Get Updates
Get notified of breaking news, exclusive insights, and must-see stories!

ರಾಷ್ಟ್ರಪತಿಗೆ ಕೊಲೆ ಬೆದರಿಕೆ, ಕೇರಳದ ಅರ್ಚಕನ ಬಂಧನ

ತಿರುವನಂತಪುರ, ಆಗಸ್ಟ್‌ 06: ರಾಷ್ಟ್ರಪತಿ ರಾಮನಾಥ ಕೊವಿಂದ್ ಅವರನ್ನು ಕೊಲ್ಲುತ್ತೇನೆ ಎಂದು ಪೊಲೀಸರಿಗೇ ಕರೆ ಮಾಡಿ ಬೆದರಿಕೆ ಒಡ್ಡಿದ್ದ ವ್ಯಕ್ತಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ಕೇರಳ ಪೊಲೀಸ್ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿದ ವ್ಯಕ್ತಿ ಕೇರಳದ ತ್ರಿಶೂರ್‌ನ ಚಿರಕ್ಕಲ್ ಭಗವತಿ ದೇವಸ್ಥಾನದ ಅರ್ಚಕ ಜಯರಾಮ್‌ ಎಂದು ತಿಳಿದು ಬಂದಿದ್ದು, ಆತ ಕರೆ ಮಾಡಿದ ಮದ್ಯದ ಮತ್ತಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪ್ರಸ್ತುತ ಕೇರಳ ರಾಜ್ಯ ಪ್ರವಾಸದಲ್ಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುತಿದ್ದಾರೆ. ಸೋಮವಾರ ಅವರು ಸೈಂಟ್ ಥಾಮಸ್ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

Threat call to Kerala police about killing Ram Nath Kovind

ಸಹಾಯವಾಣಿಗೆ ಕರೆ ಮಾಡಿದ್ದ ಅರ್ಚಕ ಜಯರಾಮ್‌, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಒಡ್ಡುವ ಜೊತೆಗೆ ಸೈಂಟ್ ಥಾಮಸ್ ಕಾಲೇಜಿಗೆ ಬಾಂಬ್ ಹಾಕುವುದಾಗಿಯೂ ಬೆದರಿಕೆ ಹಾಕಿದ್ದ.

ಕರೆ ಆಧರಿಸಿ ಕಾರ್ಯಾಚಾರಣೆ ನಡೆಸಿದ ಕೇರಳ ಪೊಲೀಸರು ಕೆಲವೇ ಹೊತ್ತಿನಲ್ಲಿ ಬೆದರಿಕೆ ಒಡ್ಡಿದ ವ್ಯಕ್ತಿಯನ್ನು ಬಂಧಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+