಅದಕ್ಕಾಗಿ ಎಂಬಿಬಿಎಸ್ ಓದಲು ಅವಳಿಗಾಸೆ. ತಂಗಪೆಚ್ಚಿ ನೀಟ್ ಪರೀಕ್ಷೆಯಲ್ಲಿ 155 ಅಂಕ ಗಳಿಸಿ ಪಾಸಾಗಿದ್ದಳು. ಆದರೆ ದುಬಾರಿ ಶುಲ್ಕದ ಭಯದಿಂದ ಸೀಟನ್ನು ತ್ಯಜಿಸಿದ್ದಳು.
ನಂತರ ಸರ್ಕಾರ ಹಿಂದುಳಿದ ವರ್ಗಕ್ಕೆ ಶೇ. 7.5 ಮೀಸಲಾತಿ ಘೋಷಿಸಿತ್ತು. ಆದರೆ ಅಷ್ಟರಲ್ಲಿ ತಂಗಪೆಚ್ಚಿ ಸೀಟು ತ್ಯಜಿಸಿಯಾಗಿತ್ತು. 2021ರಲ್ಲಿ ತಂಗಪೆಚ್ಚಿ ಮತ್ತೊಮ್ಮೆ ನೀಟ್ ಪರೀಕ್ಷೆ ಬರೆದಳು. ಈ ಬಾರಿ ಆಕೆ 256 ಅಂಕ ಗಳಿಸಿದಳು. ಕಳೆದ ಬಾರಿಗಿಂತ 100 ಅಂಕ ಹೆಚ್ಚು. ಕನ್ಯಾಕುಮಾರಿಯ ಶ್ರೀ ಮೂಕಾಂಬಿಕಾ ಮೆಡಿಕಲ್ ಕಾಲೇಜಿನಲ್ಲಿ ಆಕೆಗೆ ಮೆಡಿಕಲ್ ಸೀಟು ಸಿಕ್ಕಿದೆ.
ಈ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ತಂಗಪೆಚ್ಚಿ ತಮಿಳು ಮಾಧ್ಯಮ ಹಿನ್ನೆಲೆಯಿಂದ ಬಂದ ಕಾರಣ ಇಂಗ್ಲಿಷ್ ಪದಗಳ ಬಳಕೆ ಸವಾಲಿನದ್ದಾಗಿತ್ತು. ಆದರೆ ಶಿಕ್ಷಕರ ನೆರವಿನಿಂದ ಆ ಸವಾಲನ್ನು ಮೀರುವಂತಾಯಿರು ಎಂದಿದ್ದಾರೆ.
Recommended Video
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications