ರಾಹುಲ್ ಗಾಂಧಿ ವಿರುದ್ಧ ಬಿತ್ತು ಮತ್ತೊಂದು ಕಂಪ್ಲೇಂಟ್, ಈ ಬಾರಿ ವಯನಾಡಿನಲ್ಲಿ!
Recommended Video
ತಿರುವನಂತಪುರಂ, ಏಪ್ರಿಲ್ 23 : 'ಚೌಕಿದಾರ್ ಚೋರ್ ಹೈ' ಎಂದು ಸುಪ್ರೀಂ ಕೋರ್ಟೇ ಹೇಳಿದೆ ಎಂದು ಹೇಳಿಕೆ ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟಿನಿಂದಲೇ ನೋಟೀಸ್ ಪಡೆದುಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಮತದಾನದ ದಿನದಂದೇ ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿರುವುದರ ವಿರುದ್ಧ ವಯನಾಡಿನಿಂದ ಸ್ಪರ್ಧಿಸುತ್ತಿರುವ ಎನ್ಡಿಎದ ಅಭ್ಯರ್ಥಿ ತುಷಾರ್ ವೆಲ್ಲಪಲ್ಲಿ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
"ಭಾರತದಾದ್ಯಂತ ಕೋಟ್ಯಂತರ ಯುವಜನತೆ ಹೊರಬಂದು ಮತ ಚಲಾಯಿಸುತ್ತಿದ್ದಾರೆ. ಇವರಲ್ಲಿ ಹಲವರು ಮೊದಲ ಬಾರಿ ಮತ ನೀಡುತ್ತಿದ್ದಾರೆ. ಭಾರತದ ಭವಿಷ್ಯ ಇವರ ಕೈಯಲ್ಲಿದೆ. ಪ್ರತಿ ಭಾರತೀಯನಿಗೆ 'ನ್ಯಾಯ್' ಬೇಕಾಗಿದೆ, ಅವರು ಜಾಣತನದಿಂದ ಮತ ಚಲಾಯಿಸಲಿದ್ದಾರೆ" ಎಂದು ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿದ್ದರು.

ಮತದಾನ ನಡೆಯುತ್ತಿರುವಾಗಲೇ ರಾಹುಲ್ ಗಾಂಧಿ ಅವರು ತಮ್ಮ ಪರವಾಗಿ ಮತ ಗಳಿಸಲೆಂದೇ ಟ್ವಿಟ್ಟರ್ ನಲ್ಲಿ ಖುಲ್ಲಂಖುಲ್ಲಾ ಪ್ರಚಾರ ಮಾಡಿ, ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಏಪ್ರಿಲ್ 21ರಂದೇ ಪ್ರಚಾರ ಮುಕ್ತಾಯವಾಗಿದ್ದರೂ ಅವರು ಪ್ರಚಾರ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಅವರ ಬಳಿ ವಿದೇಶಿ ಪಾರ್ಸೋರ್ಟ್ ಇದ್ದು, ಅವರು ನಾಮಪತ್ರವನ್ನು ಮರುಪರಿಶೀಲಿಸಬೇಕು ಎಂದು ತುಷಾರ್ ವೆಲ್ಲಪಲ್ಲಿ ಅವರು ಕೆಲ ದಿನಗಳ ಹಿಂದೆ ದೂರು ನೀಡಿದ್ದರು. ಆದರೆ, ರಾಹುಲ್ ಗಾಂಧಿ ಅವರ ನಾಮಪತ್ರ ಸಿಂಧುವಾಗಿದೆ ಎಂದು ಚುನಾವಣಾಧಿಕಾರಿ ಈಗಾಗಲೆ ತಿಳಿಸಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications