ಸಾಯಲೆಂದು ಟವರ್ ಏರಿದವಳ ಜೀವ ಉಳಿಸಿದ ಕಣಜ ಹುಳು
ಅಲಪ್ಪುಳ, ಮೇ 10: ಮೊಬೈಲ್ ಟವರ್ ಏರಿ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸುತ್ತಿದ್ದ ಮಹಿಳೆಯೊಬ್ಬಳು ಕಣಜಗಳಿಗೆ ಹೆದರಿ ಕೆಳಗಿಳಿದು ಜೀವ ಉಳಿಸಿದ ಘಟನೆ ಕೇರಳ ರಾಜ್ಯದ ಅಲಪ್ಪುಳ ಜಿಲ್ಲೆಯ ಕೈಯಂಕುಳಂ (Kayamkulam) ಪಟ್ಟಣದಲ್ಲಿ ನಡೆದಿದೆ. ಸ್ಥಳೀಯ ಟಿವಿ ಚಾನಲ್ಗಳ ಕ್ಯಾಮೆರಾ ಕಣ್ಣಿಗೆ ಸೆರೆಯಾದ ಈ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದೆ.
ನಿನ್ನೆ ಸೋಮವಾರ ಈ ಘಟನೆ ನಡೆದಿದೆ. ತನ್ನ ಮಗು ಗಂಡನ ಬಳಿ ಇದೆ. ಅದನ್ನು ತನಗೆ ಒಪ್ಪಿಸಬೇಕು ಎಂಬುದು ತಮಿಳುನಾಡು ಮೂಲದ ಈ ಮಹಿಳೆಯ ಬೇಡಿಕೆ. ತನಗೆ ಮಗು ಸಿಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಆಕೆ ಬಿಎಸ್ಎನ್ಎಲ್ ಮೊಬೈಲ್ ಟವರ್ ಹತ್ತತೊಡಗುತ್ತಾಳೆ.
ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಆಕೆಯನ್ನು ರಕ್ಷಿಸಲು ಪ್ರಯತ್ನಿಸುತ್ತಾರೆ. ಕೆಳಗಿಳಿಯುವಂತೆ ಆಕೆಗೆ ಮನವೊಲಿಸಲು ಯತ್ನಿಸುತ್ತಾರೆ. ಆದರೂ ಆಕೆ ಕೇಳದೇ ತನ್ನ ಪಾಡಿಗೆ ತಾನು ಟವರ್ ತುದಿತ್ತ ಹತ್ತುತ್ತಾ ಹೋಗುತ್ತಿರುತ್ತಾಳೆ.

ಕಣಜ ಹುಳುಗಳ ಸ್ವಾಗತ:
ಸಿಟ್ಟಿನ ಭರದಲ್ಲಿ ಮೊಬೈಲ್ ಟವರ್ ಹತ್ತುತ್ತಿದ್ದ ಆ ಮಹಿಳೆ ಆಕಸ್ಮಿಕವಾಗಿ ಕಣಜ ಹುಳುಗಳ ಗೂಡನ್ನ (Wasp Net) ಕೆದಕಿಬಿಡುತ್ತಾಳೆ. ರೊಚ್ಚಿಗೆದ್ದ ಕಣಜಗಳು ಆಕೆಯ ಮೇಲೆ ಮುತ್ತಗೆ ಹಾಕಿ ಕಚ್ಚಿವೆ.
ದಿಢೀರ್ ಆಗಿ ಕಣಜಗಳ ದಾಳಿಯಿಂದ ಆ ಮಹಿಳೆಗೆ ಬೆವರಿಳಿಯುತ್ತದೆ. ಸಾಯುತ್ತೇನೆಂದು ಬೆದರಿಕೆ ಹಾಕಲು ಮೇಲೆ ಹತ್ತಿದ ಮಹಿಳೆ ಕಣಜಗಳ ದಾಳಿಯಿಂದ ಭಯಗೊಂಡು ಜೀವ ಉಳಿಸಿಕೊಳ್ಳಲು ಕೆಳಗೆ ಇಳಿಯತೊಡುತ್ತಾಳೆ. ಸರಸರನೆ ಕೆಳಗಿಳಿದ ಈಕೆ ಇನ್ನೂ ಕೆಲ ಅಡಿ ಎತ್ತರದಲ್ಲಿರುವಾಗಲೇ ಕೆಳಗೆ ಹಾರುತ್ತಾಳೆ. ಕೆಳಗೆ ಸುರಕ್ಷತೆಗೆಂದು ಹಾಕಲಾಗಿದ್ದ ಬಲೆಯಿಂದಾಗಿ ಆಕೆಗೆ ಸಣ್ಣಪುಟ್ಟ ಗಾಯ ಮಾತ್ರ ಆಗಿದೆ.

ನಂತರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಘಟನೆಯ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು, ಈ ಕಣಜಗಳು ದಾಳಿ ಮಾಡದೇ ಇದ್ದಿದ್ದರೆ ಆ ಮಹಿಳೆ ಕೆಳಗಿಳಿದು ಬರುತ್ತಿರಲಿಲ್ಲವೇನೋ ಎಂದು ಅನುಮಾನ ವ್ಯಕ್ತಡಿಸುತ್ತಾರೆ.
(ಒನ್ಇಂಡಿಯಾ ಸುದ್ದಿ)
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications