ಸಂಕ್ರಾತಿ ಸಂಭ್ರಮದ ನಡುವೆ ಭಣಗುಡುತ್ತಿದೆ ಶಬರಿಮಲೆ
ತಿರುವನಂತಪುರಂ, ಜನವರಿ 13: ಶಬರಿಮಲೆ ಸ್ವಾಮಿ ಅಯ್ಯಪ್ಪನ ಸನ್ನಿಧಿಯಲ್ಲಿ ಅತ್ಯಂತ ಮಹತ್ವದ ಗಳಿಗೆಗೆ ಕ್ಷಣಗಣನೆ ಆರಂಭವಾಗಿದೆ. ಮಕರ ಸಂಕ್ರಾಂತಿ ದಿನವಾದ ಗುರುವಾರ ಪವಿತ್ರ ಮಕರ ಜ್ಯೋತಿ ದರ್ಶನ ಹಾಗೂ ಅಯ್ಯಪ್ಪ ಸ್ವಾಮಿಯ ವಿಶೇಷ ಪೂಜೆಯ ಸಂಪ್ರದಾಯಗಳನ್ನು ಕಾಣಲು ಭಕ್ತರು ಕಾತರದಿಂದ ಕಾದಿದ್ದರು. ಆದರೆ ಈ ಬಾರಿ ಅವರ ಉತ್ಸಾಹ ಮತ್ತು ಬಯಕೆಗಳನ್ನು ಕೋವಿಡ್ 19 ಕಿತ್ತುಕೊಂಡಿದೆ.
ಪ್ರತಿ ವರ್ಷ ಮಕರ ಸಂಕ್ರಮಣ ಸಂದರ್ಭದಲ್ಲಿ ಶಬರಿಮಲೆಯ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚುತ್ತಿತ್ತು. ಆದರೆ ಈ ಬಾರಿ ಶಬರಿಮಲೆ ಭಾಗಶಃ ಭಣಗುಡುತ್ತಿದೆ. ಬೆರಳೆಣಿಕೆಯಷ್ಟು ಭಕ್ತರು ಹಾಗೂ ಪೊಲೀಸರು ಮತ್ತು ದೇವಾಲಯದ ಸಿಬ್ಬಂದಿಯ ಸಮ್ಮುಖದಲ್ಲಿ ಪೂಜೆ ಹಾಗೂ ಇತರೆ ಆಚರಣೆಗಳು ನಡೆಯುತ್ತಿವೆ.
ಮಂಡಲಂ ದೇವಾಲಯದಿಂದ ಮೆರವಣಿಗೆ ಹೊರಟ ತಿರುವಾಭರಣಂ ಮೂರು ದಿನಗಳ ಬಳಿಕ ನಾಳೆ ಸಂಜೆ ಶಬರಿಮಲೆಯ ಪವಿತ್ರ ಸನ್ನಿಧಿಗೆ ತಲುಪಲಿದೆ. ಕೋವಿಡ್ ಶಿಷ್ಟಾಚಾರಗಳಿಗೆ ಅನುಗುಣವಾಗಿ ವಿಧಿ ವಿಧಾನಗಳು ಜರುಗುತ್ತಿವೆ. ಆರ್ಟಿ-ಪಿಸಿಆರ್ ಪರೀಕ್ಷೆಯಲ್ಲಿ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಹೊಂದಿರುವ ಭಕ್ತರಿಗೆ ಮಾತ್ರವೇ ಪ್ರವೇಶ ನೀಡಲಾಗುತ್ತಿದೆ.

ವಿಶೇಷ ಅಧಿಕಾರಿ ಅಜಿತ್ ಕುಮಾರ್ ಮೇಲ್ವಿಚಾರಣೆಯಲ್ಲಿ 15 ಸದಸ್ಯರ ದೇವಸ್ವಂ ತಂಡ ತಿರುವಾಭರಣಂ ಮೆರವಣಿಗೆ ನಿರ್ವಹಿಸುತ್ತಿದೆ. ಬುಧವಾರ ಈ ಮೆರವಣಿಗೆಯು ಬೆಳಿಗ್ಗೆ 4 ಗಂಟೆಗೆ ಅಯ್ರೂರ್ ದೇವಾಲಯದಿಂದ ಹೊರಟು ಎಡಪ್ಪವೂರ್ ದೇವಿ ದೇವಸ್ಥಾನ, ವಡಸ್ಸೆರಿಕರ ಪ್ರಯಾರ್ ಶ್ರೀ ಮಹಾವಿಷ್ಣು ದೇವಸ್ಥಾನ, ಮಡಮೊನ್ ರಿಶಿಕೆಶಾ ದೇವಸ್ಥಾನ ಮತ್ತು ರನ್ನಿ ಪೆರುನಾಡ್ ಶ್ರೀ ಧರ್ಮ ಸಸ್ಥಾ ದೇವಸ್ಥಾನಗಳನ್ನು ತಲುಪಲಿದೆ.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications