ಶಬರಿಮಲೆ ಅಯ್ಯಪ್ಪ ಸ್ವಾಮಿ: ತಿರುವಾಭರಣಂ ಮೆರವಣಿಗೆ ಆರಂಭ
ತಿರುವನಂತಪುರಂ, ಜನವರಿ 12: ಶಬರಿಮಲೆ ಸ್ವಾಮಿ ಅಯ್ಯಪ್ಪನ ಸನ್ನಿಧಿಯಲ್ಲಿ ಮಕರ ಸಂಕ್ರಾಂತಿಯ ಹಬ್ಬದ ಸಂಭ್ರಮ ಕಳೆಗಟ್ಟುತ್ತಿದೆ. ಕೊರೊನಾ ವೈರಸ್ ಸೋಂಕು ತಡೆಯುವ ನಿರ್ಬಂಧಗಳ ಹಿನ್ನೆಲೆಯಲ್ಲಿ ಈ ಹಿಂದೆಯಂತೆ ಸಂಭ್ರಮಾಚರಣೆಗಳು ವೈಭವದಿಂದ ನಡೆಯುತ್ತಿಲ್ಲ. ಭಕ್ತರ ಗೈರು ಹಾಗೂ ಮಾರ್ಗಸೂಚಿಗಳಿಗೆ ಅನುಗುಣವಾಗಿ ಎಲ್ಲ ಸಂಪ್ರದಾಯಗಳನ್ನು ಪಾಲಿಸಲಾಗುತ್ತಿದೆ.
ಮಕರವಿಳಕ್ಕು ಆಚರಣೆಗೆ ಸ್ವಾಮಿ ಅಯ್ಯಪ್ಪನನ್ನು ಅಲಂಕರಿಸುವ ಪವಿತ್ರ ಆಭರಣ ತಿರುವಾಭರಣಂ ಅನ್ನು ಕೊಂಡೊಯ್ಯುವ ಮೆರವಣಿಗೆ ಮಂಗಳವಾರ ಆರಂಭವಾಗಿದೆ. ಪಂಡಲಂ ವಲಿಯಾಕೊಯಿಕ್ಕಲ್ ಧರ್ಮಸಾಸ್ಥ ದೇವಾಲಯದಿಂದ ಈ ಮೆರವಣಿಗೆ ಶುರುವಾಗಿದೆ. ಇದು ಜನವರಿ 14ರ ಮಕರವಿಳಕ್ಕು ದಿನದಂದು ಶಬರಿಮಲೆಗೆ ಸಂಜೆ ಆರು ಗಂಟೆಗೆ ತಲುಪಲಿದೆ. ಈ ಬಾರಿ ಕೋವಿಡ್ ಶಿಷ್ಟಾಚಾರಗಳಿಗೆ ಅನುಗುಣವಾಗಿ ಮೆರವಣಿಗೆಯನ್ನು ಆಯೋಜಿಸಲಾಗಿದೆ.
ಈ ಹಿಂದಿನ ವರ್ಷಗಳಲ್ಲಿ ಶ್ರೀಗಂಧದ ಪೆಟ್ಟಿಗೆಗಳಲ್ಲಿ ತಿರುವಾಭರಣಂಅನ್ನು ಬೆಳಗಿನ ಜಾವ 11 ಗಂಟೆಗೆ ಸಾಗಿಸಲಾಗುತ್ತಿತ್ತು. ಈ ಬಾರಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೋಂಕು ನಿವಾರಕಗಳನ್ನು ಸಿಂಪಡಿಸಬೇಕಿರುವುದರಿಂದ ಬೆಳಿಗ್ಗೆ 11.45ರ ಸುಮಾರಿಗೆ ತಿರುವಾಭರಣಂ ಮೆರವಣಿಗೆ ಆರಂಭವಾಯಿತು.

85 ವರ್ಷದ ಕುಳತಿನಲ್ ಗಗಾಧರನ್ ಪಿಳ್ಳೈ ಅವರು ತಿರುವಾಭರಣಗಳನ್ನು ಸಾಗಿಸಿದರು. ಇದು ಅವರ 65ನೇ ವರ್ಷದ ಪಯಣವಾಗಿದೆ.
ಅಂಬಳಪುಳ ಮತ್ತು ಅಳಂಗದ ತಂಡಗಳಿಂದ ಸೋಮವಾರ ಎರುಮೇಲಿಯ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ವಾರ್ಷಿಕ ಪೆಟ್ಟಾ ತುಳ್ಳಾಲ್ ಆಚರಣೆ ನಡೆಯಿತು. ಎರಡೂ ತಂಡಗಳಿಂದ ತಲಾ ಸುಮಾರು 50 ಭಕ್ತರು ತಮ್ಮ ದೇಹದ ಮೇಲೆ ಗುಲಾಬಿ ಹಾಗೂ ಹಸಿರು ಬಣ್ಣಗಳನ್ನು ಹಚ್ಚಿಕೊಂಡು ನರ್ತಿಸಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications