ದೇವರನ್ನು ಭೇಟಿಯಾಗಲು ಕಲ್ಯಾಣಿಯಿಂದ ದೇವಸ್ಥಾನದೊಳಗೆ ಬಂದ ಮೊಸಳೆ
ತಿರುವನಂತಪುರಂ, ಅಕ್ಟೋಬರ್ 22: ಮೊಸಳೆಯೊಂದು ದೇವರನ್ನು ಭೇಟಿಯಾಗಲು ದೇಗುಲದ ಪ್ರಾಂಗಣಕ್ಕೆ ಬಂದಿರುವ ಫೋಟೊ ಇದೀಗ ವೈರಲ್ ಆಗಿದೆ.
ಇದು ಕರ್ನಾಟಕ, ಕೇರಳದ ಗಡಿಭಾಗದ ಕಾಸರಗೋಡು ಜಿಲ್ಲೆಯ ಕುಂಬಳೆಯರುವ ಅನಂತಪುರ ಕ್ಷೇತ್ರ. ಅನಂತಪುರದ ಅನಂತಪದ್ಮನಾಭ ದೇಗುಲ ಕೆರೆಯ ನಡುವೆ ನಿರ್ಮಾಣವಾಗಿದೆ.
ತಿರುವನಂತಪುರಂನಲ್ಲಿರುವ ಅನಂತಪದ್ಮನಾಭ ಸ್ವಾಮಿಯ ಮೂಲ ಕ್ಷೇತ್ರ ಇದು ಎಂಬ ನಂಬಿಕೆಯೂ ಇದೆ. ಹೀಗೆ ತನ್ನ ಖ್ಯಾತಿಯಿಂದಲೇ ಭಕ್ತರನ್ನು ಹೊಂದಿರುವ ಈ ಪವಿತ್ರ ದೇವ ಸನ್ನಿಧಿ ಸಸ್ಯಾಹಾರಿ ಮೊಸಳೆಯ ಕಾರಣದಿಂದಲೂ ಎಲ್ಲರ ಗಮನ ಸೆಳೆದಿದೆ. ಅದರ ಹೆಸರೇ ಬಬಿಯಾ.

ಇಷ್ಟು ದಿನ ದೇಗುಲದ ಕಲ್ಯಾಣಿಯಲ್ಲಿ ಇರುತ್ತಿದ್ದ ಬಬಿಯಾ ಇದೇ ಮೊದಲ ಬಾರಿಗೆ ದೇಗುಲದ ಒಳಗೆ ಬಂದಿದೆ. ಇದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಅಲ್ಲದೆ, ಬಬಿಯಾ ದೇಗುಲದ ಆವರಣದೊಳಗೆ ಬಂದಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಈ ಮೊಸಳೆ ಸುಮಾರು 70 ವರ್ಷಗಳಿಂದ ಇದೇ ಕೊಳದಲ್ಲಿದೆ ಎಂಬ ನಂಬಿಕೆ ಇದೆ. ಅದೂ ಅಲ್ಲದೆ, ಬಬಿಯಾನಿಂದ ಇದುವರೆಗೆ ಯಾರೂ ತೊಂದರೆಗೊಳಗಾದ ಉದಾಹರಣೆಯೇ ಇಲ್ಲ. ದೇವರಿಗೆ ಅರ್ಪಿಸಿದ ನೈವೇದ್ಯವನ್ನೇ ತಿಂದು ಇದು ಕೂಡಾ ಬದುಕುತ್ತಿದೆ.
ದೇವಸ್ಥಾನದ ಪ್ರಾಂಗಣದೊಳಗೆ ಬಂದ ಬಬಿಯಾ ಒಂದಷ್ಟು ಹೊತ್ತು ಇಲ್ಲೇ ಕಳೆದಿತ್ತು. ಬಳಿಕ ದೇಗುಲದ ಪ್ರಧಾನ ಅರ್ಚಕ ಚಂದ್ರಪ್ರಕಾಶ್ ನಂಬಿಸನ್ ತನ್ನ ಶಾಶ್ವತ ಆವಾಸಸ್ಥಾನಕ್ಕೆ ಹೋಗುವಂತೆ ಕೇಳಿಕೊಂಡ ಬಳಿಕ ಇದು ಕೊಳಕ್ಕೆ ಹಿಂತಿರುಗಿದೆ' ಎಂದು ದೇವಾಲಯದ ಅಧಿಕಾರಿ ಚಂದ್ರಶೇಖರನ್ ಹೆಚ್.ಟಿ. ಹೇಳಿದ್ದಾಗಿ ಪ್ರಮುಖ ಮಾಧ್ಯಮವೊಂದು ವರದಿ ಮಾಡಿದೆ.
ಬಬಿಯಾ ಸಸ್ಯಾಹಾರಿ ಮೊಸಳೆ ಎಂದೇ ಪ್ರಖ್ಯಾತ. ಈ ಮೊಸಳೆ ಕೊಳಕ್ಕೆ ಹೇಗೆ ಬಂತು. ಇದಕ್ಕೆ ಬಬಿಯಾ ಎಂದು ಹೆಸರಿಟ್ಟವರು ಯಾರು ಎಂಬುದು ಯಾರಿಗೂ ತಿಳಿದಿಲ್ಲ. ಆದರೆ ಪ್ರಧಾನ ಅರ್ಚಕರ ಮಾತು ಕೇಳಿ ಅದು ಹಿಂದುರುಗಿ ಹೋಗಿರುವುದು ಸತ್ಯದ ಸಂಗತಿ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications