ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರಪತಿಗೆ ಕೊಲೆ ಬೆದರಿಕೆ, ಕೇರಳದ ಅರ್ಚಕನ ಬಂಧನ

By Manjunatha
|
Google Oneindia Kannada News

ತಿರುವನಂತಪುರ, ಆಗಸ್ಟ್‌ 06: ರಾಷ್ಟ್ರಪತಿ ರಾಮನಾಥ ಕೊವಿಂದ್ ಅವರನ್ನು ಕೊಲ್ಲುತ್ತೇನೆ ಎಂದು ಪೊಲೀಸರಿಗೇ ಕರೆ ಮಾಡಿ ಬೆದರಿಕೆ ಒಡ್ಡಿದ್ದ ವ್ಯಕ್ತಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ಕೇರಳ ಪೊಲೀಸ್ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿದ ವ್ಯಕ್ತಿ ಕೇರಳದ ತ್ರಿಶೂರ್‌ನ ಚಿರಕ್ಕಲ್ ಭಗವತಿ ದೇವಸ್ಥಾನದ ಅರ್ಚಕ ಜಯರಾಮ್‌ ಎಂದು ತಿಳಿದು ಬಂದಿದ್ದು, ಆತ ಕರೆ ಮಾಡಿದ ಮದ್ಯದ ಮತ್ತಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳದಲ್ಲಿ ಸಿಪಿಐಎಂ ಕಾರ್ಯಕರ್ತನ ಹತ್ಯೆ: ಬಿಜೆಪಿ ಕೈವಾಡ ಶಂಕೆಕೇರಳದಲ್ಲಿ ಸಿಪಿಐಎಂ ಕಾರ್ಯಕರ್ತನ ಹತ್ಯೆ: ಬಿಜೆಪಿ ಕೈವಾಡ ಶಂಕೆ

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪ್ರಸ್ತುತ ಕೇರಳ ರಾಜ್ಯ ಪ್ರವಾಸದಲ್ಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುತಿದ್ದಾರೆ. ಸೋಮವಾರ ಅವರು ಸೈಂಟ್ ಥಾಮಸ್ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

Threat call to Kerala police about killing Ram Nath Kovind

ಸಹಾಯವಾಣಿಗೆ ಕರೆ ಮಾಡಿದ್ದ ಅರ್ಚಕ ಜಯರಾಮ್‌, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಒಡ್ಡುವ ಜೊತೆಗೆ ಸೈಂಟ್ ಥಾಮಸ್ ಕಾಲೇಜಿಗೆ ಬಾಂಬ್ ಹಾಕುವುದಾಗಿಯೂ ಬೆದರಿಕೆ ಹಾಕಿದ್ದ.

ಕರೆ ಆಧರಿಸಿ ಕಾರ್ಯಾಚಾರಣೆ ನಡೆಸಿದ ಕೇರಳ ಪೊಲೀಸರು ಕೆಲವೇ ಹೊತ್ತಿನಲ್ಲಿ ಬೆದರಿಕೆ ಒಡ್ಡಿದ ವ್ಯಕ್ತಿಯನ್ನು ಬಂಧಿಸಿದ್ದಾರೆ.

English summary
Threat call received by Kerala police about killing president Ram Nath Kovind. Kerala police arrested Jayaraman, a priest of Chirakkal Bhagavathi temple, Thrissur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X