ವಿಡಿಯೋ: ಫೋಟೋಶೂಟ್ಗಾಗಿ ಗುಂಡಿ ಬಿದ್ದ ರಸ್ತೆಯಲ್ಲಿ ನಡೆದಾಡಿದ ಕೇರಳದ ವಧು
ಮದುವೆ ಜೀವನದಲ್ಲಿ ಮರೆಯಲಾಗದ ಸಂಭ್ರಮ. ಇದನ್ನು ಹೆಚ್ಚು ಸ್ಮರಣೀಯ ದಿನವನ್ನಾಗಿ ಮಾಡಲು ಪ್ರಯತ್ನಿಸುವವರು ಸದ್ಯ ಹೆಚ್ಚಾಗಿದ್ದಾರೆ. ಅದರಲ್ಲೂ ವಿಭಿನ್ನವಾಗಿ ಫೋಟೋ ಶೂಟ್ ಮಾಡೋದು ಅಂದರೆ ಈಗಿನ ಟ್ರೆಂಡ್ ಆಗಿದೆ. ಮದುವೆ ಫೋಟೋ ಶೂಟ್ಗಾಗಿ ಹಲವಾರು ಪ್ರವಾಸಿ ತಾಣಗಳು, ರೆಸಾರ್ಟ್, ರೆಸ್ಟೋರೆಂಟ್, ಫಾಲ್ಸ್ ಹೀಗೆ ಹಲವಾರು ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ ಇಲ್ಲೊಂದು ಫೋಟೋ ಶೂಟ್ಗಾಗಿ ಆಯ್ಕೆ ಮಾಡಿಕೊಂಡ ಸ್ಥಳ ತುಂಬಾನೇ ವಿಭಿನ್ನವಾಗಿದೆ.
ಕೇರಳದ ವಧುಯೊಬ್ಬರು ತಮ್ಮ ಮದುವೆಯ ಚಿತ್ರೀಕರಣವನ್ನು ಸ್ಮರಣೀಯವಾಗಿಸಲು ಗುಂಡಿಗಳ ಸಮಸ್ಯೆಯನ್ನು ಹೈಲೈಟ್ ಮಾಡಿದ್ದಾರೆ. ವಧು ಮತ್ತು ವಿವಾಹದ ಛಾಯಾಗ್ರಾಹಕರನ್ನು ಒಳಗೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೆಂಪು ಸೀರೆ ಉಟ್ಟ ವಧು ಗುಂಡಿಗಳಿಂದ ಕೂಡಿದ ರಸ್ತೆಯಲ್ಲಿ ನಡೆಯುತ್ತಿರುವುದು ವಿಡಿಯೋದಲ್ಲಿದೆ.
ವಿಡಿಯೊದಲ್ಲಿ, ವಧು ಸಂಪೂರ್ಣವಾಗಿ ಕೆಸರು ನೀರಿನಿಂದ ತುಂಬಿದ ದೊಡ್ಡ ಗುಂಡಿಯ ಉದ್ದಕ್ಕೂ ನಡೆದುಕೊಂಡು ಬರುತ್ತಾರೆ. ಬೀಳದಂತೆ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಹೆಣಗಾಡುತ್ತಿರುವಾಗ ವಾಹನಗಳು ಹಾದುಹೋಗುವುದನ್ನು ಕ್ಲಿಪ್ ತೋರಿಸುತ್ತದೆ. ಒಬ್ಬ ಛಾಯಾಗ್ರಾಹಕ ವಧುವಿನ ಚಿತ್ರಗಳನ್ನು ದೂರದಿಂದ ಸೆರೆಹಿಡಿಯುತ್ತಿರುವುದು ಕಂಡುಬರುತ್ತದೆ.

ವಿಡಿಯೊವನ್ನು ಇಲ್ಲಿ ಪರಿಶೀಲಿಸಿ:
ಚಿತ್ರಗಳು ಮತ್ತು ವಿಡಿಯೊವನ್ನು Instagram ಹ್ಯಾಂಡಲ್ Arrow_weddingcompany ಪೋಸ್ಟ್ ಮಾಡಿದೆ. ವಿಡಿಯೋ ಜೊತೆಗೆ, "ರಸ್ತೆಯ ಮಧ್ಯದಲ್ಲಿ ವಧುವಿನ ಫೋಟೋಶೂಟ್" ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ. ವಿಡಿಯೊವನ್ನು ಸೆಪ್ಟೆಂಬರ್ 11 ರಂದು ಹಂಚಿಕೊಳ್ಳಲಾಗಿದೆ ಮತ್ತು ಇದುವರೆಗೆ ಈ ಕ್ಲಿಪ್ 4.3 ಮಿಲಿಯನ್ ವೀಕ್ಷಣೆಗಳನ್ನು ಮತ್ತು 37,0400 ಲೈಕ್ಗಳನ್ನು ಸಂಗ್ರಹಿಸಿದೆ.
ವಧುವಿನ ಸೃಜನಶೀಲತೆಯಿಂದ ಇಂಟರ್ನೆಟ್ ಪ್ರಭಾವಿತವಾಗಿದೆ. ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಕೇರಳದ ರಸ್ತೆ ಪರಿಸ್ಥಿತಿಗಳನ್ನು ಗೇಲಿ ಮಾಡಿದ್ದಾರೆ. ಸಾಕಷ್ಟು ಕಾಮೆಂಟ್ಗಳನ್ನು ಮಾಡಿದ್ದಾರೆ.

ಇನ್ನೊಬ್ಬ ಬಳಕೆದಾರರು "ಇದು ರಸ್ತೆಯಲ್ಲ ಕೊಳ" ಎಂದು ಬರೆದಿದ್ದಾರೆ. ಮತ್ತೊಂದು ಕಾಮೆಂಟ್ ನಲ್ಲಿ "ಇದು ನೈಸ್ ರೋಡ್" ಎಂದು ಗೇಲಿ ಮಾಡಲಾಗಿದೆ. "ಇದು ರಸ್ತೆಯೇ? ನೀವು ಕೆಲವು ಮರಿ ಮೀನುಗಳನ್ನು ಖರೀದಿಸಿದರೆ, ನೀವು ಮೀನು ಸಾಕಾಣಿಕೆಯನ್ನು ಪ್ರಾರಂಭಿಸಬಹುದು" ಎಂದು ಮೂರನೇ ಕಾಮೆಂಟ್ನಲ್ಲಿ ಗುಂಡಿ ರಸ್ತೆಗಳ ಬಗ್ಗೆ ಅಪಹಾಸ್ಯ ಮಾಡಲಾಗಿದೆ.
ಆಗಸ್ಟ್ 9 ರಂದು ಕೇರಳ ಹೈಕೋರ್ಟ್ ಸೋಮವಾರ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ತಮ್ಮ ನಿಯಂತ್ರಣದಲ್ಲಿರುವ ಪ್ರತಿಯೊಂದು ರಸ್ತೆಯನ್ನು ಪ್ರಸ್ತುತ ರಿಯಾಯಿತಿದಾರರ ಮೂಲಕ ಅಥವಾ ಹೊಸ ಗುತ್ತಿಗೆದಾರರ ಮೂಲಕ ಸರಿಪಡಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿತು. ಅದನ್ನು ಯಾವುದೇ ವಿಳಂಬವಿಲ್ಲದೆ ಮಾಡಬೇಕು ಎಂದು ಆದೇಶಿಸಿತ್ತು. ರಾಷ್ಟ್ರೀಯ ಹೆದ್ದಾರಿಯ ಗುಂಡಿಗೆ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಮಿಕಸ್ ಕ್ಯೂರಿ ನ್ಯಾಯಾಲಯದ ಗಮನಕ್ಕೆ ತಂದ ನಂತರ ರಿಟ್ ಅರ್ಜಿಗಳನ್ನು ಕೈಗೆತ್ತಿಕೊಳ್ಳಲಾಯಿತು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications